Showing 20 of 20313 articles • Page 51 of 1016
ರೈಲ್ವೇ ಲೆವೆಲ್ ಕ್ರಾಸಿಂಗ್ ಗೇಟ್ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗ ಗಂಭೀರವಾಗಿ ಪರಿಗಣಿಸಿದ್ದು, ಕಠಿನ ಕ್ರಮಕ್ಕೆ ಮುಂದಾಗಿದೆ.
ಟೆಂಪೋ ವಾಹನದ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ಗೆ ಮುಖಾಮುಖಿ ಢಿಕ್ಕಿ ಹೊಡೆದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದಟ್ಟಗಳ್ಳಿ ಸಮೀಪದ ‘ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ.
ಮೂರು ದಶಕಗಳ ಕಾಲ ಖಾಕಿ ತೊಟ್ಟು ಜನಸೇವೆ ಮಾಡಿದ್ದ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಕೆ.ಗೋಪಾಲಕೃಷ್ಣ ಅವರು ಇತ್ತೀಚೆಗೆ ನಿವೃತ್ತರಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ‘ಕೈ’ ಹಿಡಿದಿದ್ದಾರೆ.
ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯೊಳಗೆ ನೇಣುಬಿಗಿದು ಆತ್ಮಹತ್ಯೆಗೈದ ಘಟನೆ ಭಾನುವಾರ ಸಂಜೆ ಸೋಮೇಶ್ವರ ಬಸ್ಸು ತಂಗುದಾಣದ ಬಳಿ ನಡೆದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪಗಳು ಆತಂಕಕಾರಿ ಬೆಳವಣಿಗೆಯಾಗಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಪರ್ಯಾಯ ಪೀಠಾಧಿಪತಿಗಳಾದ ಶೀರೂರು ಮಠದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟಿದ್ದಾರೆ.
ಸೇವೆ ಮತ್ತು ತ್ಯಾಗದ ಪರಿಶ್ರಮದೊಂದಿಗೆ ಸಮಾಜವನ್ನು ಕಟ್ಟಿದಾಗ ಸುದೃಢ ಸಮಾಜ ನಿರ್ಮಾಣವಾಗುತ್ತದೆ ಎಂದು ಮಂಗಳೂರು ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ನುಡಿದರು.
ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ನಂದಿನಿ ಮಿಲ್ಕ್ ಪಾರ್ಲರ್ ಅಂಗಡಿ ನಿರ್ಮಾಣ ಮಾಡುತ್ತಿರುವುದಕ್ಕೆ ಮಾಜಿ ಶಾಸಕ ಬಿ. ಹರ್ಷವರ್ಧನ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ಭಾರತದಲ್ಲಿ ಟೆಲಿಗ್ರಾಮ್ ಆ್ಯಪ್ ಅನ್ನು ನಿಷೇಧ ಮಾಡಿ ಆದೇಶ ಹೊರಡಿಸಿದೆ. ಅಸಲಿಗೆ, ದೇಶದಲ್ಲಿ ಜೂನ್ 22ರವರೆಗೆ ಭಾರತದಲ್ಲಿ ನೀಟ್ ಮರು ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ನೀಟ್ ಪರೀಕ್ಷೆಗೆ ತೊಂದರೆ ತರುವಂತಹ ಕೃತ್ಯಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಇಂತಹ ಮಹತ್ವದ ನಿರ್ಧಾರ ಕೈಗೊಂಡಿದೆ.
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಒಂದು ವರ್ಷದಿಂದ ಮಹತ್ತರ ಪಾತ್ರ ವಹಿಸಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಬಾರದು ಎಂಬ ಅಭಿಯಾನ ಮತ್ತೆ ಆರಂಭಗೊಂಡಿದೆ.
ಮಹಿಳೆಯರು ಮತ್ತು ಲಿಂಗಪರಿವರ್ತಿತರಿಗೆ ಉಚಿತ ಬಸ್ ಪ್ರಯಾಣವನ್ನು ನೀಡುವ ಕೇರಳ ಸರ್ಕಾರದ ಪ್ರಿಯದರ್ಶಿನಿ ಯೋಜನೆಯಿಂದ ಜನರು ಸಂತೋಷಗೊಂಡಿದ್ದಾರೆ.
ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ-ಬಿಲ್ಲೆ ರಸ್ತೆಯ ಡಿಪ್ಪೋ ಎಂಬಲ್ಲಿ ಜೂನ್ 13 ರಂದು ಬೆಳಗ್ಗಿನ ಜಾವ ಪಿಕಪ್ ವಾಹನವೊಂದು ಆಯತಪ್ಪಿ ಬಿದ್ದಿರುವ ವಾಹನದಲ್ಲಿ ಅಕ್ರಮ ಜಾನುವಾರು ಸಾಗಿಸುತ್ತಿದ್ದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಉಪ-ನಿರೀಕ್ಷಕರಿಗೆ ಬಂದ ಮಾಹಿತಿ ಆಧರಿಸಿ,
ಮನೆಯ ಮುಂಭಾಗದಲ್ಲಿದ್ದ ತೆಂಗಿನ ಮರ ತುಂಡಾಗಿ ಮನೆಯ ಅಂಗಳಕ್ಕೆ ಬಿದ್ದ ಘಟನೆ ಸುಳ್ಯದ ಪೈಚಾರ್ನಲ್ಲಿ ನಡೆದಿದೆ.
ಉಡುಪಿ : ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ ದರ್ಶನ ಪಡೆದರು. ಈ ವೇಳೆ ದೇವಳದಲ್ಲಿ ನಡೆದ ಚಂಡಿಕಾ ಹೋಮದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ವಿಜಯೇಂದ್ರ ಅವರೊಂದಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಉಪಸ್ಥಿತರಿದ್ದರು. ದೇವಿ ದರ್ಶನದ ಬಳಿಕ ಮುಖಂಡರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ ವಿಜಯೇಂದ್ರ, ಪಕ್ಷದ ಸ್ಥಳೀಯ ಯುವ ನಾಯಕರನ್ನು ಭೇಟಿ ಮಾಡಿ […]
ನಗರದ ತ್ರಿವೇಣಿ ಸರ್ಕಲ್ ಸಮೀಪ ಬೈಕ್ನಲ್ಲಿ ಎಣ್ಣೆಯ ಕ್ಯಾನ್ ಸಾಗಿಸುತ್ತಿದ್ದ ವೇಳೆ ಅದು ಆಯತಪ್ಪಿ ರಸ್ತೆಗೆ ಬಿದ್ದ ಪರಿಣಾಮ ಎಣ್ಣೆ ರಸ್ತೆ ಮೇಲೆ ಸೋರಿಕೆಯಾಗಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಜ್ಞಾನವಿಕಾಸ ಯೋಜನೆಯ ಅಂತರ್ಗತವಾಗಿ ವಾಲ್ಪಾಡಿ ಗ್ರಾಮದ ಪೆರಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 15ರಂದು ಶಿಕ್ಷಣದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪಾತ್ರದ ಕುರಿತು ಸಂವಾದ ಚರ್ಚೆ ನಡೆಯಿತು.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.
ರಸ್ತೆಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಉಪನ್ಯಾಸಕ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಗಡಿ ತೆಲಂಗಾಣದ ಗುಡೆಬಲ್ಲೂರು ಗ್ರಾಮದ ಬಳಿ ನಡೆದಿದೆ.
ಅಮೆರಿಕದ ಮಿಸೌರಿ ರಾಜ್ಯದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಹನ್ನೊಂದು ಸ್ಕೈಡೈವರ್ಗಳು ಮತ್ತು ಒಬ್ಬ ಪೈಲಟ್ ಸಾವನ್ನಪ್ಪಿದ್ದಾರೆ.
ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮುದ್ರ ತೀರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಐಟಿ ಕಂಪನಿಯ ಉದ್ಯೋಗಿ ಜೀವನ್ ಭಟ್ಟರಾಯಿ (26) ರೀಲ್ಸ್ ಮಾಡಲು ಹೋಗಿ ಸಮುದ್ರದಲ್ಲಿ ಕಾಣೆಯಾಗಿದ್ದಾರೆ. ಐದು ಜನ ಸ್ನೇಹಿತರೊಂದಿಗೆ ಕುಮಟಾ ಭಾಗಕ್ಕೆ ಪ್ರವಾಸ ಬಂದಿದ್ದ ಯುವಕ ಖಾಸಗಿ ರೆಸಾರ್ಟ್ನಲ್ಲಿ ಮೂರು ದಿನದಿಂದ ತಂಗಿದ್ದರು. ಇಂದು ಚಕ್ ಔಟ್ ಮಾಡಬೇಕಿದ್ದ ಯುವಕ ಸ್ಬೇಹಿತರ ಜೊತೆ ಕಡ್ಲೆ ಸಮುದ್ರತೀರದಲ್ಲಿ ರೀಲ್ಸ್ ಮಾಡಲು […]