Showing 20 of 19101 articles • Page 41 of 956
ತೊಕ್ಕೊಟ್ಟು ಫ್ಲೈ ಓವರನ್ ನಲ್ಲಿ ಇತ್ತೀಚೆಗೆ ನಡೆದ ರೌಡಿ ಶೀಟರ್ ಆರಿಫ್ ಹುಸೇನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಮುಹಮ್ಮದ್ ಸುಹೈಲ್ ಅಲಿಯಾಸ್ ಚಿಯಾ(24) ಬಂಧಿತ ಆರೋಪಿ.
ಬಂದರು ಮಂಡಳಿ(NMPA) ಆಡಳಿತಕ್ಕೆ ಒಳಪಟ್ಟಿರುವ ಮತ್ತು ಕಳೆದ 40 ವರ್ಷಗಳಿಂದ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಎನ್.ಎಂ.ಪಿ.ಎ. ಆಂಗ್ಲ ಮಾಧ್ಯಮ ಶಾಲೆಯನ್ನು ಮತ್ತೊಂದು ಶಾಲೆಯೊಂದಿಗೆ ವಿಲೀನಗೊಳಿಸುವ ಅಥವಾ ಮುಚ್ಚುವ ಪ್ರಯತ್ನಕ್ಕೆ ಮಾಜಿ ಶಾಸಕ ಬಿ.ಎ. ಮೊಯ್ದಿನ್ ಬಾವಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ತೇವಾಂಶ ಪರಿಸ್ಥಿತಿಗಳು ಹೆಚ್ಚಾಗಿರೋ ಸಾಧ್ಯತೆಯಿದೆ. IMD ಯಿಂದ ಎಲ್ಲೋಅಲರ್ಟ್ ನೀಡಲಾಗಿದೆ. ಜನರು ಮುನ್ನೆಚ್ಚರಿಕೆ ವಹಿಸಲು ಕೋರಿದೆ.
ರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಸಹಬಾಳ್ವೆ ಉಡುಪಿ, ಸಿಐಟಿಯು, ಭಾರತೀಯ ಕ್ರೈಸ್ತ ಒಕ್ಕೂಟ ಹಾಗೂ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಸಹಿತ ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಪ್ರಯುಕ್ತ “ದೇಶಾಭಿಮಾನಿ ಸಮಾವೇಶ” ವನ್ನು ಇದೇ ಎ.26ರಂದು ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರು ತಿಳಿಸಿದರು.
ಬೇಸಿಗೆಯ ಬಿರು ಬಿಸಿಲಿಗೆ ಕಪಿಲೆಯ ಒಡಲು ಬರಿದಾಗಿ ನೀರಿನ ಪ್ರಮಾಣ ಕುಸಿದ ಹಿನ್ನಲೆ ಭೋರ್ಗರೆದು ಹರಿಯುತ್ತಿದ್ದ ಕಪಿಲೆ ಈಗ ತಣ್ಣಗಾಗಿದ್ದಾಳೆ.ಈ ಮಧ್ಯೆ ನಂಜನಗೂಡಿನ ಸುತ್ತಮುತ್ತಲ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ತ್ಯಾಜ್ಯ ಹಾಗೂ ಕೊಳಚೆ ನೀರು ಕಪಿಲೆಯ ಒಡಲು ಸೇರುತ್ತಿದೆ.
ಕಾಡಾನೆಗಳ ಹಿಂಡಿನಿಂದ ತಪ್ಪಿಸಿಕೊಳ್ಳಲು ಹೋದ ಕರ್ತವ್ಯ ನಿರತ ಅರಣ್ಯ ರಕ್ಷಕ ಕಬಿನಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಹಿಳೆಯರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಜಾರಿಗೊಳಿಸಲು ಮುಂದಾಗಿದ್ದ ‘ನಾರಿ ಶಕ್ತಿ ವಂದನ್ ಕಾಯ್ದೆಯ ತಿದ್ದುಪಡಿ ಮಸೂದೆ’ ಅನ್ನು ವಿಪಕ್ಷಗಳು ವಿರೋಧ ವ್ಯಕ್ತಪಡಿಸುವ ಮೂಲಕ ಮಹಿಳಾ ವಿರೋಧಿ ಧೋರಣೆ ತೋರಿದೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಪ್ರದಾನ ಕಾರ್ಯಕ್ರಮವು ಇದೇ ಎ.26ರಂದು ಸಂಜೆ 5 ಗಂಟೆಗೆ ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಹೇಳಿದರು.
ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಗಳಲ್ಲಿ ಒಬ್ಬರಾಗಿದ್ದರೆ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಸಾವನ್ನಪ್ಪಿದ್ದಾಳೆ.
ತೇಜೇಶ್ ಪೂಜಾರಿ ಅವರ ನಿರ್ದೇಶನದ ಎರಡನೇ ತುಳು ಚಲನಚಿತ್ರ ‘ದೇವದಾಸ್ ನ ಲೀಲಾ’ ಇದೇ ಎ.24ರಂದು ತುಳು ನಾಡಿನಾದ್ಯಂತ ಚಿತ್ರಮಂದಿರ ಹಾಗೂ ಮಾಲ್ಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಾಯಕ ನಟ ಎಲ್ಟನ್ ಜೆಫ್ ತಿಳಿಸಿದ್ದಾರೆ.
ಮೂಡಬಿದರೆಯ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗವು, ಮಲ್ಪೆಯ ಟೀಮ್ ಈಶ್ವರ ಮಲ್ಪೆ ತಂಡದ ಸಹಯೋಗ ಹಾಗೂ ಸಮಾಜಕಾರ್ಯ ವಿಭಾಗದ ಹಳೆವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ ಇದೇ ಎ.25ರಂದು ಶನಿವಾರ ಮಲ್ಪೆ ಕಡಲಕಿನಾರೆಯಲ್ಲಿ ‘ಆಳ್ವಾಸ್ ರೀಚ್-2026’ ಎಂಬ ರಾಷ್ಟ್ರೀಯ ಸಮಾವೇಶವನ್ನು ಆಯೋಜಿಸಿದೆ ಎಂದು ಸಮಾವೇಶದ ಸಂಯೋಜಕ ಸಮಾಜಕಾರ್ಯ ವಿಭಾಗದ ಪ್ರಾಧ್ಯಾಪಕ ಕೃಷ್ಣಮೂರ್ತಿ ಬಿ. ತಿಳಿಸಿದ್ದಾರೆ.
ಬೆಂಗಳೂರಿನ ಕ್ರಿಸ್ಟ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ತನ್ನ ಶೈಕ್ಷಣಿಕ ಶ್ರೇಷ್ಠತೆ, ಮೌಲ್ಯಾಧಾರಿತ ಶಿಕ್ಷಣ ಮತ್ತು ವಿವಿಧ ವಿಭಾಗಗಳಲ್ಲಿ ಬಲವಾದ ಉದ್ಯಮ ಏಕೀಕರಣಕ್ಕಾಗಿ ವ್ಯಾಪಕವಾಗಿ ಗುರುತಿಸಲ್ಪಟ್ಟಿದೆ.
ನಾರಿ ಶಕ್ತಿ ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ಸೂಚಿಸಿ ಹಾಗೂ ಮಹಿಳೆಯರಿಗೆ ಮತ್ತೆ ಮೀಸಲಾತಿ ಕಲ್ಪಿಸಬೇಕು ಎಂಬ ಆಗ್ರಹದೊಂದಿಗೆ ಮಂಗಳೂರಿನ ಪುರಭವನದ ಎದುರುಗಡೆಯ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಬುಧವಾರ ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟವಾಗಿದೆ. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಾಖಲೆಯ ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಕ್ಷೇತ್ರವು ಪವಿತ್ರ ಸ್ಥಳವಾಗಿ ಪ್ರಸಿದ್ಧಿಯಾಗಿದ್ದು, ಶ್ರೀ ದುರ್ಗಾ ಪರಮೇಶ್ವರಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ‘ತೂಟೆದಾರ’ ಅಗ್ನಿ ಕೇಳಿ ಸಾವಿರಾರು ಭಕ್ತರನ್ನು ಸೆಳೆಯಿತು.
ಮೂಡಬಿದ್ರೆಯ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (YIT), ತನ್ನ ಪ್ರತಿಷ್ಠಿತ ಕಾಲೇಜು ದಿನಾಚರಣೆ 2026 ಅನ್ನು ಏಪ್ರಿಲ್ 24, 2026 ರಂದು ಆಯೋಜಿಸಲು ಸಜ್ಜಾಗಿದೆ.
2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ.
ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ತುಂಬೆ, ರಾಷ್ಟ್ರೀಯ ಸೇವಾ ಯೋಜನೆ (NSS), , ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಮಂಗಳೂರು ವಿಶ್ವವಿದ್ಯಾಲಯದ ಕ್ರೈಸ್ತ ಅಧ್ಯಯನ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಪುದು ಇವರ ಸಂಯುಕ್ತ ಸಹಯೋಗದಲ್ಲಿ ವಿಪತ್ತು ನಿರ್ವಹಣಾ ಅಭ್ಯಾಸ ಕಾರ್ಯಕ್ರಮವನ್ನು 22 ಏಪ್ರಿಲ್ 2026 ರಂದು ಬೆಳಿಗ್ಗೆ 10:00 ಗಂಟೆಗೆ DKZP ಸರ್ಕಾರಿ ಪ್ರೌಢಶಾಲೆ, ಸುಜೀರ್, ಪುದು ಇಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.