Showing 20 of 19289 articles • Page 531 of 965
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ದೂರು ಸಲ್ಲಿಸಿದೆ.
ಸಂಕಷ್ಟದಲ್ಲಿ ಅಡಕೆ ಬೆಳೆಗಾರರ ಕೈ ಹಿಡಿಯುತ್ತಾ ಬಂದಿರುವ ಹವಾಮಾನ ಆಧರಿತ ಬೆಳೆ ವಿಮೆ ಯೋಜನೆಯಲ್ಲಿ ಈ ಬಾರಿ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಅಡಕೆ ಮತ್ತು ಕಾಳುಮೆಣಸು ಬೆಳೆಗಾರರಿಗೆ 69,44,10,840 ರೂ. ಖಾತೆಗೆ ಜಮೆಯಾಗಿದೆ. ಇಡೀ ರಾಜ್ಯದಲ್ಲೇ ದ.ಕ. ಜಿಲ್ಲೆಗೆ ಹೆಚ್ಚಿನ ವಿಮಾ ಮೊತ್ತ ಪಾವತಿಯಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಉಡುಪಿ ಶ್ರೀ ಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಹಾಗೂ ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ “ಕನಕದಾಸರ 537ನೇ ಜಯಂತಿ ಮಹೋತ್ಸವ” ಹಾಗೂ 351 ಕುಂಭ ಕಳಸ ಮೆರವಣಿಗೆ ಇದೇ ನ. 18ರಂದು ಉಡುಪಿಯಲ್ಲಿ ನಡೆಯಲಿದೆ ಎಂದು ಸಂಘದ ಖಜಾಂಚಿ ವಗೇನಪ್ಪ ಎಳಮಲಿ ತಿಳಿಸಿದರು.
ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಹಾದಿಯಲ್ಲಿ ಮಂಗಳೂರಿನಿಂದ 8 ಕಿ.ಮೀ ದೂರದಲ್ಲಿ ಪ್ರಕೃತಿಯ ಮಡಿಲಲ್ಲಿ ಕಂಗೊಳಿಸುವ ಬೊಂದೆಲ್ ಎಂಬಲ್ಲಿ ರಸ್ತೆಯ ಬಲ ಪಾರ್ಶ್ವದಲ್ಲಿ ಇರುವ ಸಂತ ಲಾರೆನ್ಸರ ಸುಂದರ ದೇವಾಲಯ ಹಾಗೂ ಪುಣ್ಯಕ್ಷೇತ್ರ ಹಲವಾರು ಭಕ್ತಾಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿದೆ.
ಬಾಲಕಿಯರ ಹಾಸ್ಟೆಲ್ ಒಳಗೆ ಆಗಂತುಕ ನುಗ್ಗಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಪಡೀಲ್ ನಲ್ಲಿರುವ ಹಾಸ್ಟೆಲ್ ನವೆಂಬರ್ 6 ರಂದು ನಡೆದಿದೆ.
ಮಂಗಳೂರಿನಲ್ಲಿ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಇಬ್ಬರು ಆರೋಪಿಗಳು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಪರ ಮತಯಾಚನೆ ಆರೋಪ ಕೇಳಿಬಂದಿದ್ದು, ಚುನಾವಣಾಧಿಕಾರಿಗಳು ದಾಖಲಿಸಿದ್ದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಶಿಲ್ಪಿ ಕೃಷ್ಣ ನಾಯಕ್ ರಿಗೆ ಕಾರ್ಕಳ ಪರುಶುರಾಮ್ ಥೀಮ್ ಪಾರ್ಕ್ ನಲ್ಲಿ ಕಂಚಿನ ಪರುಶುರಾಮ್ ಮೂರ್ತಿ ನಿರ್ಮಾಣಕ್ಕೆ ನೀಡಲಾಗಿತ್ತು.
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ನಿರ್ಮಿತಿ ಕೇಂದ್ರದ ಇಂಜಿನಿಯರ್, ಅಧಿಕಾರಿಗಳು ಹಾಗೂ ಶಾಸಕರನ್ನು ಬಂಧಿಸುವ ಪ್ರಮೇಯ ಬರಬಹುದು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಹುಂಜನಕೆರೆ ಗ್ರಾಮದ ಚನ್ನಕೇಶವ ದೇವಾಲಯದಲ್ಲಿ ಕಾರ್ತಿಕ ಮಾಸದ ಪೂಜೆಗೆ ಪೋಷಕರ ಜೊತೆ ತೆರಳಿದ್ದ ಐದು ವರ್ಷದ ಬಾಲಕನ ಮೇಲೆ ದೇವಾಲಯದ ಗೇಟ್ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಹುಂಜನ ಕೆರೆ ಗ್ರಾಮದಲ್ಲಿ ನಡೆದಿದೆ.
ಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ ಐ ಸೇರಿದಂತೆ ಇಬ್ಬರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.
ಕಾರ್ಕಳ ಪರಶುರಾಮ ಮೂರ್ತಿ ರಚಿಸಿದ ಕಲಾವಿದ ಕೃಷ್ಣ ನಾಯ್ಕ್ ಬಂಧನ ವಿಚಾರವಾಗಿ ಉಡುಪಿಯಲ್ಲಿ ಕಾಂಗ್ರೆಸ್ ನಾಯಕ ಉದಯ ಕುಮಾರ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.
ಭ್ರಮರಾಂಬ-ಕಾಡು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಮತ್ತು ಕಾಡು ಮಲ್ಲೇಶ್ವರ ಗೆಳೆಯರ ಸಂಘವು ನವೆಂಬರ್ 15 ರಿಂದ 18 ರವರೆಗೆ ನಡೆಯಲಿರುವ ರೈತ ಸ್ನೇಹಿ ಮಲ್ಲೇಶ್ವರಂ ಕಡಲೆಕಾಯಿ ಪರಿಷೆಯ 8 ನೇ ಆವೃತ್ತಿಯನ್ನು ಘೋಷಿಸಿದೆ.
ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಕಾರ್ಯೋನ್ಮುಖವಾಗಿಸ್ರುವ ಕರ್ನಾಟಕ ಸಂಘ ಶಾರ್ಜಾ ದ ಪ್ರತಿಷ್ಟಿತ “ಮಯೂರ ವಿಶ್ವಮಾನ್ಯ ಕನ್ನಡತಿ ಅಂತರಾಷ್ಟ್ರೀಯ ಪ್ರಶಸ್ತಿ” 2024
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಉಡುಪಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ನವೆಂಬರ್ 14ರಿಂದ 20ರವರೆಗೆ ಉಡುಪಿ ಜಿಲ್ಲೆಯಾದ್ಯಂತ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಗಳು ನಡೆಯಲಿವೆ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.
ಡಬ್ಬಲ್ ಬೋಲ್ ಧಾರಣೆ 500 ರೂ. ಗಡಿ ದಾಟಿ ಮುನ್ನುಗ್ಗಿದೆ. ಜೊತೆಗೆ ಸಿಂಗೇಲ್ ಚೋಲ್ ಧಾರಣೆಯೂ ಏರಿಕೆ ಕಂಡಿದೆ.
ಬೆಳೆಯಲಾದ ನಾಟಿ ಬಿತ್ತನೆ ಮಾಡಲಾಗಿದ್ದ ಭತ್ತದ ಕಟಾವು ಕಾರ್ಯ ಮಂಗಳೂರು ಸಹಿತ ಮೂಡುಬಿದಿರೆ, ಮೂಲ್ಕಿ ಹಾಗೂ ಉಳ್ಳಾಲ ತಾಲೂಕಿನಲ್ಲಿ ಆರಂಭವಾಗಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿರುವ ಅಲ್ಲಮಪ್ರಭು ಸ್ವಾಮಿ ದೇವಾಲಯ ಮತ್ತು ಸಂಬಂಧಿತ ಶಾಸನಗಳು ಮತ್ತು ಅವಶೇಷಗಳು ಕರ್ನಾಟಕ ಪ್ರಾಚೀನ ಸ್ಮಾರಕಗಳ ಕಾಯ್ದೆಯ ಪ್ರಕಾರ ಪ್ರಾಚೀನ ಸ್ಮಾರಕಗಳ ವರ್ಗಕ್ಕೆ ಸೇರುತ್ತವೆಯೇ ಎಂದು ನಿರ್ಧರಿಸಲು ಮೂವರು ಸದಸ್ಯರ ತಜ್ಞರ ಸಮಿತಿಯನ್ನು ರಚಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಕೊಟ್ಟಿಗೆಯಲ್ಲಿ ಹಸುವನ್ನು ಕಟ್ಟಿಹಾಕಿ ಅಲ್ಲಿಯೇ ರೈತ ಮಲಗಿದ್ದ ವೇಳೆ ದಾಳಿ ನಡೆಸಿದ ಹುಲಿ ಹಸುವನ್ನು ಕೊಂದು ಹಾಕಿರುವ ಘಟನೆ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಅಬ್ಬೂರು ಗ್ರಾಮದಲ್ಲಿ ನಡೆದಿದ್ದು ಅದೃಷ್ಟವಶಾತ್ ರೈತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ನವಂಬರ್ ತಿಂಗಳ ಎರಡು ವಾರಗಳ ಕಾಲ ನಡೆಯುವ ಯೋಗ ಶಿಬಿರವು ಮಂಗಳಾದೇವಿ ಸಮೀಪ ರಾಮಕೃಷ್ಣ ಮಠದಲ್ಲಿ ಮಠದ ಅಧ್ಯಕ್ಷರಾದ ಜಿತಕಾಮಾನಂದಜೀ ಮಹಾರಾಜ್ ಉದ್ಘಾಟಿಸಿದರು.