Showing 20 of 20319 articles • Page 3 of 1016
ಪ್ರಸ್ತುತ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಮ್ಮ ಸಾಂಪ್ರದಾಯಿಕ ಪ್ರವಾಸಿ ವಾಹನಗಳ ಮೇಲೆ ಬಹಳಷ್ಟು ತಾರತಮ್ಯ ಹಾಗೂ ಅವೈಜ್ಞಾನಿಕ ಪಾರ್ಕಿಂಗ್ ದರಗಳನ್ನು ವಸೂಲಿ ಮಾಡುತ್ತಿದ್ದು ದಿನನಿತ್ಯ ನಮ್ಮ ದುಡಿಮೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ.
ಪ್ರತಿಭಟನೆಯ ವೇಳೆ ಪ್ರಧಾನಿ ಮೋದಿಯವರನ್ನು ನಿಂದಿಸಿದ್ದ ಸಿಜೆಪಿ (CJP) ಪ್ರತಿಭಟನೆಯ ರುಚಿಕಾ ಸಿಂಗ್, ಇದೀಗ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ.
ಡಾಲಿ ಧನಂಜಯ ನಟನೆಯ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಡಿಸೆಂಬರ್ 24ರಂದು ತೆರೆಕಾಣಲಿದೆ. ಸಿನಿಮಾವನ್ನು ಧನಂಜಯ ಅವರು ನಟಿಸಿದ್ದ ‘ಬಡವ ರಾಸ್ಕಲ್’ ಸಿನಿಮಾ ನಿರ್ದೇಶಿಸಿದ್ದ ಶಂಕರ್ ಗುರು ನಿರ್ದೇಶಿಸಿದ್ದಾರೆ.
ಬೆಂಗಳೂರು, ದೆಹಲಿ, ಕೋಲ್ಕತ್ತಾ ಸೇರಿದಂತೆ ಹಲವು ಮಹಾನಗರಗಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 200 ರೂ.ಗಳಷ್ಟು ಇಳಿಕೆಯಾಗಿದೆ.
ಭಾರತದ ತೇಜಸ್ವಿನ್ ಶಂಕರ್ ಅವರು ಕಾಮನ್ವೆಲ್ತ್ ಗೇಮ್ಸ್ನಲ್ಲಿ ಕಂಚಿನ ಪದಕ ಗೆದ್ದು ಹೊಸ ಇತಿಹಾಸ ಬರೆದಿದ್ದಾರೆ.
ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಅವರ ನೇತೃತ್ವದಲ್ಲಿ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಆರಂಭಗೊಂಡಿರುವ ಖಾದ್ಯಮೇಳಕ್ಕೆ ಮೊದಲ ದಿನವೇ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಮಣಿಪಾಲದ ರಾಷ್ಟ್ರೀಯ ಹೆದ್ದಾರಿ 169(ಎ)ರ ರಸ್ತೆ ಬದಿಗಳಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡಿದ್ದರಿಂದ ಶುಕ್ರವಾರ ಸಂಜೆ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸಿದರು.
ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ (45) ಅವರನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಪ್ರಕರಣವು ಕುಂದಾಪುರ ಜನತೆಯನ್ನು ಬೆಚ್ಚಿಬೀಳಿಸಿದೆ.
ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಹಾಗೂ ಗಾಳಿಗೆ ಅಡಿಕೆ ಮರವೊಂದು ಮುರಿದು ಬಿದ್ದು, ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳ ಎಂಬಲ್ಲಿ ನಡೆದಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಪ್ರಕರಣದಲ್ಲಿ 20 ವರ್ಷದ ಯುವಕನಿಗೆ ಕ್ರಿಮಿನಲ್ ಬೆದರಿಕೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (FTSC-2) ಅಪರಾಧಗಳ ಜೊತೆಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದೆ.
ವಸಡಿನ ದಂತ ಶಾಸ್ತ್ರ ವಿಭಾಗ, ಯೆನೆಪೋಯ ದಂತ ಕಾಲೇಜು, ಆಸ್ಪತ್ರೆ, ದೇರಳಕಟ್ಟೆ ಮತ್ತು ಗ್ರೀನ್ ವ್ಯೂವು ಪ್ರಾಥಮಿಕ ಕಾಲೇಜು, ಅಡ್ಕರ್ ಪಡುಪು, ದೇರಳಕಟ್ಟೆಯ ಸಹಯೋಗದಲ್ಲಿ ಬಾಯಿಯ ಸ್ವಚ್ಛತಾ ದಿನದ ಕುರಿತಾದ ಮಾಹಿತಿ ಮತ್ತು ದಂತ ತಪಾಸಣೆ ಶಿಬಿರವನ್ನು ದಿನಾಂಕ 30-7-2026( ಗುರುವಾರ ) ದಂದು ನಡೆಸಲಾಯಿತು.
ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿ. ಆರ್. ಧ್ರುವನಾರಾಯಣ್ ಅವರ 65ನೇ ವರ್ಷದ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನಂಜನಗೂಡು ಲಯನ್ಸ್ ಕ್ಲಬ್ ಮತ್ತು ಆರ್. ಧ್ರುವನಾರಾಯಣ್ ಎಜುಕೇಷನ್ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿತ್ತು.
ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿ. ಆರ್. ಧ್ರುವನಾರಾಯಣ್ ಅವರ 65ನೇ ವರ್ಷದ ಹುಟ್ಟುಹಬ್ಬವನ್ನು ಗಿಡ ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದು, ಯಾವುದೇ ನೋಟಿಸ್ ನೀಡಿದರೂ ಅದನ್ನು ಸ್ವೀಕರಿಸಲು ತಾವು ಸಿದ್ಧನಿದ್ದೇನೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಬಿಜೆಪಿ ಭದ್ರಕೋಟೆಗಳಲ್ಲಿರುವ ಶಾಸಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಆರೋಪಿಸಿದರು.
ಸಹಕಾರಿ ಸಂಸ್ಥೆಗಳು ಜನರ ವಿಶ್ವಾಸ ಗಳಿಸಿಕೊಂಡಾಗ ಮಾತ್ರ ದೀರ್ಘಕಾಲಿಕ ಯಶಸ್ಸು ಸಾಧಿಸಲು ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.
ಪೊಲೀಸ್ ಇಲಾಖೆಯ ಕಚೇರಿಯಲ್ಲೇ ಹಣಕ್ಕೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊಗಳು ಹಾಗೂ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ ಜನತೆ ಎಂದಿಗೂ ಮರೆಯಬಾರದು ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗುರುವಾರ ರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆಗೆ ಒಳಗಾದರು.
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ವ್ಯವಹಾರ ಹಾಗೂ ಇತರ ವ್ಯವಹಾರಗಳಲ್ಲಿನ ಮನಸ್ತಾಪವೇ ಪ್ರಮುಖ ಕಾರಣ ಎಂಬುದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.