Showing 20 of 20476 articles • Page 222 of 1024
ರಿವರ್ಸ್ ತೆಗೆಯುವ ವೇಳೆ ಚಾಲಕ ನಿಯಂತ್ರಣದ ತಪ್ಪಿದ ಕಾರೊಂದು ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ಉಡುಪಿ ಜಾಮೀಯಾ ಮಸೀದಿ ಸಮೀಪದ ಐರೋಡಿ ಬಿಲ್ಡಿಂಗ್ ಬಳಿ ಸಂಭವಿಸಿದೆ.
ಮಂಗಳೂರು ಮೂಲದ ದುಬೈನಲ್ಲಿ ನೆಲೆಸಿರುವ ಕುಟುಂಬದ ಕುಡಿ, 11ರ ಹರೆಯದ ಪೋರ ಪರ್ವತಾರೋಹಣದಲ್ಲಿ ಜಗತ್ತಿನ ಗಮನ ಸೆಳೆದಿದ್ದಾನೆ. ತನ್ನ ಎಂಟನೇ ವಯಸ್ಸಿನಲ್ಲಿ ಆಫ್ರಿಕಾದ ಅತಿ ಎತ್ತರದ ಪರ್ವತ ತಾಂಜಾನಿಯಾದ ಕಿಲಿಮಂಜಾರೋ ಹತ್ತಿ ದಾಖಲೆ ಮಾಡಿದ್ದ ಅಯಾನ್ ಮೆಂಡನ್, ಇದೀಗ ಜಗತ್ತಿನ ಮೂರನೇ ಅತಿ ಎತ್ತರದ ಕೆನ್ಯಾದಲ್ಲಿರುವ ಮೌಂಟ್ ಕೆನ್ಯಾ ಪರ್ವತವನ್ನು ಏರುವ ಮೂಲಕ ಸಾಧನೆ ಮಾಡಿದ್ದಾನೆ.
ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆ್ಯಪ್ ಆಧಾರಿತ ಟ್ಯಾಕ್ಸಿ ಚಾಲಕರಿಗೆ ಆಗುವ ಅನ್ಯಾಯ, ದೌರ್ಜನ್ಯ ಮತ್ತು ಇತರ ಸಮಸ್ಯೆಗಳ ಬಗ್ಗೆ ಸಂಘಟಕರಾದ ಇಮ್ತಿಯಾಜ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನ ನೀಡಿದರು.
ಕಳೆದ 13 ವರ್ಷಗಳಿಂದ ರಾಜಕೇಸರಿ ಸೇವಾ ಟ್ರಸ್ಟ್ ಸಾಮಾಜಿಕ, ಆರೋಗ್ಯ, ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅನೇಕ ಸಮಾಜಮುಖ ಕಾರ್ಯಗಳನ್ನು ನಡೆಸಿಕೊಂಡು ಬಂದಿದ್ದು ಬಡ ಅಶಕ್ತರಿಗೆ ಮನೆ ನಿರ್ಮಾಣ, ಅನಾರೋಗ್ಯ ಪೀಡಿತರಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು ಹಾಗೂ ಇನ್ನಿತರ ಸರಿಸುಮಾರು 585 ಸೇವಾ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಸಮಾಜದ ಹಲವಾರು ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಾ ಬಂದಿದೆ.
ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ದ.ಕ. ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ.) ಮಂಗಳೂರು
ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಫೆಬ್ರವರಿ 23 ರಂದು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ.
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಮತ್ತು ಕನ್ನಡ ಭಾಷೆಯಲ್ಲಿ ಅತ್ಯಧಿಕ ಪ್ರದರ್ಶನ ಕಂಡಿದೆ.
ಕೃಷಿಕರೊಬ್ಬರಿಂದ ಯುವಕರು ಹಣಕ್ಕೆ ಬೇಡಿಕೆ ಇಟ್ಟಿದ್ದು, ಹಣ ಕೊಡದೇ ಇದ್ದಾಗ ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಿಪಾಡಿ ಅಂಗಾರಗುಡ್ಡೆಯಲ್ಲಿ ಬುಧವಾರ ಸಂಜೆ ನಡೆದಿರುವ ಬಗ್ಗೆ ವರದಿಯಾಗಿದೆ.
ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ಧಾರವಾಡದ ಹೊಸಯಲ್ಲಾಪುರ ಸುಣ್ಣದ ಬಟ್ಟಿ ಓಣಿಯಲ್ಲಿ ಇಸ್ಮಾಯಿಲ್ ಹೊರಕೇರಿ ಎಂಬುವವರ ಮನೆಯಲ್ಲಿ ನಡೆದಿದೆ.
ಉಳ್ಳಾಲ ಮತ್ತು ಬೆಂಗ್ರೆ ಪ್ರದೇಶಗಳಲ್ಲಿ ಮಾದಕ ದ್ರವ್ಯಗಳನ್ನು ಸರಬರಾಜು ಮಾಡುತ್ತಿದ್ದ 03 ವ್ಯಕ್ತಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿಯಲ್ಲಿ ಬ್ಯಾನರ್ ಅಳವಡಿಕೆ ವಿಚಾರವನ್ನು ಕೇಂದ್ರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ಗಲಾಟೆ ಉಂಟಾಗಿದೆ.
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್ಗಳನ್ನು ಮಾಡಿ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ.
ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ ರಾತ್ರಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ಬಳ್ಳಾರಿ ನಗರದ ಹವಂಬಾವಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಬರ್ಲಿನ್: ಜರ್ಮನಿಯಲ್ಲಿರುವ ನಿವಾಸದಲ್ಲಿ ಅಗ್ನಿ ಅವಘಡ ಉಂಟಾಗಿ ಹೊಸ ವರ್ಷದಂದೇ ಭಾರತೀಯ ವಿದ್ಯಾರ್ಥಿ ಮೃತಪಟ್ಟಿದ್ದು, ಕುಟುಂಬಸ್ಥರಿಗೆ ಆಘಾತ ಉಂಟಾಗಿದೆ. ತಡರಾತ್ರಿ ಸಂಭವಿಸಿದ ಬೆಂಕಿ ಅಪಘಡದಲ್ಲಿ ತೆಲಂಗಾಣದ ಹೃತಿಕ್ ರೆಡ್ಡಿ(25) ಸಾವನ್ನಪ್ಪಿದ್ದಾರೆ. ವೇಗವಾಗಿ ಹರಡುತ್ತಿದ್ದ ಬೆಂಕಿ ಮತ್ತು ದಟ್ಟ ಹೊಗೆಯಿಂದ ತಪ್ಪಿಸಿಕೊಳ್ಳಲು ಹೃತಿಕ್ ಬರ್ಲಿನ್ನ ಅಪಾರ್ಟ್ಮೆಂಟ್ನ ಮೇಲಿನ ಮಹಡಿಯಿಂದ ಹಾರಿದ್ದ. ಪರಿಣಾಮ ಆತನ ತಲೆಗೆ ತೀವ್ರ ಪೆಟ್ಟಾಗಿತ್ತು. ಹೃತಿಕ್ ನನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಹೊಸ ವರ್ಷದ ದಿನದಂದೇ ಈ ಅವಘಡ ಸಂಭವಿಸಿದೆ. ತೆಲಂಗಾಣದ […]
ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ದೇಶೀಯ ಲೀಗ್ ಪಂದ್ಯದ ಸಂದರ್ಭದಲ್ಲಿ ಕ್ರಿಕೆಟಿಗನೊಬ್ಬ ಪ್ಯಾಲೆಸ್ಟೀನಿಯನ್ ಧ್ವಜವನ್ನು ಬಳಸಿದ ವಿವಾದ ಭುಗಿಲೆದ್ದಿದೆ.
ನಂಜನಗೂಡಿನಲ್ಲಿ ಒಂದೇ ರಾತ್ರಿ ಅಂಗಡಿಗಳಲ್ಲಿ ಕಳ್ಳತನ ಪ್ರಕರಣದಿಂದ ಜನತೆ ಬೆಚ್ಚಿಬಿದ್ದಿದ್ದಾರೆ.
ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿ ಜೀವನವನ್ನೇ ಧಾರೆ ಎರೆದ ಪುಟಾಣಿಗಳನ್ನು ಸ್ಮರಿಸುವ ದಿನವೇ ಡಿಸೆಂಬರ್ 26ರ ಹಿನ್ನೆಲೆಯಾಗಿದೆ.
ಜೆ ಪಿ ತುಮಿನಾಡ್ ನಿರ್ದೇಶನದ ‘ಸು ಫ್ರಮ್ ಸೋ’ ಸಿನಿಮಾದಲ್ಲಿ ಸಂಧ್ಯಾ ಅರಕೆರೆ ಭಾನು ಪಾತ್ರಕ್ಕೆ ಜೀವ ತುಂಬಿದ್ದರು. ರಂಗಭೂಮಿ ಹಿನ್ನಲೆ ಹೊಂದಿರುವ ನಟಿ ಸಂಧ್ಯಾ ಅರಕೆರೆ ಇದೀಗ ತುಂಬು ಗರ್ಭಿಣಿಯಾಗಿದ್ದಾರೆ. ಸಂಧ್ಯಾ ಅರಕೆರೆ – ಶೋಧನ್ ಬಸ್ರೂರ್ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಬೇಬಿ ಬಂಪ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಕಳೆದ ತಿಂಗಳು ಸಂಧ್ಯಾ ಅರಕೆರೆ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಅವರ ಕುಟುಂಬದವರು ಇದರಲ್ಲಿ ಭಾಗಿ ಆಗಿದ್ದರು. ಅವರಿಗೆ ಎಲ್ಲರೂ ಅಭಿನಂದನೆ […]
ಇನ್ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ.