Showing 20 of 20349 articles • Page 39 of 1018
ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಹಾಗೂ ಸ್ಟಾರ್ ಆಲ್ರೌಂಡರ್ ಬೆನ್ಸ್ಟೋಕ್ಸ್ ಸರಣಿ ಮಧ್ಯದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಗಂಡನನ್ನು ಕೊಲೆ ಮಾಡಿ ಹೃದಯಾಘಾತ ಎಂದು ಹೆಂಡತಿ ಸುಶೀಲ ಕಥೆ ಕಟ್ಟಿದ್ದಾರೆ. ಮೃತ ನಿತ್ಯಾನಂದ ಅಣ್ಣಾ ಬಂದು ನೋಡಿದಾಗ ಕುತ್ತಿಗೆ ಭಾಗದಲ್ಲಿ ಗಾಯವಾಗಿರೋದು ಪತ್ತೆಯಾಗಿದೆ.
ನಮ್ಮ ಟ್ರಸ್ಟಿನ ‘ಅವೇಕ್ ಕುಡ್ಲ’ ಪರಿಕಲ್ಪನೆಯಡಿಯಲ್ಲಿ ನಿನ್ನೆ ವಿಜಯ ಗೇಮ್ಸ್ ಟೀಮ್ (ರಿ.) ಬೋಳಾರ ಹಾಗೂ ಕಾಸ್ಸಿಯಾ ಪ್ರೌಢ ಶಾಲೆಯ ಗೈಡ್ಸ್ ವಿಭಾಗದ ಸಹಯೋಗದಲ್ಲಿ ನಗರದ ಬೋಳಾರ ಪ್ರದೇಶದಲ್ಲಿ ‘ಸ್ವಚ್ಛತಾ ಜಾಗೃತಿ ಅಭಿಯಾನ’ ನಡೆಯಿತು.
ಬೆಳ್ಳಂ ಬೆಳಗ್ಗೆ ರಾಬರಿ ನಡೆದಿದ್ದು, ಘಟನಾ ಸ್ಥಳದಲ್ಲಿ ಪಣಂಬೂರು ಪೊಲೀಸರು ವಿಕಾಸ್ ಹಾಗು ಪತ್ನಿ ರೂಪಾಲಿಯನ್ನ ಕರೆ ತಂದು ಸ್ಥಳ ಮಹಜರು ನಡೆಸಲಾಯಿತು.
ಬೆಳ್ಳಂ ಬೆಳಗ್ಗೆ ರಾಬರಿ ಬೆಚ್ಚಿ ಬೀಳಿಸಿದ್ದು, ಗಂಡನ ಎದುರೇ ಪತ್ನಿ ಹಾಗು ಮಗುವನ್ನ ಕಾರ್ ಸಮೇತ ಕಿಡ್ನಾಪ್ ಮಾಡಿ ದರೋಡೆ ಮಾಡಲಾಯಿತು.
ಜಿಲ್ಲೆಯಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ಬಾರಕೂರು ಕೋಟೆಕೇರಿ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ 365 ಸೀಯಾಳ (ಎಳನೀರು) ಅಭಿಷೇಕ ನೆರವೇರಿಸಲಾಯಿತು.
ದೇಶದಲ್ಲಿ ಸಹಕಾರಿ ಕ್ಷೇತ್ರ ಕ್ರಾಂತಿಕಾರಿ ಕೆಲಸ ಮಾಡುತ್ತಿದೆ. ವಾಣಿಜ್ಯ ಬ್ಯಾಂಕ್ಗಳಿಗೆ ಸಮಾನಾಂತರವಾಗಿರುವ ಸಹಕಾರಿ ಕ್ಷೇತ್ರವು ಕರ್ನಾಟಕದ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಬಹಳಷ್ಟು ಸಹಕಾರ ನೀಡುತ್ತಿದೆ.
ನಗರದ ಎರಡು ದೈವಸ್ಥಾನಗಳ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸಾಗರ್ ಜಿಲ್ಲೆಯ 19 ತಿಂಗಳ ಬಾಲಕ, ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಎರಡೂ ಕಣ್ಣುಗಳಲ್ಲಿ ದೃಷ್ಟಿ ಕಳೆದುಕೊಂಡಿದ್ದಾನೆ, ಕರ್ತವ್ಯದಲ್ಲಿದ್ದ ಸರ್ಕಾರಿ ವೈದ್ಯರು ತಪ್ಪಾಗಿ ಕಣ್ಣಿನಲ್ಲಿ ಲವಣಯುಕ್ತ ಹನಿಗಳನ್ನು ಹಾಕಿದ್ದಾರೆ ಎಂದು ಕುಟುಂಬ ಆರೋಪಿಸಿದೆ.
ಏಷ್ಯಾದ ಅತಿ ದೊಡ್ಡ ಸರ್ವಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆ ಬಂದರಿನಲ್ಲಿ ಮೀನುಗಾರರ ಅನುಕೂಲಕ್ಕಾಗಿ ಸುಮಾರು 12 ವರ್ಷಗಳ ಹಿಂದೆ ನಿರ್ಮಿಸಲಾದ ಶೌಚಾಲಯಗಳು ಇಂದಿಗೂ ಬಳಕೆಗೆ ಲಭ್ಯವಾಗದೇ ನಿರುಪಯುಕ್ತವಾಗಿ ಬಿದ್ದಿವೆ. ಮಹಿಳಾ ಮೀನುಗಾರ್ತಿಯರಿಗಾಗಿ ನಿರ್ಮಿಸಿದ್ದ ವಿಶ್ರಾಂತಿ ಕೊಠಡಿಯೂ ಪಾಳುಬಿದ್ದಿದ್ದು, ಮೂಲಸೌಕರ್ಯಗಳ ಕೊರತೆ ಬಗ್ಗೆ ಮೀನುಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಿ ನರಸೀಪುರ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪಯ್ಯನಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದರು.
ಮೈಸೂರಿನ ಗೋಕುಲಂ ಏರಿಯಾದ ಅಪಾರ್ಟ್ಮೆಂಟ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ.
20ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಛೋಲಿಕೆ ಪೀಚೆ ಕ್ಯಾಹೆ ಡ್ಯಾನ್ಸ್ ಮಾಡಲಾಯಿತು. ಕುಂದಾಪುರ ತಾಲೂಕಿನ ಆನೆಗುಡ್ಡೆ ಮಹಾಗಣಪತಿ ದೇವರ ಸನ್ನಿಧಾನದಲ್ಲಿ ಕಾರ್ಯಕ್ರಮ ನಡೆಯಿತು.
ಸಚಿವರು, ಶಾಸಕರ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರು ನಿವಾಸದಲ್ಲಿ ಬಾಡೂಟ ಆಯೋಜನೆ ಮಾಡಿದರು.
ಪತ್ನಿ ಜೊತೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ವಿಶೇಷ ಪೂಜೆ ಸಲ್ಲಿಸಿದರು.
ಸಾಮಾಜಿಕ ಜಾಲತಾಣ (ಫೇಸ್ ಬುಕ್) ದಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, ‘ಸನಾತನಿ ಸಿಂಹ’ ಎಂಬ ಪೇಸ್ಬುಕ್ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೇಂಟ್ ಮಾಡಿದ ವ್ಯಕ್ತಿಯ ಬಂಧಿಸಲಾಗಿದೆ.
ಬೀದಿಬದಿ ವ್ಯಾಪಾರಿಗಳ ವ್ಯಾಪಕ ವಿರೋಧದ ನಡುವೆ ನಗರದ ಮೈದಾನ ರಸ್ತೆ, ಲೇಡಿ ಘೋಷನ್ ಆಸ್ಪತ್ರೆ ರಸ್ತೆ, ಪುರಭವನದ ಬಳಿ ವ್ಯಾಪಾರ ಮಾಡುವ ಬೀದಿ ವ್ಯಾಪಾರಿಗಳನ್ನು ನಗರಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ತುಳುವ ಮಹಾಸಭೆಯ ಕೇಂದ್ರೀಯ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ನಡೆದಿದೆ.
ಜುಲೈ 1 ಮತ್ತು 2 ರಂದು ಎರಡು ದಿನಗಳ ಕಾಲ ಶ್ರೀ ಕ್ಷೇತ್ರ ದೇವನೂರು ಶ್ರೀ ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠದಲ್ಲಿ ಶ್ರೀ ಗುರು ಮಲ್ಲೇಶ್ವರರ 127ನೇ ಪುಣ್ಯ ಆರಾಧನೆ ಹಮ್ಮಿಕೊಳ್ಳಲಾಗಿದೆ