Showing 20 of 19289 articles • Page 535 of 965
ಕನ್ನಡಿಗರ ಕನ್ನಡ ಕೂಟ (ಕನ್ನಡಿಗರು ದುಬೈ) ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಮತ್ತು ಕನ್ನಡ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬಹಳ ಅದ್ಧೂಯಾಗಿ ನೆರವೇರಿಸಲಾಯಿತು.
ವಕ್ಫ್ ಬೋರ್ಡ್ ವಿಷಯದಲ್ಲಿ ಸರಕಾರದ ಕಾನೂನು ತುಂಬಾ ದುರ್ಬಲವಾಗಿದ್ದು, ಇದರಿಂದ ಜನರಿಗೆ ಬಹಳಷ್ಟು ಅನ್ಯಾಯ ಆಗುತ್ತಿದೆ.
ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಹಿಳೆಯು ದಾರುಣವಾಗಿ ಮೃತ್ಯುವಾದ ಹಿನ್ನೆಲೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಚೆಂಬುಗುಡ್ಡೆಯಲ್ಲಿ ಪ್ರತಿಭಟನೆ ನಡೆಯಿತು.
ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಹೊರ ವಲಯ ಪಕ್ಷಿಕೆರೆಯಲ್ಲಿ ನಡೆದಿದೆ
ಚಲಿಸುತ್ತಿದ್ದ ಖಾಸಗಿ ಬಸ್ ವೊಂದು ಕಾರಿನ ಮೇಲೆ ಪಲ್ಪಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ತೀವ್ರ ಸ್ವರೂಪದ ಗಾಯವಾಗಿರುವ ಘಟನೆ ಕರ್ನಾಟಕ ತಮಿಳುನಾಡು ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.
ಎಡವಟ್ಟುಗಳು ಹೇಗೆಲ್ಲ ಆಗುತ್ತವೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.
ರಾಜ್ಯದಲ್ಲಿ ದ್ವಿಚಕ್ರ ವಾಹನ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಲು ಸರ್ಕಾರ ಮತ್ತು ಸಾರಿಗೆ ಇಲಾಖೆ ಪ್ರಯತ್ನಗಳನ್ನು ತೀವ್ರಗೊಳಿಸಿದೆ. ಮಹತ್ವದ ಕ್ರಮವೊಂದರಲ್ಲಿ, ಸಾರಿಗೆ ಇಲಾಖೆ ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕರೆದೊಯ್ಯುವ ದ್ವಿಚಕ್ರ ವಾಹನ ಸವಾರರ ವಿರುದ್ಧ ಕಠಿಣ ಕ್ರಮವನ್ನು ಘೋಷಿಸಿದೆ.
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಮಾಡಿರುವ ಎಲ್ಲಾ ಆರೋಪದ ಬಗ್ಗೆ ಯಾವುದೇ ರೀತಿಯ ತನಿಖೆಗೆ ಸ್ವಾಗತ ಎಂದು ಬ್ಯಾಂಕಿನ ಅಧ್ಯಕ್ಷ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಮಹಾಲಕ್ಷ್ಮಿ ಬ್ಯಾಂಕ್ ನ ಮಲ್ಪೆ ಬ್ರಾಂಚ್ ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ನಡೆದಿದ್ದು, ಅದನ್ನು ಎಸ್ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಶಾಸಕ ರಘುಪತಿ ಭಟ್ ಒತ್ತಾಯಿಸಿದ್ದಾರೆ.
ತ್ಯಾಜ್ಯವಾಗಿ ಮಾರ್ಪಡುವ ವಸ್ತುಗಳನ್ನು ಶಬರಿಮಲೆಗೆ ಭೇಟಿ ನೀಡುವ ಭಕ್ತರು ತಮ್ಮ ಇರುಮುಡಿಕಟ್ಟುವಿನಲ್ಲಿ ಕರ್ಪೂರ, ಅಗರಬತ್ತಿ ತರದಂತೆ ತಿರುವಾಂಕೂರು ದೇವಸ್ವಂ ಮಂಡಳಿ ವಿನಂತಿಸಿದೆ.
ಪದವಿಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರು ಹಾಗೂ ಬಾಲಕಿಯರು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ.
ಕರಾವಳಿಯ ಕಡಲತಡಿಯ ಪುಣ್ಯ ಭೂಮಿಯಲ್ಲಿ ಜನಿಸಿ, ಕನ್ನಡ ಸಾರಸ್ವತ ಲೋಕದ ಬೆಳ್ಳಿತಾರೆಯಾಗಿ ಬೆಳಗಿ, ಕನ್ನಡದ ಶ್ರೇಷ್ಠ ಕತೆಗಾರರಾಗಿ, ನಟರಾಗಿ,ನಾಟಕಕಾರರಾಗಿ, ಪತ್ರಕರ್ತರಾಗಿ, ಬರಹಗಾರರಾಗಿ, ಕನ್ನಡ ತುಳು ಚಿತ್ರಗಳ ನಿರ್ದೇಶಕರಾಗಿ ಸಾರಸ್ವತ ಲೋಕದಲ್ಲಿ ಮಿಂಚಿ ಮರೆಯಾದ ಹೆಮ್ಮೆಯ ಧೀಮಂತ ಸಾಹಿತಿ ವಿಶುಕುಮಾರ್ರವರ ಸ್ಮರಣಾರ್ಥ ಯುವವಾಹಿನಿಯು ಕಳೆದ 20 ವರ್ಷಗಳಿಂದ ವಿಶುಕುಮಾರ್ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.
2021ರಲ್ಲಿ ನಗರವನ್ನೇ ಬೆಚ್ಚಿ ಬೀಳಿಸಿದ್ದು ಮಾತ್ರವಲ್ಲದೆ ಜನರು ತಲೆತಗ್ಗಿಸುವಂತೆ ಮಾಡಿದ್ದ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣದ 3 ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.
ನಾಲ್ಕೈದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ಗೊಂದಲದ ಗೂಡಾಗಿದೆ.
ಇಂದ್ರಾಳಿಯ ರೈಲ್ವೆ ಸೇತುವೆ ಬಳಿ ರೈಲ್ವೆ ಹಳಿಯ ಮೇಲೆ ಛಿದ್ರಗೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಶವ ಗುರುವಾರ ರಾತ್ರಿ ಕಂಡುಬಂದಿದೆ. ವ್ಯಕ್ತಿಯು ಚಲಿಸುತ್ತಿರುವ ರೈಲಿಗೆ ಅಡ್ಡಬಂದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಸಿನರ್ಜಿಯಾ 2024, ಸಹ್ಯಾದ್ರಿ ಆಯೋಜಿಸಿರುವ ಬಹು ನಿರೀಕ್ಷಿತ ವಾರ್ಷಿಕ ನಾವೀನ್ಯತೆ ಮತ್ತು ಉದ್ಯಮಶೀಲತಾ ಕಾರ್ಯಕ್ರಮವು ಇಂದು ರೋಮಾಂಚಕ ಮತ್ತು ಸಾಂಸ್ಕೃತಿಕ ಉದ್ಘಾಟನೆಯೊಂದಿಗೆ ಅಧಿಕೃತವಾಗಿ ಎಂಫಾಸಿಸ್ ಫೌಂಡೇಶನ್ ಸಹ ಪ್ರಯೋಜಕತ್ವ ದೊಂದಿಗೆ ಪ್ರಾರಂಭವಾಯಿತು.
ತೋಟಗಾರಿಕೆ ಕ್ಷೇತ್ರವನ್ನು ಉತ್ತೇಜಿಸುವ ನವೀನ ಕ್ರಮದಲ್ಲಿ, ಕರ್ನಾಟಕದ ತೋಟಗಾರಿಕೆ ಇಲಾಖೆ ಪ್ರಾಯೋಗಿಕ ಆಧಾರದ ಮೇಲೆ ಮೈಸೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ‘ಕಿಸಾನ್ ಮಾಲ್’ ಗಳನ್ನು ಪ್ರಾರಂಭಿಸಲು ಸಜ್ಜಾಗಿದೆ.
ಶ್ರೀ ರಾಮಸೇನೆ ಮಂಗಳೂರು ಇದರ ವತಿಯಿಂದ 21 ನೇ ವರ್ಷದ ದತ್ತಮಾಲಾ ಅಭಿಯಾನದ ಪ್ರಯುಕ್ತ ೬ ನೇ ವರ್ಷದ ದತ್ತ ದೀಪೋತ್ಸವ ಕಾರ್ಯಕ್ರಮ ಶ್ರೀರಾಮಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ಇವರ ನೇತೃತ್ವದಲ್ಲಿ ಮಂಗಳೂರಿನ ಲಕ್ಷೀಭಾಗ್ ಶೇಡಿಗುಡ್ಡೆಯ ಶ್ರೀ ಲಕ್ಷ್ಮೀ ನಾರಾಯಣೀ ದೇವಸ್ಥಾನದಲ್ಲಿ ನೆರವೇರಿತು.
ಜಿಲ್ಲೆಯ ಎಲ್ಲ ಬ್ಯಾಂಕ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸೂಚನೆ ನೀಡಿದರು. ಇನ್ನೂ ಮಾಡದಿದ್ದರೆ ೧೫ ದಿನಗಳಲ್ಲಿ ಸ್ಥಾಪನೆಯನ್ನು ಪೂರ್ಣಗೊಳಿಸಬೇಕು ಎಂದು ಅವರು ಒತ್ತಿ ಹೇಳಿದರು.
ಒಂದು ವಿಭಾಗದಲ್ಲಿ ಬಿರುಕುಗಳು ಕಾಣಿಸಿಕೊಂಡ ನಂತರ ಈಜಿಪುರ ಮೇಲ್ಸೇತುವೆಯ ನಿರ್ಮಾಣ ಸ್ಥಗಿತಗೊಂಡಿದೆ.