Showing 20 of 19290 articles • Page 549 of 965
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ʼಜೈʼ ತುಳು ಸಿನಿಮಾದ ಶೂಟಿಂಗ್ ಗುರುವಾರದಿಂದ (ಅ.24) ಆರಂಭವಾಗಿದೆ. ʼಗಿರ್ಗಿಟ್ʼ ಮತ್ತು ʼಸರ್ಕಸ್ʼ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಸಾಹಸಕ್ಕೆ ಇಳಿದಿದ್ದಾರೆ.
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1600 ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಉಡುಪಿ ಶ್ರೀ ಕೃಷ್ಣ ಮಠದಲ್ಲಿ 51ನೇ ಅಖಿಲ ಭಾರತ ಪ್ರಾಚ್ಯ ವಿದ್ಯಾ ಸಮ್ಮೇಳನ ನಡೆಯುತ್ತಿದೆ. ಪತಂಜಲಿ ಯೋಗ ಪೀಠದ ಯೋಗ ಗುರು ಸ್ವಾಮಿ ರಾಮದೇವ್ ಮಹಾರಾಜ್ ಮೂರು ದಿನಗಳ ಈ ಸಮ್ಮೇಳನ ಉದ್ಘಾಟನೆ ಮಾಡಿದರು.
ಕೇಂದ್ರೀಯ ಕಾರ್ಮಿಕ ಸಂಘಟನೆ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ)ನ ಕರ್ನಾಟಕ ರಾಜ್ಯ ಸಮಿತಿಯು ಅ. 26 ಮತ್ತು 27ರಂದು ಮೈಸೂರಿನಲ್ಲಿ ಎರಡು ದಿನಗಳ ಕಾಲ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನವನ್ನು ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಆಯೋಜಿಸಿದೆ ಎಂದು ಸಮಿತಿಯ ರಾಜ್ಯ ಉಪಾಧ್ಯಕ್ಷ ಕೆ.ವಿ.ಭಟ್ ತಿಳಿಸಿದ್ದಾರೆ.
ಉಡುಪಿ: ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಅವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರು ಸಹಿತ ಒಟ್ಟು 13 ಮಂದಿಯನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಲೂರು ಹೊಯ್ಯಾಣ ನಿವಾಸಿ ಸಚಿನ್ (24), ಆಲೂರು ರಾಮೇಶ್ವರ ನಗರ ನಿವಾಸಿ ಶರತ್ ದೇವಾಡಿಗ (24), ಕೆಂಬೈಲು ನಿವಾಸಿಗಳಾದ ಕಾರ್ತಿಕ್ (22), ಹಾಗೂ ಕೀರ್ತಿಕ್ (20), ಪಡುಕೋಣೆ ನಿವಾಸಿ ಪ್ರಕಾಶ್ (20), ಪಡುಕೋಣೆಯ ಹನುಮಂತನಗರ ನಿವಾಸಿ ಜಗದೀಶ್ (31), ಪಡುಕೋಣೆ ರಾಮಮಂದಿರ ನಿವಾಸಿ […]
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಅವರು ಸ್ಥಳೀಯ ಆಸ್ತಿ ಮಾಲೀಕರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಳ್ಮ ಗ್ರಾಮದ ಕಲ್ಲಪಾಡಿ ಎಂಬಲ್ಲಿ ಆಟೋ ರಿಕ್ಷಾ ಮತ್ತು ಪಿಕಪ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ವರ್ಷದ ಶಾಲಾ ಬಾಲಕಿ ಆಯಿಷಾ ವಾಹಿಬಾ ಮೃತಪಟ್ಟಿದ್ದಾಳೆ.
ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಅರೆಸ್ಟ್ ಆಗಿದ್ದ ನೃತ್ಯ ಸಂಯೋಜಕ ಜಾನಿ ಮಾಸ್ಟರ್ಗೆ ತೆಲಂಗಾಣ ಹೈಕೋರ್ಟ್ ಇಂದು (ಅ.24) ಜಾಮೀನು ಮಂಜೂರು ಮಾಡಿದೆ.
ನಿರ್ಮಾಣ ಹಂತದ ಕಟ್ಟಡ ಕುಸಿದ ಬಿದ್ದ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಕಾರ್ಮಿಕರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಳೆಗಾಲದ ಆರಂಭದಲ್ಲಿ ಉತ್ತುಂಗಕ್ಕೇರಿದ್ದ ರಬ್ಬರ್ ಸಂಗ್ರಹ ಮಟ್ಟ ಈಗ ಕ್ಷೀಣಿಸುತ್ತಿರುವುದರಿಂದ ಕರಾವಳಿಯ ರಬ್ಬರ್ ಬೆಳೆಗಾರರು ಆತಂಕಗೊಂಡಿದ್ದಾರೆ.
ಮಲ್ಲಿಕಟ್ಟೆಯ ಪಿಡಬ್ಲ್ಯೂಡಿ ಪರಿಶೀಲನಾ ಬಂಗಲೆ ಆವರಣದಿಂದ ಬೆಲೆಬಾಳುವ ಮರಗಳನ್ನು ಅನಧಿಕೃತವಾಗಿ ತೆರವುಗೊಳಿಸಿದ್ದಕ್ಕಾಗಿ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ (ಎನ್ಇಸಿಎಫ್) ನೀಡಿದ ದೂರಿನ ನಂತರ ಅರಣ್ಯ ಇಲಾಖೆ ಪಿಡಬ್ಲ್ಯೂಡಿ ಗುತ್ತಿಗೆದಾರನ ವಿರುದ್ಧ ತ್ವರಿತ ಕ್ರಮ ಕೈಗೊಂಡಿದೆ.
ವಿಧಾನ ಪರಿಷತ್ ಉಪಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು ಸಾಧಿಸಿದೆ.
ಪಕ್ಷದ ಮೂಲಕ ತಮ್ಮ ರಾಜಕೀಯ ಪ್ರಸ್ತುತತೆಯನ್ನು ಉಳಿಸಿಕೊಂಡಿರುವ ಸಿ.ಪಿ.ಯೋಗೇಶ್ವರ್ ಅವರು ಮತ್ತೊಂದು ಬದಲಾವಣೆಯನ್ನು ಮಾಡಿದ್ದಾರೆ ಇದು ಅವರ ರಾಜಕೀಯ ಜೀವನದಲ್ಲಿ ಆರನೇ ಪಕ್ಷದ ಬದಲಾವಣೆಯಾಗಿದೆ.
ಬನ್ನೇರುಘಟ್ಟ ಜೈವಿಕ ಉದ್ಯಾನದ ಆನೆ ಶಿಬಿರದ ಸೀಗೆಕಟ್ಟೆ ಬಳಿ ಆನೆಗೆ ಸ್ನಾನ ಮಾಡಲು ಹೋಗಿದ್ದ ಮಾವುತನೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಸ್ನೇಹಿತನ ಮನೆಯಲ್ಲಿ 6 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ ವ್ಯಕ್ತಿಯನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಒಂದೂವರೆ ವರ್ಷದ ನಂತರ ಈ ಬಂಧನ ನಡೆದಿದೆ.
ಅರಮನೆ ಮೈದಾನದಲ್ಲಿ ಕಂಬಳ ನಡೆಸುತ್ತಾರೆ ಎಂದು ಹೈಕೋರ್ಟ್ ನಲ್ಲಿ ಆಕ್ಷೇಪ ಅರ್ಜಿ ಸಲ್ಲಿಸಿದ್ದ ಪೆಟಾಗೆ ಮುಖ ಭಂಗವಾಗಿದ್ದು, ಅಕ್ಟೋಬರ್ 26ರಂದು ಕಂಬಳ ಸ್ಪರ್ಧೆ ಆಯೋಜಿಸುತ್ತಿಲ್ಲ ಎಂದು ಬೆಂಗಳೂರು ಕಂಬಳ ಸಮಿತಿ ಪ್ರತಿನಿಧಿಸಿದ್ದ ವಕೀಲ ವಿನೋದ್ ಕುಮಾರ್ ನ್ಯಾಯಾಲಕ್ಕೆ ತಿಳಿಸಿದ್ದಾರೆ.
ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಕೂಡಲೇ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಮನೆಯ ಹಂಚಿನ ನಡುವೆ ಅಡಗಿ ಕುಳಿತ ಹೆಬ್ಬಾವನ್ನು ಕಾರ್ಯಾಚರಣೆ ನಡೆಸುವ ಮೂಲಕ ರಕ್ಷಿಸಲಾಗಿದೆ.
ರಂಗಭೂಮಿ ಕಲಾವಿದನಿಗೆ ತನ್ನ ವೃತ್ತಿಯಲ್ಲಿ ನಿಷ್ಠೆ,ಭಕ್ತಿ ಇದ್ದರೆ ಜೀವನ ನಿರ್ವಹಣೆಗೆ ಯಾವುದೇ ಕೊರತೆ ಉಂಟಾಗದು.