Showing 20 of 19093 articles • Page 36 of 955
ಭಾರತ ದೇಶವನ್ನು ಕಟ್ಟಲು ಯುವಕರು ಮುಂದಾಗಬೇಕು. ಯಾವುದೇ ಜಾತಿ ಮತ್ತು ಧರ್ಮಕ್ಕೆ ಅಂಟಿಕೊಳ್ಳದೆ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಯುವಕರು ಪಣತೊಡಬೇಕು ಎಂದು ಬೋಗಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಡಾ.ರಮೇಶ್ ಬಾಬು ವಿ.ಆರ್ ಕರೆ ನೀಡಿದರು.
ಮೇ.1 ರಂದು ಶುಕ್ರವಾರ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ವಿಶ್ವಕ್ಕೆ ಶಾಂತಿ ಸಾರಿದ ಭಗವಾನ್ ಗೌತಮ ಬುದ್ಧರ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದು ಧಮ್ಮ ಧ್ವನಿ ಸೇವಾ ಟ್ರಸ್ಟ್ ಅಧ್ಯಕ್ಷ ಸಿ.ಆರ್ ಮಹದೇವ್ ಹೇಳಿದರು.
ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆ (ಐಐಜಿಜೆ)ಯ ಹೊಸ ಶ್ರೇಷ್ಠತಾ ಕೇಂದ್ರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಅನಾವರಣಗೊಳಿಸಿದರು.
ಶ್ರೀರಥಬೀದಿ- ರಾಜಾಂಗಣ ರಾಜಮಾರ್ಗದಲ್ಲಿ ನೂತನವಾಗಿ ನವೀಕರಿಸಲಾದ ಶ್ರೀ ಕೃಷ್ಣ ದರ್ಶನಕ್ಕಾಗಿ ಸರತಿ ಸಾಲು ವ್ಯವಸ್ಥೆ ಮತ್ತು ಮೇಲ್ಛಾವಣಿ ವ್ಯವಸ್ಥೆ ಹಾಗೂ ವಿಐಪಿ ದರ್ಶನಕ್ಕಾಗಿ ಹಾಗೂ ಸ್ಥಳೀಯ ಭಕ್ತರಿಗಾಗಿ ಐಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಗೆ ಇಂದು ಚಾಲನೆ ನೀಡಲಾಯಿತು.
SSLC ಪರೀಕ್ಷೆ 1 ರಲ್ಲಿ ಫೇಲ್ ಆಗಿರೋ ವಿದ್ಯಾರ್ಥಿಗಳು ಪರೀಕ್ಷೆ 2ನ್ನು ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಕರೆ ನೀಡಿದರು.
ಕ್ಯಾನ್ಸರ್ ನಿಂದ ಕಾಲು ಕಳೆದುಕೊಳ್ಳುವ ಭೀತಿಯಲ್ಲಿದ್ದ ವ್ಯಕ್ತಿಗೆ ಸವಾಲಿನ ಹಾಗೂ ಅತ್ಯಪರೂಪದ ಶಸ್ತ್ರಚಿಕಿತ್ಸೆ ನಡೆಸಿದ ಯೇನೆಪೊಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರ ತಂಡ ರೋಗಿಯ ಕಾಲು ಉಳಿಸುವ ಮೂಲಕ ಅಂಗದಾನ ಮಾಡಿದೆ.
ಸರಕಾರಿ ಆಸ್ಪತ್ರೆಗಳನ್ನು ಖಾಸಗೀ ಆಸ್ಪತ್ರೆಗಳೊಂದಿಗೆ ಮಾಡಿದ ಕರಾರು ಒಪ್ಪಂದ ರದ್ದುಗೊಳಿಸಲು, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು , ಕಿದ್ವಾಯಿ ಸ್ಮಾರಕ ಕ್ಯಾನ್ಸರ್, ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪನೆಗಾಗಿ, ಸರಕಾರಿ ವೆನ್ಲಾಕ್ ಆಸ್ಪತ್ರೆ ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕೆಂದು ಸಹಿತ ಸರಕಾರಿ ಆಸ್ಪತ್ರೆಗಳ ಬಲಪಡಿಸಿ ಖಾಸಗೀ ಆಸ್ಪತ್ರೆಗಳ ನಿಯಂತ್ರಿಸಲು ಒತ್ತಾಯಿಸಿ ಇಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿವರೆಗೆ ಆಯೋಜಿಸಿದ ಉಸ್ತುವಾರಿ ಕಚೇರಿ ಚಲೋ ಪಾದಯಾತ್ರೆಯು ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆ ಮುಂಭಾಗದಿಂದ ಪ್ರಾರಂಭಗೊಂಡಿತು.
ಸಾಮೂಹಿಕ ವಿವಾಹ ಸಮಾರಂಭದ ವೇಳೆ ಹಠಾತ್, ಭೀಕರ ಬಿರುಗಾಳಿ ಮತ್ತು ಸುಂಟರಗಾಳಿ ಬೀಸಿ ಅಪಾರ ಹಾನಿಯುಂಟಾದ ಘಟನೆ ರಾಜಸ್ಥಾನದ ಟೋಂಕ್ ಜಿಲ್ಲೆಯಲ್ಲಿ ನಡೆದಿದೆ.
ದಕ್ಷಿಣ ಭಾರತದ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿರುವ ಪೂಜಾ ಹೆಗ್ಡೆ, ಸಿನಿಮಾ ಲೋಕದ ಗ್ಲಾಮರ್ ಬದಿಗಿಟ್ಟು ತುಳುನಾಡಿನ ಮಣ್ಣಿನ ಮಗಳಾಗಿ ಭಕ್ತಿ ಮೆರೆದಿದ್ದಾರೆ. ಕುತ್ಯಾರು ಮೂಲದ ಬೆಟ್ಟು ನಾಗ ಬ್ರಹ್ಮಸ್ಥಾನದ ತಮ್ಮ ಮೂಲಮನೆಯಲ್ಲಿ ನಡೆದ ಪವಿತ್ರ ‘ಡೆಕ್ಕೆ ಬಲಿ’ ಸೇವೆಯಲ್ಲಿ ಅವರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.
ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದಾರೆ.
ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಸಮೀಪ ಏಪ್ರಿಲ್ 24ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರೇರಣಾ ಮೂಲ್ಯ ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 27ರಂದು ನಿಧನ ಹೊಂದಿದ್ದಾರೆ.
ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿದ್ದಾರೆ.
ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿರುವ ಪೊಲೀಸ್ ಇಲಾಖೆ, ಉಡುಪಿ ಜಿಲ್ಲೆಯಲ್ಲಿಯೂ ವಿಶೇಷ ಕಾರ್ಯಾಚರಣೆ ನಡೆಸಿದೆ.
ಅರಿಶಿಣಪುಡಿ ಹಾಗೂ ಮಸಾಲೆ ಪೌಡರ್ ಗಳಲ್ಲಿ ಸೀಸದ ಅಂಶ ಪತ್ತೆಯಾಗಿದ್ದು, ರಾಜ್ಯಾದ್ಯಂತ ಮಸಾಲೆ ಪೌಡರ್, ಅರಿಶಿಣ ಪುಡಿ ಪರೀಕ್ಷೆಗೆ ಸರ್ಕಾರ ಆದೇಶ ಹೊರಡಿಸಿದೆ.
ಭಾರತೀಯ ಜನತಾ ಪಾರ್ಟಿ ಮೈಸೂರು ನಗರ ಕೃಷ್ಣರಾಜ ಕ್ಷೇತ್ರದ ಮಹಿಳಾ ಮೋರ್ಚಾದ ವತಿಯಿಂದ ಇಂದು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಜಾರಿಗೊಳಿಸಬೇಕಿದ್ದ “ನಾರಿ ಶಕ್ತಿ ವಂದನ್ ಅಧಿನಿಯಮ “ಎಂಬ ಮಹಿಳಾ ಮೀಸಲಾತಿ ಕಾಯಿದೆಗೆ ವಿರೋಧ ವ್ಯಕ್ತ ಪಡಿಸಿದ ಕಾಂಗ್ರೆಸ್ ಹಾಗೂ ಮೈತ್ರಿ ಕೂಟದ ವಿರುದ್ಧ ಕುವೆಂಪು ನಗರದ ಅಂಬೇಡ್ಕರ್ ವೃತ್ತದಿಂದ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಕಛೇರಿಯ ವರೆಗೆ ಪ್ರತಿಭಟನಾ ಪಾದಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ರಾಜಧಾನಿಯ ನಂದಿನಿ ಲೇಔಟ್ನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಪ್ಲಾಸ್ಟಿಕ್ ಗೋಡೌನ್ವೊಂದು ಸಂಪೂರ್ಣ ಭಸ್ಮವಾಗಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಲೇಡಿಸ್ ಪಿಜಿಗೂ ಹಬ್ಬಿದ ಪರಿಣಾಮ ಯುವತಿಯರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಹೆರ್ಗಾ ಗ್ರಾಮದ ಹೊಳೆಬಾಗಿಲು ನದಿಗೆ ಈಜಲು ಹೋದ ರಿಕ್ಷಾ ಚಾಲಕರೊಬ್ಬರು ಆಕಸ್ಮಿಕ ವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ತಾಲೂಕಿನ ಹಿರೇಕೋಟ್ನೆಕಲ್–ಬ್ಯಾಗವಾಟ್ ರಸ್ತೆಯ ಕೆನಾಲ್ ಸಮೀಪದ ಹೊಲ ಪ್ರದೇಶದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ, 11 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇರಾನ್ ಇಸ್ರೇಲ್ ನಡುವಿನ ಯುದ್ಧದ ಭೀಕರತೆ ಗ್ಯಾಸ್ ಸರಬರಾಜಿಗೆ ಸಾಕಷ್ಟು ಎಡವಟ್ಟು ಮಾಡಿದೆ. ಮೈಸೂರು ಜಿಲ್ಲೆಯಲ್ಲಂತೂ ಗ್ಯಾಸ್ ಅಭಾವ ನಾಗರೀಕರ ನಿದ್ದೆ ಕೆಡಿಸಿದೆ. ಗ್ಯಾಸ್ ಸಪ್ಲೈ ಇಲ್ಲದೆ ಜನ ಪರದಾಡುವಂತಾಗಿದೆ.
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಎನ್ಐಎ ವಿಶೇಷ ನ್ಯಾಯಾಲಯ ಮೊಹಮ್ಮದ್ ಶಾರಿಕ್ಗೆ 10 ವರ್ಷ ಜೈಲು, 94 ಸಾವಿರ ರೂ. ದಂಡ ವಿಧಿಸಿದೆ.