Showing 20 of 19085 articles • Page 33 of 955
ಇತ್ತೀಚಿಗೆ ಕಾರ್ಕಳದಲ್ಲಿ ಸಂಚಲನ ಉಂಟುಮಾಡಿದ್ದ ಉದ್ಯಮಿ ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣದಲ್ಲಿ ನಟಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆಯಾಗಿದೆ.
ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮತ್ಸ್ಯೋದ್ಯಮಿಗಳ ನಡುವೆ ಮಲ್ಪೆ ಬಂದರಿನಲ್ಲಿ ಗುರುವಾರ ಹೊಡೆದಾಟ ನಡೆದಿದೆ.
ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ನಡೆದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಬುಧವಾರ ಸಂಭವಿಸಿದೆ. ಬೈಕ್ನ ಹಿಂಬದಿ ಸವಾರರಾಗಿದ್ದ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ ನಡೆದಿದೆ.
ಪ್ರವಾಸಿ ತಾಣ ಮೇಲುಕೋಟೆಯಲ್ಲಿ ಭಾರೀ ಗಾತ್ರದ ಚಿರತೆ ಸೆರೆಯಾಗಿದೆ. ಜಾನುವಾರುಗಳನ್ನು ತಿಂದು ಉಪಟಳ ನೀಡ್ತಿದ್ದ ಚಿರತೆ ಕಡೆಗೂ ಸಿಕ್ಕಿದೆ. ಮೇಲುಕೋಟೆ ಚಲುವನಾರಾಯಸ್ವಾಮಿ ದೇಗುಲದ ಸಮೀಪವೇ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ.
ನಗರದ ಬನ್ನಿಮಂಟಪ ಬಡಾವಣೆ, ರಾಡಿಕೋ ಡಿಸ್ಟಿಲರಿ ಸುತ್ತಮುತ್ತ, ಎನ್.ಆರ್.ಮೊಹಲ್ಲಾ ಹಾಗೂ ಸಿ.ವಿ ಮೊಹಲ್ಲಾಗಳಲ್ಲಿನ ಗೋಡನ್ಗಳು, ಗುಜರಿ ಅಂಗಡಿಗಳು ಹಾಗೂ ಇನ್ನಿತರ ಅನುಮಾನಸ್ಪದ ಸ್ಥಳಗಳ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದರು.
ನಗರದ ಜಟ್ಕಾ ಸ್ಟ್ಯಾಂಡ್ ಬಳಿ ಮರವೊಂದು ರಸ್ತೆ ಮೇಲೆ ಬಿದ್ದಾಗ ಅಲ್ಲೇ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ಜೀವಾಪಾಯದಿಂದ ಪಾರಾದರು.
ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಹಿರಿಯ ಕನ್ನಡ ಚಲನಚಿತ್ರ ನಟಿ ತಾರಾ ಅನುರಾಧಾ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.
“ನಾರಿ ಶಕ್ತಿ” ಹೆಸರಿನಲ್ಲಿ ರಾಜಕೀಯ ಲಾಭಕ್ಕಾಗಿ ಕೇಂದ್ರ ಬಿಜೆಪಿ ಸರಕಾರವು ಕೆಲವೊಂದು ಕಾನೂನುಗಳನ್ನು ಜಾರಿಗೊಳಿಸಲು ಮುಂದಾಗಿದೆ. ಮಹಿಳೆಯರ ಸಬಲೀಕರಣದ ಹೆಸರಿನಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಕಾಯ್ದೆ 2026 ಜಾರಿಗೊಳಿಸಿ, ಆ ಮೂಲಕ ಚುನಾವಣಾ ಕ್ಷೇತ್ರಗಳನ್ನು ತಮ್ಮ ಲಾಭಕ್ಕೆ ತಿರುಗಿಸಲು ಬಿಜೆಪಿ ಸಂಚು ರೂಪಿಸಿತ್ತು ಎಂದು ಕರ್ನಾಟಕ ರಾಜ್ಯ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕರಾದ ಕೃಪಾ ಆಳ್ವ ಆರೋಪಿಸಿದರು.
ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (CPCRI) ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಇಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ಮಹಿಳಾ ವಾಲಿಬಾಲ್ ತಂಡವು 2026 ಏಪ್ರಿಲ್ 27 ಮತ್ತು 28 ರಂದು ಆದ್ಯಾರ್ನ ಎಸ್ಸಿಇಎಂನಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ವಾಲಿಬಾಲ್ ಟೂರ್ನಮೆಂಟ್ನಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ಪುರುಷರ ವಾಲಿಬಾಲ್ ತಂಡವು 2026 ಏಪ್ರಿಲ್ 27 ಮತ್ತು 28 ರಂದು ಅಡ್ಯಾರ್ ನ ಎಸ್ಸಿಇಎಂನಲ್ಲಿ ನಡೆದ ವಿಟಿಯು ಮಂಗಳೂರು ವಿಭಾಗದ ವಾಲಿಬಾಲ್ ಟೂರ್ನಮೆಂಟ್ನಲ್ಲಿ ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡಿದೆ.
ಇಲ್ಲಿನ ಕೊರಂಗ್ರಪಾಡಿ ಎಂಬಲ್ಲಿ ಮನೆ ಸಮೀಪದ ಬಾವಿ ಸ್ವಚ್ಚತೆಗೆ ಇಳಿದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದ ವ್ಯಕ್ತಿಯೊಬ್ಬರನ್ನು ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ರಕ್ಷಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.
: ನಗರದ ಕೆನರಾ ಕಾಲೇಜಿನ (ಸ್ನಾಯತ್ತ) ವಾಣಿಜ್ಯ ಸ್ನಾತಕೋತ್ತರ ವಿಭಾಗದ ವತಿಯಿಂದ “ವರ್ಚುವಲ್ ವಿಸ್ತಾಸ್ ಆಫ್ ಭಾರತ್ ಅನ್ ಲಾಕಿ೦ಗ್ ಇ೦ಡಿಯಾಸ್ ಕ್ರಿಯೇಟಿವ್ ಕ್ಯಾಪಿಟಲ್ ತ್ರೂ ಡಿಜಿಟಲ್ ಟ್ವಿನ್ಸ್ & ಸ್ಮಾರ್ಟ್ ಬಿಜಿ಼ನೆಸ್ ಸ್ಟ್ರಾಟಜಿ ” ಎಂಬ ವಿಷಯದ ಮೇಲೆ ರಾಜ್ಯ ಮಟ್ಟದ ಒಂದು ದಿನದ ಸಮ್ಮೇಳನವನ್ನು ಎಪ್ರಿಲ್ 18, 2026 ರ೦ದು ಯಶಸ್ವಿಯಾಗಿ ಆಯೋಜಿಸಿಲಾಯಿತು.
ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ರಜತ್ ಮೇಲೆ ಎಫ್ಐಆರ್ ದಾಖಲಾಗಿದೆ.
ಮದುವೆ ಮೆರವಣಿಗೆಯ ಡಿಜೆ ಸದ್ದಿಗೆ ಬರೋಬ್ಬರಿ 140 ಕೋಳಿಗಳು ಸಾವನ್ನಪ್ಪಿರುವ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶದ ದರಿಯಾಪುರ ಗ್ರಾಮದಲ್ಲಿ ನಡೆದಿದೆ.
ಪ್ರೀವೆಡ್ಡಿಂಗ್ ಶೂಟ್ಗೆ ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ನಂದಿನಿ ಲೇಔಟ್ನಲ್ಲಿರುವ ನಾಲ್ಕು ಅಂತಸ್ತಿನ ಪೇಯಿಂಗ್ ಗೆಸ್ಟ್ ವಸತಿಗೃಹದ ನೆಲಮಹಡಿಯ ಎಲ್ಇಡಿ ಬ್ಯಾನರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಕಟ್ಟಡವನ್ನು ಆವರಿಸಿದ ನಂತರ, ಭಯಭೀತರಾದ ಮಹಿಳೆಯರು ಮೇಲಿನ ಮಹಡಿಯಿಂದ ಜಿಗಿಯುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ಸೆರೆಹಿಡಿದಿವೆ.