Showing 20 of 19289 articles • Page 527 of 965
ಮನೆಯ ಬಾವಿಯ ಆವರಣ ಸ್ವಚ್ಛಗೊಳಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ.
ಕುಮಾರ ಸ್ವಾಮಿ ಬಗ್ಗೆ ಜಮೀರ್ ಹೇಳಿಕೆ ವಿಚಾರವಾಗಿ ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಬಗ್ಗೆ ಜಮೀರ್ ಹೇಳಿಕೆ ಸರಿಯಲ್ಲ ಎಂದರು.
ಮೀನು ಸಾಗಿಸುವ ಇನ್ಸುಲೇಟರ್ ವಾಹನವೊಂದರಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಘಟನೆ ಶಿರೂರು ಕರಿಕಟ್ಟೆ ಬಳಿ ನಡೆದಿದೆ. ಇನ್ಸುಲೇಟರ್ ವಾಹನ ಪಲ್ಟಿಯಾದ ಪರಿಣಾಮ ಈ ಘಟನೆ ಬೆಳಕಿಗೆ ಬಂದಿದೆ.
ಲೋಕಯುಕ್ತ ನೋಟಿಸ್ ವಿಚಾರವಾಗಿ ಸಚಿವ ಜಮೀರ್ ಹೇಳಿಕೆ ನೀಡಿದ್ದು, ನೋಟಿಸ್ ಬಂದದ್ದು ನನಗೆ ಗೊತ್ತಿಲ್ಲ
ಮೈಸೂರು ತಹಶೀಲ್ದಾರ್ ಎಂ.ಮಹೇಶ್ ಕುಮಾರ್ ಅವರು ಶುಕ್ರವಾರ ಜೈಪುರದ ಮಧೂರು ಪ್ರದೇಶಕ್ಕೆ ಭೇಟಿ ನೀಡಿ ಬಗರ್ ಹುಕುಂ ಯೋಜನೆಯಡಿ ರೈತರಿಗಾಗಿ ನಡೆಯುತ್ತಿರುವ ಭೂ ವಿವಾದ ಪರಿಹಾರ ಪ್ರಕ್ರಿಯೆಯನ್ನು ಪರಿಶೀಲಿಸಿದರು.
ನವಜಾತ ಶಿಶುವನ್ನು ಕೊಂದ ಆರೋಪದ ಮೇಲೆ ಬಾಲಕಿಯ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ಯದಾದ್ಯಂತ ಮದ್ಯ ಮಾರಾಟವನ್ನು ಇದೇ ತಿಂಗಳ 20ರಂದು ಬಂದ್ ಗೊಳಿಸಿ ಪ್ರತಿಭಟಿಸುವ ಕರೆ ನೀಡಿದ ಬೆನ್ನಲ್ಲೇ ಮೈಸೂರಿನಲ್ಲಿ ಫೆಡರೇಷನ್ ಆಫ್ ವೈನ್ ಮರ್ಚೆಂಟ್ ಅಸೋಸಿಯೇಷನ್ ಕರೆ ನೀಡಿರುವ ಮದ್ಯದಂಗಡಿ ಬಂದ್ಗೆ ನಮ್ಮ ಬೆಂಬಲವಿಲ್ಲ ಎಂದು ರಾಜ್ಯ ಲಿಕ್ಕರ್ ಮರ್ಚೆಂಟ್ ಡೆವಲಪ್ಮೆಂಟ್ ಕೋ-ಅಪರೇಟಿವ್ ಸೊಸೈಟಿ ಹೇಳಿದೆ.
ಡಿಸೆಂಬರ್ 20, 21 ಮತ್ತು 22 ರಂದು ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರೂಪಿಸಿರುವ ಪ್ರಚಾರ ರಥವನ್ನು ತಾಲೂಕಿನ ಸಂತೇಬಾಚಹಳ್ಳಿ ಗ್ರಾಮದಲ್ಲಿ ಸಾಹಿತ್ಯಾಸ್ತರು ಮತ್ತು ತಾಲೂಕು ಕಸಾಪ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿದರು.
ಸುಬ್ರಹ್ಮಣ್ಯ, ಕಸ್ತೂರಿ ರಂಗನ್ ವಿರೋಧಿಸಿ ನ.15ರ ಗುಕ್ರವಾರ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದರಿಯನ್ನ ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ನಡೆಸಿದ ಆರೋಪ
ವಿವಾದಕ್ಕೆ ಸಂಬಂಧಿಸಿ ವಿಹಿಂಪ ಪರವಾಗಿ ಸಲ್ಲಿಸಿದ ಅರ್ಜಿಯೊಂದನ್ನು ಮಂಗ ಳೂರಿನ ಸಹಾಯಕ ಆಯುಕ್ತರ ನ್ಯಾಯಾಲಯ ತಿರಸ್ಕರಿಸಿದೆ.
ಪೊಲೀಸರ ಕೈಗೆ ಸಿಗದೆ ಕೋಟಿಗಟ್ಟಲೆ ಹಣವನ್ನು ಲೂಟಿ ಮಾಡುತ್ತಿರುವ ಸೈಬರ್ ವಂಚಕರೂ ಇದೀಗ ಪೊಲೀಸ್ ಬಲೆಗೆ ಬೀಳಲಾರಂಭಿಸಿದ್ದಾರೆ.
ಕದ್ರಿ ಪೊಲೀಸ್ ಠಾಣೆ ಮುಂಭಾಗ ಯುದ್ದ ಸ್ಮಾರಕದ ಬಳಿ ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಅಣ್ಣನ ಉತ್ತರ ಕ್ರಿಯೆ ಸಿದ್ಧತೆ ವೇಳೆ ವಿದ್ಯುತ್ ಪ್ರವಹಿಸುತ್ತಿದ್ದ ಶಾಮಿಯಾನ ಕಂಬ ಸ್ಪರ್ಶಿಸಿ ಸಹೋದರಿ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ.
ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಹಾಗೂ ಸೃಷ್ಟಿ ನೃತ್ಯ ಕಲಾ ಕುಟೀರ ಉಡುಪಿ ಇದರ ಜಂಟಿ ಆಶ್ರಯದಲ್ಲಿ “ನೃತ್ಯೋತ್ಸವ-2024” ಕಾರ್ಯಕ್ರಮವನ್ನು ಇದೇ ನ.16 ಮತ್ತು 17ರಂದು ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸೃಷ್ಟಿ ನೃತ್ಯ ಕಲಾ ಕುಟೀರದ ಮುಖ್ಯಸ್ಥೆ ಮಂಜರಿ ಚಂದ್ರ ತಿಳಿಸಿದರು.
ಉಡುಪಿ ಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಹಾಗೂ ಬುಡೋಕಾನ್ ಕರಾಟೆ ಆ್ಯಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ಎರಡು ದಿನಗಳ ‘4ನೇ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್’ ಅನ್ನು ನ.16 ಮತ್ತು 17ರಂದು ಉಡುಪಿ ಶ್ರೀಕೃಷ್ಣಮಠದ ಮಧ್ವಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಿವಕುಮಾರ್ ಅಂಬಲಪಾಡಿ ತಿಳಿಸಿದರು.
ಶ್ರೀನಗರಕ್ಕೆ ಸಂಚರಿಸುವ ರಾಜ್ಯ ರಸ್ತೆ ಸಾರಿಗೆ ಬಸ್ಸು. ಸಾರ್ವಜನಿಕರು ಹಾಗೂ ಕನ್ನಡ ಪ್ರೇಮಿಗಳು ಅಪಾರವಾದ ಸಂತೋಷ ವ್ಯಕ್ತಪಡಿಸಿದ್ದಾರೆ.
ಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ೧೦ನೇ ತರಗತಿಯ ವಿದ್ಯಾರ್ಥಿಗಳಾದ ಅದ್ವೈತ ಕೃಷ್ಣ ಬಿ ಹಾಗೂ ಜಿ ಜ್ವಲನ್ ಜೋಶಿ ಇವರು ಪುತ್ತೂರಿನ ರೇಡಿಯೋ ಪಾಂಚಜನ್ಯ ಸಮುದಾಯ ಬಾನುಲಿ ಕೇಂದ್ರದಲ್ಲಿ ಆಯೋಜಿಸಲಾದ ಚರ್ಚಾಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಸಹಕಾರ ಕ್ಷೇತ್ರದ ಸಾಧನೆಗಾಗಿ ನೀಡಲಾಗುವ ಸಹಕಾರ ರತ್ನ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷರಾದ, ಹಿರಿಯ ಸಹಕಾರಿ ವಿನಯಕುಮಾರ್ ಸೂರಿಂಜೆ ಮತ್ತು ವಿಶ್ವಕರ್ಮ ಸಹಕಾರ ಬ್ಯಾಂಕ್ ಹಾಗೂ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಇವರು ಆಯ್ಕೆಯಾಗಿದ್ದಾರೆ.
ಗಡಿಯ ಪಶ್ಚಿಮ ಘಟ್ಟದಲ್ಲಿ ಕಾನನಗಳ ನಡುವೆ ನಾಟ್ಯಾಂಗಿಯಂತೆ ಚೆಲುವನ್ನು ಪ್ರದರ್ಶಿಸಿ, ಭೋರ್ಗರೆದು ಇಳೆಯೆಡೆಗೆ ಧುಮುಕುವ ಕಲ್ಯಾಳ ಜಲಪಾತವನ್ನು ಹೆಚ್ಚಿನವರು ಹತ್ತಿರದಿಂದ ವೀಕ್ಷಿಸಿರಲಾರರು.
ಪತಿಯ ಅಗಲುವಿಕೆಯಿಂದ ಮನನೊಂದ ಅಂಗನವಾಡಿ ಟೀಚರ್ ಒಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ನಡೆದಿದೆ.