Showing 20 of 19102 articles • Page 49 of 956
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ ಹಾಗೂ ಯಕ್ಷಗಾನ ಹರಕೆ ಪ್ರದರ್ಶನ ನಡೆದಿದೆ.
ಇಂದು ಸೌರಮಾನ ಯುಗಾದಿ. ಉಡುಪಿ ಜಿಲ್ಲೆಯಲ್ಲಿ ವೈದಿಕ ಮತ್ತು ಜನಪದ ಸಂಪ್ರದಾಯದಂತೆ ಈ ಹಬ್ಬವನ್ನು ಸಂಪ್ರದಾಯಬದ್ಧವಾಗಿ ಆಚರಿಸಲಾಯ್ತು. ಕೃಷ್ಣಮಠದಲ್ಲಿ ಅಷ್ಟಮಠಾಧೀಶರ ಸಮ್ಮುಖದಲ್ಲಿ ಪಂಚಾಂಗ ಶ್ರವಣ, ಮಹೋತ್ಸವ ಜರುಗಿತು.
ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪಸ ವಂಡ್ಸೆಯಲ್ಲಿ ನಡೆದಿದೆ.
ನಗರ ಹೊರವಲಯದ ಸತ್ಯಮಂಗಲ ಬಳಿಯ ಹಳೆಯ ಟೈರ್ಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ಸಾಕಷ್ಟು ಪ್ರಮಾಣದ ನಷ್ಟವಾಗಿದೆ.
ಇರಾನ್ ಜೊತೆಗಿನ ಯುದ್ಧವು ‘ಮುಕ್ತಾಯದ ಹಂತಕ್ಕೆ ಬಂದಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಒಂದು ವೇಳೆ ತಾನು ಈಗಲೇ ಯುದ್ಧದಿಂದ ಹಿಂದೆ ಸರಿದರೂ, ಇರಾನ್ ತನ್ನನ್ನು ಮರುನಿರ್ಮಾಣ ಮಾಡಿಕೊಳ್ಳಲು ಕನಿಷ್ಠ 20 ವರ್ಷಗಳು ಬೇಕಾಗುತ್ತವೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಮಲೇಷಿಯಾಗೆ ತೆರಳುತ್ತಿದ್ದ ದೋಣಿ ಮುಳುಗಿದ ಪರಿಣಾಮ ಅಂಡಮಾನ್ ಸಮುದ್ರದಲ್ಲಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿಗರು ಸೇರಿ ಕನಿಷ್ಠ 250 ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರು ಮತ್ತು ವಲಸೆ ಸಂಸ್ಥೆ ತಿಳಿಸಿದೆ.
ಉಡುಪಿ ಜಿಲ್ಲೆಯಲ್ಲಿ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಮುಂದಿನ ನಾಲ್ಕು ದಿನಗಳ ಕಾಲ ಉಷ್ಣತೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ತಾಲ್ಲೂಕಿನ ವಿರುಪಾಪೂರು ಸೀಮಾದ ನ್ಯಾಷನಲ್ ಲೇಔಟ್ನ ಶೆಡ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಗ್ರಾಮೀಣ ಪೊಲೀಸರು ದಾಳಿ ನಡೆಸಿ, ಓರ್ವ ಯುವತಿಯನ್ನು ರಕ್ಷಿಸಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
2026ರ ಐಪಿಎಲ್ ಆವೃತ್ತಿಯಲ್ಲಿ ಇನ್ನೂ ಖಾತೆ ತೆರೆಯದ ಕೆಕೆಆರ್ ನಾಯಕನಿಗೆ ಮತ್ತೊಂದು ಶಾಕ್ ಎದುರಾಗಿದೆ. ಚೆನ್ನೈ ವಿರುದ್ಧದ ಸೋಲಿನ ಬಳಿಕ ಅಜಿಂಕ್ಯ ರಹಾನೆಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.
ಎಸ್ಡಿಪಿಐ ಗೆ ಸಚಿವ ಜಮೀರ್ ಫಂಡಿಂಗ್ ಆರೋಪ ವಿಚಾರವಾಗಿ ಮಂಗಳೂರಿನಲ್ಲಿ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿಕೆ ನೀಡಿದ್ದಾರೆ. ಜಮೀರ್ ಅಹಮ್ಮದ್ ಒಂದು ರಾಜಕೀಯ ಪಕ್ಷದ ಮಂತ್ರಿ. ಅವರು ನಮಗೆ ಯಾಕೆ ಫಂಡಿಂಗ್ ಮಾಡ್ತಾರೆ.?. ನಾವು ಕ್ರೌಡ್ ಫಂಡಿಂಗ್ ಮೂಲಕ ಚುನಾವಣೆ ನಡೆಸೋದು. ನಮಗೆ ನಮ್ಮ ಕಾರ್ಯಕರ್ತರು ಹಣ ಕೊಡ್ತಾರೆ ಎಂದರು.
ಕರ್ನಾಟಕ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಸುದ್ದಿಗೋಷ್ಠಿಯಲ್ಲಿಂದು ಆಗ್ರಹಿಸಿದ್ದಾರೆ.
ಅಡುಗೆ ಅನಿಲ ಬೆಲೆ ಏರಿಕೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವೈಫಲ್ಯವನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಬುಧವಾರ ನಗರದ ಕದ್ರಿ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು.
ಇದು ಅತಿ ವೇಗಕ್ಕಿಂತ ಹೆಚ್ಚಾಗಿ ಚಾಲಕನ ಬೇಜವಾಬ್ದಾರಿಯಿಂದ ಈ ಅಪಘಾತ ನಡೆದಿದೆ. ರಸ್ತೆ ತುಂಬಾ ಕಿರಿದಾಗಿದ್ದು, ಎದುರಿನಿಂದ ಮತ್ತೊಂದು ಲಾರಿ ಬರುತ್ತಿದ್ದಾಗ ಟಿಪ್ಪರ್ ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಸ್ಕೂಟರ್ಗೆ ನೇರವಾಗಿ ಡಿಕ್ಕಿ ಹೊಡೆದಿದ್ದಾನೆ.
ಪರ್ಕಳ ಸಮೀಪದ ದೇವಸ್ಥಾನಬೆಟ್ಟು ನಿವಾಸಿ, ತಾಸೆ ನುಡಿಸುವ ಕಲಾವಿದ ಅವಿನಾಶ್ ಸೇರಿಗಾರ ( 33 ) ಅನಾರೋಗ್ಯದಿಂದ ನಿಧನರಾದರು.
ಅಂಬೇಡ್ಕರ್ ಅಥವಾ ಕುವೆಂಪುರವರ ಪ್ರತಿಮೆ ಸ್ಥಾಪನೆ ಆಗಬೇಕಿದ್ದ ವಿವಾದಿತ ಜಾಗದಲ್ಲಿ ಪೊಲೀಸರ ಕಾರು ಪಾರ್ಕಿಂಗ್ ಆಗಿದೆ. ಮೈಸೂರಿನ ಪ್ರತಿಷ್ಠಿತ ಸರ್ಕಲ್ ಮಾತೃಮಂಡಳಿ ವೃತ್ತದಲ್ಲಿ ಕಂಡು ಬಂದ ದೃಶ್ಯ ಇದು. ವೃತ್ತದ ಮಧ್ಯಭಾಗದಲ್ಲಿ ಕಾರ್ ನಿಂತಿದೆ.
ಕಾರು, ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಕೇರಳ ಮೂಲದ ಇಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಜೆಪಿಯ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ಅವರು ನಿಧನರಾಗಿದ್ದಾರೆ.
ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಸರ್ಕಾರದ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಹಾಗೂ ಸಮುದಾಯದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಘಟನೆಗಳನ್ನು ಖಂಡಿಸಿ ‘ನವಹಸಜ ಸಮುದಾಯ ಸಂಘಟನೆ” ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ, ನಕಲಿ ಗುರುತಿನ ಚೀಟಿ ಪಡೆದವರ ವಿರುದ್ಧ ಹಾಗೂ ಅದಕ್ಕೆ ಸಹಕರಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಘಟನೆ ಒತ್ತಾಯಿಸಿದೆ.
ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇಬ್ಬರು ಎಂಬಿಎ ವಿದ್ಯಾರ್ಥಿಗಳು ಡ್ರಗ್ ಓವರ್ ಡೋಸ್ನಿಂದ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ.