Showing 20 of 20335 articles • Page 42 of 1017
ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಮೃತಪಟ್ಟ ತಂದೆಯ ಮರಣ ಪ್ರಮಾಣ ಪತ್ರವನ್ನು ಕೇಳಿದ ಮಗನಿಗೂ ಮರಣ ಪತ್ರವನ್ನು ನೀಡಿ, ಮೈಸೂರು ಮಹಾನಗರ ಪಾಲಿಕೆ ಬಾರಿ ಎಡವಟ್ಟು ಮಾಡಿಕೊಂಡಿದೆ.
ಮುಂಗಾರು ಕೈ ಕೊಟ್ಟ ಪರಿಣಾಮವಾಗಿ ಕಪಿಲಾ ನದಿಯ ಒಡಲು ಬರಿದಾಗಿದ್ದು ನೀರಿನ ಹರಿವು ತೀವ್ರ ಇಳಿಮುಖವಾದ ಹಿನ್ನಲೆ ಕಪಿಲೆ ಸೊರಗಿದ್ದಾಳೆ.
ದಕ್ಷಿಣಕಾಶಿ ನಂಜನಗೂಡಿನ ಜನತೆಗೆ ಕುಡಿಯುವ ನೀರಿಗೆ ಸಂಕಷ್ಟ ಎದುರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಖಾಸಗಿ ಶಾಲೆ ಸಿಮೆಂಟ್ ಸ್ಟೇಜ್ ಕುಸಿದು ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯವಾಗಿರುವ ಘಟನೆ ಚಿತ್ರದುರ್ಗದ ಹೊರಪೇಟೆ ಕ್ರೇಸೆಂಟ್ ಶಾಲೆಯಲ್ಲಿ ನಡೆದಿದೆ.
ಉಡುಪಿ ಯಕ್ಷಗಾನ ಕಲಾರಂಗದ ‘ವಿದ್ಯಾಪೋಷಕ್’ ಯೋಜನೆಯಡಿಯಲ್ಲಿ 100ರ ಮನೆ ಹಸ್ತಾಂತರ ಹಾಗೂ ಸೂರು ನೂರರ ಸಡಗರ ಕಾರ್ಯಕ್ರಮವನ್ನು ಜೂ. 28ರಂದು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
ಮೈಸೂರು ಪಬ್ನಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಉಡುಪಿ ಅಬಕಾರಿ ಇಲಾಖೆಯ ವತಿಯಿಂದ ಜಿಲ್ಲೆಯ ಎಲ್ಲ ಸನ್ನದುದಾರರು ಹಾಗೂ ಬಾರ್ ಮಾಲಕರಿಗೆ ಅಗ್ನಿ ಅವಘಡ ಸಂಭವಿಸ ದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಕಾರ್ಯಾಗಾರವನ್ನು ಉಡುಪಿ ಅಬಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು.
ಸಹಕಾರಿ ಸಂಘಗಳ ವ್ಯವಹಾರದಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ತರಬೇತಿ ಅಗತ್ಯ. ಈ ನಿಟ್ಟಿನಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಜಿಲ್ಲೆಯಲ್ಲಿ ಎಲ್ಲಾ ವಗದ ಸಹಕಾರಿಗಳಿಗೆ ನಿರಂತರ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಪರ್ಯಾಯ ಶಿರೂರು ಮಠ ಇದರ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ. 90ರಷ್ಟು ಅಂಕ ಗಳಿಸಿದ ಪ್ರತಿಭಾನ್ವಿತ ಸ್ಕೌಟ್ಸ್- ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವು ಜೂ. 26ರಂದು ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ ತಿಳಿಸಿದ್ದಾರೆ.
ಪೆರ್ಡೂರು ಶ್ರೀ ಅನಂತ ದೇವಸ್ಥಾನದ ಜೀರ್ಣೋದ್ದಾರ ಕಾರ್ಯ ಪ್ರಶಂಸನೀಯ. ಪದ್ಮನಾಭ ಸೃಷ್ಟಿಯ ಪಾಲನೆ ಮಾಡುವ ದೇವರು. ನಮಗೆ ಈ ಅವಕಾಶ ಒದಗಿ ಬಂದಿದೆ.
ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಸಾಮಾಜಿಕ ಕಳಕಳಿಯ ಧ್ಯೇಯದಡಿ ಉಡುಪಿ ಜಿಲ್ಲೆಯ ಸುಮಾರು 50 ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ 15ಲಕ್ಷ ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಜೂನ್ 27ರಂದು ಬೆಳಿಗ್ಗೆ 10.30ಕ್ಕೆ ನಗರದ ಟೌನ್ ಹಾಲ್ನಲ್ಲಿ ನಡೆಯಲಿದೆ ಎಂದು ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಮಣಿಪಾಲದ ಈಶ್ವರನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದ್ಯಪಾನ ಮಾಡಿ ಕಾರು ಚಲಾಯಿಸಿ ಸ್ಕೂಟಿಗೆ ಡಿಕ್ಕಿ ಹೊಡೆದು ಯುವಕನಿಗೆ ಗಂಭೀರ ಗಾಯವಾಗುವಂತೆ ಮಾಡಿದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಅಲ್-ಇಬಾದಾದ್ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ ಬೆಳಿಗ್ಗೆ ಮಣಿಪಾಲದ ಐನಾಕ್ಸ್ (ಸಿನಿಗ್ಯಾಲಕ್ಸಿ) ಮುಂಭಾಗ ಅಪಘಾತಕ್ಕೀಡಾಗಿ ಡಿವೈಡರ್ ಮೇಲೇರಿ ನಿಂತ ಘಟನೆ ನಡೆದಿದೆ.
ಸ್ಯಾಂಡಲ್ವುಡ್ ನಟಿ ಕೃಷಿ ತಾಪಂಡ ಅವರ ಬೆಂಗಳೂರಿನ ನಿವಾಸದಲ್ಲಿ ಉದ್ಯಮಿಯೊಬ್ಬರು ಮೃಪಟ್ಟಿರುವುದು ವರದಿಯಾಗಿದೆ.
ಮುಂಬೈ ಲೋಕಲ್ ಟ್ರೈನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವನನ್ನು ಗಲ್ಲಿಗೇರಿಸಿ ಅಥವಾ ಎನ್ಕೌಂಟರ್ನಲ್ಲಿ ಗುಂಡಿಕ್ಕಿ ಕೊಲ್ಲಿರಿ’ ಎಂದು ಹತ್ಯೆಗೀಡಾದ 22 ವರ್ಷದ ಮಯಾಂಕ್ ಲೋಹಾರ್ ಸಹೋದರ ನ್ಯಾಯಕ್ಕಾಗಿ ಒತ್ತಾಯಿಸುತ್ತಾನೆ.
ಬೆಂಗಳೂರಿನಲ್ಲಿ ಭಾನುವಾರ 75 ವರ್ಷದ ಮಹಿಳೆಯನ್ನು ಅವರ ಮಗಳು ಮತ್ತು ಮೊಮ್ಮಗ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ಮಣಿಪಾಲ ಇದರ 2026ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಪ್ರಭು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ರಿಯಾಜ್ (3ನೇ ಬಾರಿ) ಅವರು ಪುನರಾಯ್ಕೆಯಾಗಿದ್ದಾರೆ.
ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿ ಪರಿಷತ್ತಿನ 2026–27ನೇ ಸಾಲಿನ ಉದ್ಘಾಟನಾ ಸಮಾರಂಭವು 24ನೇ ಮೇ 2026ರಂದು ದೇರಳಕಟ್ಟೆಯ ಫಾದರ್ ಮುಲ್ಲರ್ ಆಡಿಟೋರಿಯಂನಲ್ಲಿ ನೆರವೇರಿತು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ವಿಶೇಷವಾಗಿ S.C.S ಆಸ್ಪತ್ರೆಯ ಸಿಬ್ಬಂದಿಗಳಿಗೆ ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರಿಂದ ಯೋಗ ತರಬೇತಿಯನ್ನು ನೀಡಲಾಯಿತು.
ನೆನ್ನೆ ಮಳವಳ್ಳಿ ತಾಲೂಕಿನ ಮುತತ್ತಿ ಬಳಿಯ ಕಾವೇರಿ ನದಿಯಲ್ಲಿ ಘೋರ ದುರಂತ ಸಂಭವಿಸಿದೆ.