Showing 20 of 19102 articles • Page 52 of 956
ಮಂಗಳೂರಿನ ಮೂಡುಬಿದಿರೆ ಸಮೀಪದ ತೋಡಾರ್ ಪಡೋಡ್ಡಿ ಎಂಬಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.
ಎಸ್ಜೆಇಸಿ ಮಹಿಳಾ ಫುಟ್ಬಾಲ್ ತಂಡವು 2026 ಏಪ್ರಿಲ್ 11 ರಂದು ಮೈಸೂರಿನ ಎನ್ಐಇಯಲ್ಲಿ ನಡೆದ ವಿ.ಟಿ.ಯು ರಾಜ್ಯ ಮಟ್ಟದ ಮಹಿಳಾ ಫುಟ್ಬಾಲ್ ಟೂರ್ನಿಯಲ್ಲಿ ಭಾಗವಹಿಸಿ ರನ್ನರ್-ಅಪ್ ಟ್ರೋಫಿಯನ್ನು ಗೆದ್ದಿದೆ.
ಆಹಾರಕ್ಕಾಗಿ ಮುಳ್ಳುಹಂದಿಯನ್ನು ಬೇಟೆಯಾಡಲು ಹೋದ ಚಿರತೆಯೊಂದು ಅದರ ಮುಳ್ಳುಗಳು ಚುಚ್ಚಿದ ಪರಿಣಾಮ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಬಳಿ ನಡೆದಿದೆ.
ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದ ಹಿಂಗೋಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ 4.7 ತೀವ್ರತೆಯ ಭೂಕಂಪನ ಶನಿವಾರ ಬೆಳಗ್ಗೆ ಸಂಭವಿಸಿದೆ. ನೆರೆಯ ನಾಂದೇಡ್ ಮತ್ತು ಪರ್ಭಾನಿ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದೆ. ಈ ಘಟನೆಯಲ್ಲಿ ತಕ್ಷಣಕ್ಕೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
1999ರ ಕಾರ್ಗಿಲ್ ಯುದ್ಧದ ವೀರ, ‘ಲಯನ್ ಆಫ್ ಲಡಾಖ್’ ಎಂದೇ ಖ್ಯಾತರಾಗಿದ್ದ ಮಹಾವೀರ ಚಕ್ರ ಪುರಸ್ಕೃತ ನಿವೃತ್ತ ಕರ್ನಲ್ ಸೋನಮ್ ವಾಂಗ್ಚುಕ್ (61) ಅವರು ಏಪ್ರಿಲ್ 10, ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪ್ರತಿಯೊಂದು ಅಡುಗೆಯಲ್ಲೂ ಕರಿಬೇವಿನ ಎಲೆ ಹಾಕಿಯೇ ಹಾಕುತ್ತೇವೆ. ಅದರಲ್ಲಿರುವ ಔಷಧೀಯ ಗುಣಗಳ ಕಾರಣದಿಂದಲೂ ಆಯುರ್ವೇದದಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇಷ್ಟೆಲ್ಲಾ ಆರೋಗ್ಯಕರ ಗುಣಗಳಿದ್ದರೂ ಕೂಡ ಎಲೆ ಎಲ್ಲರಿಗೂ ಸೂಕ್ತವಲ್ಲ.
ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ರೌಡಿ ಶೀಟರ್ ಕಾರ್ತಿಕ್ ಆಚಾರ್ ವಿರುದ್ಧ ಗಡಿಪಾರು ಆದೇಶವನ್ನು ಹೊರಡಿಸಲಾಗಿದೆ.
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂದು ಪ್ರಿಯಕರನ ಜೊತೆ ಸೇರಿಕೊಂಡು ಹೆತ್ತ ಮಗನನ್ನೇ ತಾಯಿ ಹತ್ಯೆ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ.
ಸಿಲಿಕಾನ್ ಸಿಟಿಯ ವ್ಯಾಪಾರ ಕೇಂದ್ರ ಚಿಕ್ಕಪೇಟೆಯಲ್ಲಿ ಇಂದು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚಿಕ್ಕಪೇಟೆ ಸರ್ಕಲ್ ಬಳಿ ಇರುವ ‘ಫಾಸ್ಟ್ ಫುಡ್’ ಹೆಸರಿನ ಹೋಟೆಲ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಅಂಗಡಿಗೆ ವ್ಯಾಪಿಸಿದೆ.
ನಗರದಲ್ಲಿ ಹರಿಯುವ ಇಂದ್ರಾಣಿ ನದಿಯು ಎಲ್ಲೆಲ್ಲಿ ಕಲುಷಿತವಾಗುತ್ತಿದೆ ಎಂಬುದನ್ನು ಪತ್ತೆ ಹಚ್ಚಲು ಡ್ರೋನ್ ಸರ್ವೆ ನಡೆಸುವ ಚಿಂತನೆ ಇದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ತಿಳಿಸಿದ್ದಾರೆ.
ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಪರೂಪದ ಯಾಗ ನಡೆಯುತ್ತಿದೆ.
ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ಅದ್ಧೂರಿಯಾಗಿ ಮೂಡಿ ಬಂದಿರುವ ರಂಜಿತ್ ಸಿ. ಬಜಾಲ್ ನಿರ್ದೇಶನದ “90 ML” ತುಳು ಸಿನಿಮಾ ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿಯಾಗಿ ತೆರೆಕಂಡಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಸಿನಿಮಾದ ನಾಯಕ ನಟ ವಿನೀತ್ ಕುಮಾರ್ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ವರದಿಯಾಗಿದೆ.
ಬಸ್ಗೆ ಕಂಟೇನರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪೊಲೀಸರು ಸೇರಿದಂತೆ 32 ಮಂದಿ ಗಾಯಗೊಂಡಿರುವ ಘಟನೆ ಕೊಯ್ಲಾಂಡಿಯಲ್ಲಿ ಇಂದು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಂದೇ ಭಾರತ್ ರೈಲುಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸುತ್ತಿರುವುದು ಹೆಚ್ಚಾಗುತ್ತಿದೆ. ಕೇರಳದ ಎರ್ನಾಕುಲಂನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿಗೆ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದು, ರೈಲಿನ ಗಾಜುಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ತನ್ನ ದಿನಪೂರ್ತಿ ನಡೆದ ಸಾಂಸ್ಕೃತಿಕ ಉತ್ಸವ “ಮಿಲಾನ್ 2026” ಅನ್ನು ಏಪ್ರಿಲ್ 10, 2026ರಂದು ಭವ್ಯ ಸಂಜೆ ಕಾರ್ಯಕ್ರಮದೊಂದಿಗೆ ಯಶಸ್ವಿಯಾಗಿ ಸಮಾಪ್ತಿಗೊಳಿಸಿತು. ಈ ಕಾರ್ಯಕ್ರಮವು ಸೃಜನಶೀಲತೆ ಮತ್ತು ವೈವಿಧ್ಯದ ಸಂಭ್ರಮವನ್ನು ಪ್ರತಿಬಿಂಬಿಸಿತು.
ಪ್ರೀತಿ ಅನ್ನೋದು ಬದುಕಿಗೆ ದಾರಿಯಾಗಬೇಕಿತ್ತು, ಆದರೆ ಇಲ್ಲೊಬ್ಬ ಯುವಕನ ಪಾಲಿಗೆ ಅದೇ ಪ್ರೀತಿ ಮರಣಶಾಸನವಾಗಿದೆ. ಪ್ರೀತಿಸಿದ ಹುಡುಗಿಯ ಮಾನಸಿಕ ಕಿರುಕುಳ ತಾಳಲಾರದೆ 22 ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಸಮೀರ್ ಎಂಬಾತನಿಂದ ಹಿಂದೂ ಯುವತಿಗೆ ಲವ್ ಜಿಹಾದ್ ಬಲೆಗೆ ಬಿದಿದ್ದು, ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆ ಎದುರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜಮಾಯಿಸಿದರು.
ಮನೆಗೇ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ರಾತ್ರೋರಾತ್ರಿ ಮನೆಗೆ ನುಗ್ಗಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆಯಾದ ಯುವಕ ಎಂಬ ಮಾಹಿತಿ ತಿಳಿದು ಬಂದಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಸೆಂಟರ್ ಫಾರ್ ಅಡ್ವಾನ್ಸ್ ಲರ್ನಿಂಗ್ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದು, ಸಂಸ್ಥೆಯ ಶೇ.100ರಷ್ಟು ಫಲಿತಾಂಶ ಪಡೆದಿದೆ.