Showing 20 of 19289 articles • Page 530 of 965
ಸಾಂಸ್ಕೃತಿಕ ನಗರಿ ಮೈಸೂರಿನ ಗಲ್ಲಿಗಳಲ್ಲಿ ಗಾಂಜಾ ಸರಬರಾಜಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದ ಬೆನ್ನಲ್ಲೇ ನಗರದ ಉದಯಗಿರಿ ಠಾಣೆ ಪೊಲೀಸರು ಭರ್ಜರಿ ಬೇಟೆಯಾಡಿದ್ದು ಸುಮಾರು 38.60 ಲಕ್ಷ ಮೌಲ್ಯದ 154 ಕೆಜಿ 450 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಖ್ಯಾತ ವಿಮಾನಯಾನ ತರಬೇತಿ ಸಂಸ್ಥೆ ಬರ್ಡ್ ಏವಿಯೇಷನ್ ಅಧಿಕೃತ ಪ್ರಾಂಚೈಸಿ ಸಂಸ್ಥೆಯು ಪುತ್ತೂರಿನ ಎ.ಪಿ.ಎಂ.ಸಿ ರಸ್ತೆಯ ಮಾನೈ ಅರ್ಕ್ ಕಟ್ಟಡದಲ್ಲಿ ಶ್ರೀ ಪ್ರಗತಿ ವಿಸ್ತಾರ ಏವಿಯೇಷನ್ ಆ್ಯಂಡ್ ಮ್ಯಾನೇಜ್ಮೆಂಟ್ ಎಂಬ ಹೆಸರಿನೊಂದಿಗೆ ಮೊದಲ ಬ್ಯಾಚ್ ನವೆಂಬರ್ 13 ರಂದು 42 ವಿದ್ಯಾರ್ಥಿಗಳೊಂದಿಗೆ ಆರಂಭಗೊಂಡಿತು.
ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮವು ಇದೇ ನ.17 ಮತ್ತು ನ.18 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಶತಮಾನೋತ್ತರ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ತಿಳಿಸಿದರು.
ಇವತ್ತು ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಗಳಲ್ಲಿ ಬಿರುಸಿನ ಮತದಾನ ನಡೆದಿದೆ. ಮೂರೂ ಕಡೆ ನಮಗೆ ಉತ್ತಮ ವಾತಾವರಣ ಇದೆ. ಸಂಡೂರು ಉಪಚುನಾವಣೆ ಪ್ರಚಾರದಲ್ಲಿ ನಾನು ಭಾಗವಹಿಸಿದ್ದೇನೆ. ಮೂರೂ ಕಡೆ ನಿಶ್ಚಿತವಾಗಿ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ ಸುನಿಲ್ ಕುಮಾರ್ ಭವಿಷ್ಯ ನುಡಿದಿದ್ದಾರೆ.
ಮಿಲಾಗ್ರಿಸ್ ಕಾಲೇಜು ಮಂಗಳೂರು ಇದರ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಐಕ್ಯೂ ಎಸಿಯ ಸಹಯೋಗದೊಂದಿಗೆ ಒಂದು ದಿನದ ಟೆಕ್ಟೋನಿಕ್ ಪಿಯುಸಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರ ಮಟ್ಟದ ಐಟಿ ಫೆಸ್ಟ್ ಉದ್ಘಾಟನೆಗೊಂಡಿತು.
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ, ಮಣಿಪಾಲ ಮಾಹೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ‘ಗೋವಿಂದ ಪೈ ಸಂಶೋಧನ ಸಂಪುಟ-1’ ಕೃತಿಯ ಬಿಡುಗಡೆ ಸಮಾರಂಭ ಇದೇ ನ.16ರಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದರು.
ಬೈಕ್ ಮತ್ತು ಕಾರು ನಡುವೆ ಅಪಘಾತ ನಡೆದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಭೀಕರ ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ‘ಕಾಸ್ಕ್’ ಸಂಸ್ಥೆಯಿಂದ ನವೆಂಬರ್ 10, 2024 ರಂದು ಆರೋಗ್ಯ ತಪಾಸಣಾ ಶಿಬಿರವು ಜರಗಿತು.
ದಯಾ ಮರಣ ಕೋರಿ ಅರ್ಜಿ ಸಲ್ಲಿಸಿದ ವೃದ್ಧ ದಂಪತಿಯ ಜೋಪಡಿ ಧ್ವಂಸಗೊಳಿಸಿದ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಮುಚ್ಚಿಲಪದವು ಎಂಬಲ್ಲಿ ನಡೆದಿದೆ.
ಶ್ರೀ ಸದ್ಗುರು ಹರಿನಾಥ ಮಹಾರಾಜ ಜಾತ್ರಾ ಮಹೋತ್ಸವದ ನಿಮಿತ್ಯವಾಗಿ ಮಹಾರಾಷ್ಟ್ರ ಕರ್ನಾಟಕ ಆಂಧ್ರ ಪ್ರದೇಶ್ ತೆಲಂಗಾಣ ಗಡಿಭಾಗದ ಪಂಢರಪುರ ಎಂದೇ ಕರೆಯಲಾಗುತ್ತಿರುವ ಹೊಳೆಸಮುದ್ರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಮೂರು ದಿನ ಜಾತ್ರೆ ಜರುಗಲಿದೆ.
ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್, ಕುಂತಳನಗರ ಇದರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನ ವತಿಯಿಂದ ಎಂಆರ್ ಜಿ ಗ್ರೂಪ್ ನ ಪ್ರಾಯೋಜಕತ್ವದಲ್ಲಿ ಸತತ 3ನೇ ಬಾರಿಗೆ ಎರಡು ದಿನಗಳ ‘ಬೃಹತ್ ಉದ್ಯೋಗ ಮೇಳ
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ವಿವಾದ ವಿಚಾರವಾಗಿ ಮಾಜಿ ಸಚಿವ, ಶಾಸಕ ಸುನೀಲ್ ಕುಮಾರ್ ಪತ್ರಿಕಾಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ಕಾರ್ಕಳದ ಪ್ರವಾಸೋದ್ಯಮದ ಕಗ್ಗೊಲೆ ಮಾಡಿದೆ. ಥೀಂ ಪಾರ್ಕ್ ಗೆ ಸರಕಾರ 4.50 ಕೋಟಿ ಹಣ ಮಂಜೂರಾರರೂ ಸರಕಾರ ಬಿಡುಗಡೆ ಮಾಡಿಲ್ಲ.
ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಏಕದಿನ ಅಂತರ್ ಪಿ ಯು ಕಾಲೇಜು ಸ್ಪರ್ಧೆ ಕ್ಯಾಂಪಸ್ ಕ್ರೋಮ ನವೆಂಬರ್ 11 ರಂದು ಪಿ ಎ ಕ್ಯಾಂಪಸ್ ನಲ್ಲಿ ನೆರವೇರಿತು.
ದೊಡ್ಡಪತ್ರೆ ಗಿಡವನ್ನು ಪ್ರತಿಯೊಬ್ಬರೂ ತಮ್ಮ ಮನೆಯ ಕುಂಡಗಳು ಸೇರಿದಂತೆ ಹಿತ್ತಲಿನಲ್ಲಿ ಬೆಳೆಸುವುದರಿಂದ ಹತ್ತಾರು ಉಪಯೋಗಗಳಿದ್ದು, ಅದರ ಉಪಯೋಗವನ್ನು ಅರಿತು ಬಳಸುತ್ತಾ ಬಂದರೆ ಹತ್ತು ಹಲವು ಆರೋಗ್ಯಕರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ.
ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ರವರು ಪುತ್ತೂರು ಮಂಡಲ ಪ್ರವಾಸ ಮಾಡಿ ಅಟಲ್ ಸದಸ್ಯತನ ನೋಂದಾವಣೆ ಯ ಪ್ರಗತಿ ಬಗ್ಗೆ ಮಾಹಿತಿ ಪಡೆದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 170 ಕೋಟಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಬಾರಿ ಮುಂಗಾರು ಮತ್ತು ಹಿಂಗಾರು ಮಳೆ ಆಶಾದಾಯಕವಾಗಿ ಸುರಿದ ಪರಿಣಾಮ ಅರಣ್ಯ ಪ್ರದೇಶಗಳು ಹಸಿರಿನಿಂದ ಕಂಗೊಳಿಸುತ್ತಿದ್ದು ಆ ಸುಂದರ ದೃಶ್ಯಗಳನ್ನು ನೋಡುವುದೇ ಮನಕ್ಕೊಂದು ಉಲ್ಲಾಸ.
ಸಿದ್ಧರಾಮಯ್ಯ ವ್ಯಕ್ತಿ ಅಲ್ಲ, ಶಕ್ತಿ ಎಂದು ಗುರುತಿಸಲು ಕಾರಣ ಎಚ್.ಡಿ.ದೇವೇಗೌಡರು. ರಾಜ್ಯದ ಮುಖ್ಯಮಂತ್ರಿಯಾಗಿ ಮಾಡಿದ್ದು ನೀವಲ್ಲ, ನಾಡಿನ ಜನರು ಎನ್ನುವುದನ್ನು ಅರಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದರು.
ಅರಬ್ ಸಂಯುಕ್ತ ಸಂಸ್ಥಾನದ ರಾಸ್ ಅಲ್ ಖೈಮಾ ಏಮಿರೇಟ್ಸ್ನಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯೋನ್ಮುಖವಾಗಿರುವ ರಾಕ್ ಕರ್ನಾಟಕ ಸಂಘ ರಾಸ್ ಅಲ್ ಖೈಮಾ ದ ಅಶ್ರಯದಲ್ಲಿ 2024 ನವೆಂಬರ್ 16ನೇ ತಾರೀಕಿನಂದು ರಾಸ್ ಅಲ್ ಖೈಮಾ ಇಂಡಿಯನ್ ಅಸೊಸಿಯೇಶನ್ ಸಭಾಂಗಣದಲ್ಲಿ ಅನಿವಾಸಿ ಕನ್ನಡಿಗರ ಸಮಾವೇಶಕ್ಕೆ ಸಜ್ಜಾಗುತ್ತಿದೆ.