Showing 20 of 19102 articles • Page 42 of 956
ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ತುಂಬೆ, ರಾಷ್ಟ್ರೀಯ ಸೇವಾ ಯೋಜನೆ (NSS), , ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಮಂಗಳೂರು ವಿಶ್ವವಿದ್ಯಾಲಯದ ಕ್ರೈಸ್ತ ಅಧ್ಯಯನ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಪುದು ಇವರ ಸಂಯುಕ್ತ ಸಹಯೋಗದಲ್ಲಿ ವಿಪತ್ತು ನಿರ್ವಹಣಾ ಅಭ್ಯಾಸ ಕಾರ್ಯಕ್ರಮವನ್ನು 22 ಏಪ್ರಿಲ್ 2026 ರಂದು ಬೆಳಿಗ್ಗೆ 10:00 ಗಂಟೆಗೆ DKZP ಸರ್ಕಾರಿ ಪ್ರೌಢಶಾಲೆ, ಸುಜೀರ್, ಪುದು ಇಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.
ಮಂಗಳೂರು: JEE Main 2026ರಲ್ಲಿ 99 ಪರ್ಸೆಂಟೈಲ್ ಮೀರಿದ 25 CFAL ವಿದ್ಯಾರ್ಥಿಗಳು 99.9% ಮೇಲ್ಪಟ್ಟವರು – 4, 99.5% ಮೇಲ್ಪಟ್ಟವರು – 13, 99% ಮೇಲ್ಪಟ್ಟವರು – 25, 97% ಮೇಲ್ಪಟ್ಟವರು – 52. ರಾಷ್ಟ್ರೀಯ ಸರಾಸರಿಗಿಂತ ಸುಮಾರು 10 ಪಟ್ಟು ಹೆಚ್ಚು ಸಾಧನೆ; ಮಂಗಳೂರಿನ ವಿದ್ಯಾರ್ಥಿಗಳ ಈ ಸಾಧನೆ ನಿಜವಾಗಿಯೂ ಹೆಮ್ಮೆಯ ಸಂಗತಿ. ಭಾರತದ ಪ್ರಮುಖ ಇಂಜಿನಿಯರಿಂಗ್ ಸಂಸ್ಥೆಗಳಾದ IIT, NIT, IIITಗಳಿಗೆ ಪ್ರವೇಶ ಪಡೆಯಲು ಅಗತ್ಯವಾದ ಸ್ಪರ್ಧಾತ್ಮಕ ಮಟ್ಟವನ್ನು ತಲುಪಿಸುವಲ್ಲಿ CFAL ಸಂಸ್ಥೆ […]
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ ಚಂದು ಹಾರೀಸ್(33) ಬಂಧಿತ ಆರೋಪಿ.
ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್-2) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 3 ಮಂದಿ ವಿದ್ಯಾರ್ಥಿಗಳು 99 ಪರ್ಸೆಂಟ್ ಗಿಂತ ಅಧಿಕ ಅಂಕವನ್ನು ಪಡೆದು ವಿಶಿಷ್ಟ ಸಾಧನೆ ಗೈದು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ತೇರ್ಗಡೆಯನ್ನು ಹೊಂದಿದ್ದಾರೆ.
ಕರಾವಳಿ ಪ್ರದೇಶದಲ್ಲಿ ಮಾನ್ಯ ಕರ್ನಾಟಕ ಹೈಕೋರ್ಟ್ನ ಸಕ್ಯೂರ್ಟ್ ಪೀಠ ಸ್ಥಾಪನೆಗೆ ಬಹುಕಾಲದಿಂದ ಬೇಡಿಕೆ ಇದೆ. ಇತ್ತೀಚಿಗೆ, ಶಾಶ್ವತ ಹೈಕೊರ್ಟ್ ಪೀಠ ಹೋರಾಟ ಸಮಿತಿ ರಚಿಸಲಾಗಿ ಶ್ರೀ ಐವನ್ ಡಿಸೋಜ, ವಿಧಾನಪರಿಷತ್ ಸದಸ್ಯರ ಸಂಚಾಲಕತ್ವದಲ್ಲಿ ಹಲವು ಸಭೆಗಳು ನಡೆದಿದ್ದು, ವಿವಿಧ ಸಂಘಸಂಸ್ಥೆಗಳ, ಮುಖ್ಯಸ್ಥರನ್ನು ಹಾಗೂ ಸಮಾಜದ ವಿವಿಧ ವರ್ಗದ ಜನರ ಸಂಪರ್ಕ ಸಭೆಗಳನ್ನು ನಡೆಸಿ, ಹೈಕೋರ್ಟ್ ಶಾಶ್ವತ ಪೀಠ ಸ್ಥಾಪನೆಗಾಗಿ ವಿವಿಧ ಪ್ರಾಧಿಕಾರಗಳಿಗೆ ಮನವಿಗಳನ್ನು ಸಲ್ಲಿಸಲಾಗಿತ್ತು.
ಶಿವಮೊಗ್ಗದಲ್ಲಿ ಐಸಿಸ್ ಭಯೋತ್ಪಾದಕರ ಜೊತೆ ಸೇರಿಕೊಂಡು ವಿದ್ವಂಸಕ ಕೃತ್ಯಕ್ಕೆ ಸಂಚು ನಡೆಸಿದ ಆರೋಪದಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ಬಂಧಿತನಾಗಿದ್ದ ಅರಾಫತ್ ಅಲಿಗೆ ಎನ್ಐಎ ವಿಶೇಷ ನ್ಯಾಯಾಲಯ ಆರು ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪಶ್ಚಿಮ ಏಷ್ಯಾದಲ್ಲಿ ನಿರ್ಮಾಣವಾಗಿರುವ ಯುದ್ಧದ ಆತಂಕದಿಂದಾಗಿ ವಿಮಾನಗಳು ರದ್ದಾಗಿ ಸೌದಿ ಅರೇಬಿಯಾದಲ್ಲಿ ಸಿಲುಕಿಕೊಂಡಿರುವ ಸಾವಿರಾರು ಭಾರತೀಯರನ್ನು ತಕ್ಷಣವೇ ತಾಯ್ನಾಡಿಗೆ ಕರೆತರಲು ‘ಗಲ್ಫ್ ಮಲಯಾಳಿ ಫೆಡರೇಷನ್’ (GMF) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯಾಚರಣೆ ನಡೆಯುತ್ತಿದ್ದು, ದೇವನೂರು ಗ್ರಾಮದಲ್ಲಿ ಅನಧಿಕೃತ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮತ್ತೊಬ್ಬ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದಿದೆ.
ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿಯವರ ವಿರುದ್ಧ ಎಸ್ಪಿ ಎಸ್.ಎಸ್.ಕಾಶಿಯವರು ನೀಡಿರುವ ದೂರಿನ ಬಗೆಗಿನ ಮಾಧ್ಯಮದವರ ಪ್ರಶ್ನೆಗೆ ಡಿಜಿಪಿ ಸಲೀಂ ಉತ್ತರಿಸದೆ ಹೊರಟು ಹೋದರು.
ಕೇಂದ್ರ ಸರ್ಕಾರಕ್ಕೆ ಮಹಿಳೆಯರ ಮೇಲೆ ಕಾಳಜಿ ಇರುತ್ತಿದ್ದರೆ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿದಂತೆ ಶೇ.50 ಮೀಸಲಾತಿ ತರಬೇಕಿತ್ತು ಎಂದು ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ದಾರೆ.
ತಾಲೂಕಿನ ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಕಳ್ಳರು ಕೈಚಳಕ ತೋರಿಸಿದ್ದು ಮನೆಯ ಬೀಗ ಒಡೆದು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ (Gold) ಹಾಗೂ ನಗದು ದೋಚಿರುವ ಘಟನೆ ವರದಿಯಾಗಿದೆ.
ನಗರದ ನಂತೂರು ಜಂಕ್ಷನ್ನಲ್ಲಿ ಎ.18ರಂದು ಸಂಚಾರ ನಿಯಂತ್ರಣ ಮಾಡುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ಅವಾಚ್ಯ ಪದ ಬಳಸಿ ಬೈದು, ಹಲ್ಲೆ ನಡೆಸಿ, ಮೊಬೈಲ್ ಕಿತ್ತು ನೆಲಕ್ಕೆ ಎಸೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ನಗರದ ಸಂಚಾರ ಪೂರ್ವ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮಾಲಿಗೆರೆ ಹಾಲೇಶ ಎಂಬವರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ಯೆನೆಪೋಯ ವೈದ್ಯಕೀಯ ಕಾಲೇಜು ಇದರ ಅಂಗ ಸಂಸ್ಥೆಯಾಗಿರುವ ಈ ಕಾಲೇಜಿನಲ್ಲಿ 22ನೇ ಪದವಿ ಪ್ರದಾನ ಸಮಾರಂಭವು ಏಪ್ರಿಲ್ 18, 2026ರಂದು ದೇರಳಕಟ್ಟೆಯ ಎಂಡ್ಯೂರನ್ಸ್ ಝೋನ್ನಲ್ಲಿ, Mangalore ನಲ್ಲಿ ವಿಜೃಂಭಣೆಯಿಂದ ನಡೆಯಿತು.
ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಶರದ್ ಪವಾರ್ ಅವರು ಆರೋಗ್ಯ ತಪಾಸಣೆಗಾಗಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಛತ್ತೀಸ್ಗಢದ ಜಶ್ಪುರ ಜಿಲ್ಲೆಯಲ್ಲಿ ಖಾಸಗಿ ವಿಮಾನವೊಂದು ಪತನಗೊಂಡ ಪರಿಣಾಮ ಇಬ್ಬರು ಪೈಲಟ್ಗಳು ಮೃತಪಟ್ಟಿರುವ ದುರ್ಘಟನೆ ಸೋಮವಾರ ನಡೆದಿದೆ.
ಜರ್ಮನಿಯ ಮೋರ್ಸ್ ನಗರದ ಡ್ಯೂಸ್ಬರ್ಗ್ ಪ್ರದೇಶದ ಗುರುದ್ವಾರದೊಳಗೆ ಹಿಂಸಾತ್ಮಕ ಘರ್ಷಣೆ ಭುಗಿಲೆದ್ದಿದ್ದು, ಸುಮಾರು 40 ವ್ಯಕ್ತಿಗಳು ತೀವ್ರ ವಾಗ್ವಾದದಲ್ಲಿ ಸಿಲುಕಿಕೊಂಡ ನಂತರ ಕನಿಷ್ಠ 11 ಜನರು ಗಾಯಗೊಂಡಿದ್ದಾರೆ.
ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಬಂಧಿಸುವಲ್ಲಿ ನಾಯಕನಹಟ್ಟಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಶ್ರೀ ಪರಶುರಾಮ ಕ್ಷೇತ್ರದ ಸುತ್ತ ಅಶುಚಿತ್ವ ತಾಂಡವವಾಡುತ್ತಿದ್ದು ಸ್ವಚ್ಛಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸನಾತನ ಹಿಂದೂ ಸಂಸ್ಕೃತಿಯ ಸಂರಕ್ಷಣೆ-ಸಂವರ್ಧನೆಗಾಗಿ ವಿಶ್ವಮಾನ್ಯ ಯತಿಕುಲಚಕ್ರವರ್ತಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಯತಿ ಸುಶ್ರೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯೊಂದಿಗೆ ಗೀತಾ ಮಂದಿರದ ನೃಸಿಂಹ ಸಭಾ ಭವನದಲ್ಲಿ ಶ್ರೀ ಪುತ್ತಿಗೆ ಸುಗುಣ ಶಿಬಿರವನ್ನು ಉದ್ಘಾಟಿಸಲಾಯಿತು.