Showing 20 of 20353 articles • Page 41 of 1018
ಮಾದಕ ದ್ರವ್ಯ ಜೀವನವನ್ನು ಹಾಳು ಮಾಡುತ್ತದೆ. ಸ್ನೇಹಿತರು ಮಾದಕ ವ್ಯಸನಕ್ಕೆ ತುತ್ತಾದರೆ ಶಿಕ್ಷಕರಿಗೆ ತಿಳಿಯದೆ ಇರಬಹುದು, ಆದರೆ ನಿಮ್ಮ ಸ್ನೇಹಿತರು ವ್ಯಸನಕ್ಕೆ ಬಲಿಯಾಗದಂತೆ ತಕ್ಷಣ ಸಂಬಂಧಪಟ್ಟ ಇಲಾಖೆಗೆ, ಪ್ರಾಂಶುಪಾಲರಿಗೆ ಮಾಹಿತಿ ನೀಡಬೇಕು ಎಂದು ಬೆಳ್ತಂಗಡಿ ತಾಲೂಕು ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಹೇಳಿದರು.
ಕಾಡಿನಿಂದ ತಪ್ಪಿಸಿಕೊಂಡು ಬಂದ ಜಿಂಕೆಯೊಂದು ಬೀದಿ ನಾಯಿಗಳ ದಾಳಿಗೆ ಒಳಗಾದ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ನಡೆದಿದೆ. ಯುವಕರ ತಂಡ ತಕ್ಷಣ ಸ್ಪಂದಿಸಿ ಜಿಂಕೆಯನ್ನು ರಕ್ಷಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಐದು ದಿನಗಳ ಹಿಂದೆಯಷ್ಟೇ ಹುಸಿ ಬಾಂಬ್ ಬೆದರಿಕೆಗೆ ಈಡಾಗಿದ್ದ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಂದು ಮತ್ತೆ ಈಮೇಲ್ ಮೂಲಕ ಬೆದರಿಕೆ ಕರೆ ಬಂದಿದೆ.
ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಕುಕನೂರು ತಾಲೂಕಿನ ಭಾನಾಪೂರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಅಪಘಾತದಲ್ಲಿ 4 ಮಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ.
ಟ್ರಕ್ ಚಾಲಕನೊಬ್ಬ ಮೊದಲು ಗುಂಡರ್ದೇಹಿ ಪ್ರದೇಶದಲ್ಲಿ ಒಂದು ಪುಟ್ಟ ಮಗುವಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಲು ಯತ್ನಿಸಿರುವ ಘಟನೆ ಛತ್ತೀಸ್ಗಢ ರಾಜ್ಯದ ಮೊಹ್ಲಾ-ಮಾನ್ಪುರ್-ಅಂಬಾಗಢ್ ಚೌಕಿ ಜಿಲ್ಲೆಯಲ್ಲಿ ನಡೆದಿದೆ.
ರಾಜಾಜಿನಗರದಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಒಣಗಿದ ಮರದ ಕೊಂಬೆಯೊಂದು ಮೋಟಾರ್ ಸೈಕಲ್ ಸವಾರನ ತಲೆಯ ಮೇಲೆ ಬಿದ್ದ ಪರಿಣಾಮ, 52 ವರ್ಷದ ವ್ಯಕ್ತಿಯೊಬ್ಬರು ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ.
ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ (NH169A) ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್ ಲಾರಿಯೊಂದು ಪಲ್ಟಿಯಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಇಂದಿನ ಯುವಜನತೆ ಕೃಷಿಯಿಂದ ದೂರ ಸರಿಯುತ್ತಿರುವ ಈ ಸಂದರ್ಭದಲ್ಲಿ, ಕೃಷಿಯ ಮಹತ್ವವನ್ನು ಯುವ ಪೀಳಿಗೆಗೆ ಪರಿಚಯಿಸುವ ವಿಶಿಷ್ಟ ಪ್ರಯತ್ನವೊಂದು ಉಡುಪಿಯಲ್ಲಿ ನಡೆದಿದೆ.
ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ದುರುಪಯೋಗ ಪ್ರಕರಣಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ, ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ.ಯವರಿಗೆ ಜೂನ್ 25, 2026 ರಂದು ಭಾರತ ಸರ್ಕಾರವು ಅಧಿಕೃತವಾಗಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ನಲ್ಲಿ ಗೌರವ ಕರ್ನಲ್ ಹುದ್ದೆ ಮತ್ತು ‘ಕರ್ನಲ್ ಕಮಾಂಡೆಂಟ್’ (ಸಂಖ್ಯೆ: UN/NOTICE*/2026/102) ಆಗಿ ನೇಮಕ ಮಾಡಿದೆ. ಈ ಗೌರವಕ್ಕಾಗಿ ಎನ್.ಸಿ.ಸಿ. ಪ್ರಧಾನ ಕಚೇರಿ, ಮಂಗಳೂರು ಗ್ರೂಪ್ ನವರು ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್ಜೆ ಅವರನ್ನು ಈ ಮಹಾನ್ ಗೌರವಕ್ಕಾಗಿ ಶಿಫಾರಸು ಮಾಡಿದ್ದರು.
ದೇಶ ವಿದೇಶದ ಸಮಸ್ತ ಶ್ರದ್ದಾಳುಗಳ ಕೇಂದ್ರವಾಗಿ ರುವ ರಾಮ ಮಂದಿರದಲ್ಲಿ ಅವ್ಯವಹಾರ ದಂತಹ ಘೋರ ಅಪಚಾರ ನಡೆಯಬಾರದಿತ್ತು. ನಡೆದದ್ದು ಸತ್ಯವಾದರೆ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ರಾಮಮಂದಿರ ವಿಶ್ವಸ್ಥಮಂಡಳಿ ಟ್ರಸ್ಟ್ ಸದಸ್ಯರಾದ ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಜಿಲ್ಲೆಯ ಮೂವರು ರೌಡಿ ಶೀಟರ್ಗಳ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಶ್ರೀ ಕ್ಷೇತ್ರ ಕಟೀಲು ದೇವಾಲಯದಲ್ಲಿ ನಡೆದ ತುಳುವರ್ಲ್ಡ್ ಫೌಂಡೇಶನ್ನ ಆಡಳಿತ ಮಂಡಳಿ ಸಭೆಯಲ್ಲಿ 2026–27ನೇ ಸಾಲಿನ ಅಧ್ಯಕ್ಷರಾಗಿ ಶ್ರೀಮತಿ ಭಾನುಮತಿ ಶೆಟ್ಟಿ ಕಕ್ವಗುತ್ತು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ವಸಂತ ರೈ ಕುತ್ತೆತ್ತೂರು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಆರೋಪದ ಬೆನ್ನಲ್ಲೇ ರಾಮಮಂದಿರ ಟ್ರಸ್ಟ್ನ ಉನ್ನತ ಹುದ್ದೆಯಲ್ಲಿದ್ದ ಚಂಪತ್ ರಾಯ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.
ನಿಷೇಧಿತ ಮಾದಕವಸ್ತು ಎಂಡಿಎಂಎಯನ್ನು ಕುಳಾಯಿ ಗುಡ್ಡೆ ಪರಿಸರದ ಮನೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಆರೋಪಿ ಹೊಸಬೆಟ್ಟು ಕುಳಾಯಿಯ ಅಣ್ಣಪ್ಪ ಸ್ವಾಮಿ ಯಾನೆ ಮನು (26) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯ ಮುಂಡ್ಕಾ ಕೈಗಾರಿಕಾ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭೀಕರ ದುರಂತವೊಂದು ಸಂಭವಿಸಿದೆ.
ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಂಬದಕೋಣೆ ಸಮೀಪದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಶವಕ್ಕೆ ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಸಂರಕ್ಷಸಿಟ್ಟಿದ್ದ ಶವದ ಗೌರವಯುತ ಅಂತ್ಯಸಂಸ್ಕಾರವನ್ನು ನಗರದ ಬಿಡಿನಗುಡ್ಡೆ ದಹನ ಭೂಮಿಯಲ್ಲಿ ಶುಕ್ರವಾರ ನೆರವೇರಿಸಲಾಯಿತು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ರಾಜ್ಯ ಸಮಿತಿಯ ಆಶ್ರಯದಲ್ಲಿ ಜುಲೈ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ದಲಿತ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಮಹಿಳೆಯರಿಗೂ ಸಮಾನ ಸ್ವಾತಂತ್ರ್ಯ ಮತ್ತು ಅವಕಾಶಗಳನ್ನು ನೀಡಬೇಕು.
ಮಲ್ಪೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಡಿ 19 ವರ್ಷದ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದು, ₹1.52 ಲಕ್ಷ ಮೌಲ್ಯದ ಮಾದಕ ವಸ್ತು, ಸ್ಕೂಟರ್ ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.