Showing 20 of 19102 articles • Page 44 of 956
ಬಿಟ್ಕಾಯಿನ್ ಅಕ್ರಮ ವಹಿವಾಟು ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ರಮೇಶ್ ಉರುಫ್ ಶ್ರೀಕಿ ಜತೆ ಹಣಕಾಸು ವಹಿವಾಟು ನಡೆಸಿರುವ ಕಾರಣಕ್ಕೆ ಕಾಂಗ್ರೆಸ್ನ ಯುವ ಮುಖಂಡ ಮಹಮದ್ ನಲಪಾಡ್ ಹ್ಯಾರಿಸ್ ಮನೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಕೇರಳಂ ರಾಜ್ಯದ ಕಾಸರಗೋಡು ಜಿಲ್ಲೆ ನಗರ ಮೂಲದ 46 ವಯಸ್ಸಿನ ಸಾವು ಬದುಕಿನ ಹೋರಾಟದಲ್ಲಿದ್ದ ಮತ್ತು ಹೃದ್ರೋಗ ಸಂಬಂಧಿ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳಾ ಹೃದ್ರೋಗಿಗೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪರಿಣಿತ ವೈದ್ಯರ ತಂಡವು ವಿನೂತನ ಶೈಲಿಯ ಅಪಾಯಕಾರಿ, ಜೀವರಕ್ಷಕಾ ಹೃದ್ರೋಗ ಚಿಕಿತ್ಸೆಯನ್ನು, ಆಧುನಿಕ ತಂತ್ರಜ್ಞಾನವನ್ನು ಬಳಸಿ, ಯಶಸ್ವಿಯಾಗಿ ನಿರ್ವಹಿಸಿ, ರೋಗಿಗೆ ಜೀವದಾನ ನೀಡಿ ಆರೋಗ್ಯ ಕ್ಷೇತ್ರದಲ್ಲಿ ಒಂದು ಸಾಧನೆ ಮಾಡಿ ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ.
ಅಮೆರಿಕದ ಲೂಸಿಯಾನಾದ ಶ್ರೆವ್ ಪೋರ್ಟ್ ನಲ್ಲಿ ಬೆಳ್ಳಂಬೆಳಿಗ್ಗೆ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ ಎಂಟು ಮಕ್ಕಳು ಮೃತಪಟ್ಟಿದ್ದಾರೆ. ಮೃತಪಟ್ಟ ಎಲ್ಲರೂ 14 ವರ್ಷಕ್ಕಿಂತ ಕೆಳ ವಯಸ್ಸಿನವರು ಎಂದು ತಿಳಿದುಬಂದಿದೆ.
ಬಿಸಿಲಿನ ತೀವ್ರತೆಗೆ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದ ರಸ್ತೆ ಬಳಿ ನಡೆದಿದೆ.
ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ನ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅಕಸ್ಮಿಕ ಸಂಭವಿಸಿದ್ದು ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಭಾರತೀಯ ವಾಣಿಜ್ಯ ಹಡಗುಗಳ ಮೇಲೆ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಪಡೆಗಳು ಗುಂಡಿನ ದಾಳಿ ನಡೆಸಿವೆ.
ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕವು ಕಾರ್ಕಳ ದಾನಶಾಲೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ನಡೆಯಲಿದೆ.
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜ್ಯೋತಿ ನಗರದಲ್ಲಿ ನಡೆದಿದೆ.
ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ.
ಮಧ್ಯಪ್ರಾಚ್ಯ ದೇಶಗಳ ಯುದ್ದದ ಎಫೆಕ್ಟ್ ಈರುಳ್ಳಿ ಬೆಳೆಗಾರರಿಗೂ ತಟ್ಟಿದ್ದು, ಟೊಮ್ಯಾಟೊ ಬೆಲೆ ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದರೆ, ಈರುಳ್ಳಿ ಬೆಲೆ ಪಾತಾಳಕ್ಕೆ ಕುಸಿಯುತ್ತಿದೆ.
ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 20 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿ ನಡೆದಿದೆ.
ಬೈಕ್ ನಲ್ಲಿ ಚಲಿಸುತ್ತಿದ್ದಾಗ ಟೈಯರ್ ಬ್ಲಾಸ್ಟ್ ಆಗಿ ಮೂವರಿಗೆ ಗಂಭೀರ ಗಾಯಗೊಂಡು, ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಣೇಶಪುರ ಗ್ರಾಮದ ಬಿಳಿ ಸಂಭವಿಸಿದೆ.
ಕಾವೇರಿ ನದಿಯಲ್ಲಿ ಈಜಲು ಹೋಗಿ ಆರು ಜನ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರ ವಾಗಿರುವ ಘಟನೆ ಕೆ ಆರ್ ನಗರ ಪಟ್ಟಣದ ಸಮೀಪದ ಹಳೆ ಎಡತೊರೆ ಅರ್ಕೇಶ್ವರ ಸ್ವಾಮಿ ಸಮೀಪದ ಕಾವೇರಿ ನದಿಯಲ್ಲಿ ನಡೆದಿದೆ.
ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ಗ್ರಾಮಸ್ಥರ ನಿದ್ದೆ ಗೆಡಿಸಿದ್ದ ವ್ಯಾಘ್ರನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಸೆರೆ ಹಿಡಿಡಿದ್ದಾರೆ.
ಇಲ್ಲಿನ ಹಿರೆೇಬೆಟ್ಟು ಗ್ರಾಮದ ಭಟ್ರಕೋಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಸಾರ್ವಜನಿಕರಿಗೆ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭವು ಭಾನುವಾರ ನಡೆಯಿತು. ಮಾಹೆ ಮಣಿಪಾಲದ ಸಹಕುಲಾಧಿಪತಿ ಡಾ. ಎಚ್. ಎಸ್,ಬಲ್ಲಾಳ್ ಅವರು ವಿಜ್ಞಾಪನಾ ಪತ್ರವನ್ನು ಬಿಡುಗಡೆ ಮಾಡಿದರು.
ಜೆಪ್ಪಿನಮೊಗರು ಬಳಿ ಬೃಹತ್ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸರು ರವಿವಾರ ಬಂಧಿಸಿದ್ದಾರೆ. ಬಂಧಿತರಿಂದ ₹46,50,000 ಮೌಲ್ಯದ 465.8 ಗ್ರಾಂ MDMA ವಶಪಡಿಸಿಕೊಳ್ಳಲಾಗಿದೆ.
ಮಕ್ಕಳ ಮೊಬೈಲ್ ಗೀಳಿನಿಂದ ಸಮಾಜದಲ್ಲಿ ಅನೇಕ ದುಷ್ಪರಿಣಾಮಗಳು ಆಗುತ್ತಿವೆ. ಈ ನಿಟ್ಟಿನಲ್ಲಿ ಸರಕಾರವು ಮಕ್ಕಳು ಅತಿಯಾಗಿ ಮೊಬೈಲ್ ಬಳಕೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳುತ್ತಿದೆ.
ಸಿಲಿಂಡರ್ ಸ್ಫೋಟಗೊಂಡು ಮನೆಯೊಂದು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ.