Showing 20 of 19102 articles • Page 55 of 956
ಎಎಸ್ಸೆ ಐತಪ್ಪ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಗುರುಪುರ ಶಾಂಭವಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಪ್ರಕರಣ ನಡೆದಿದ್ದು, ಶೋಧಕಾರ್ಯದ ಬಳಿಕ ಯುವಕನ ಮೃತದೇಹ ಪತ್ತೆಯಾಗಿದೆ.
ಕಾರ್ಕಳ ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳ ವತಿಯಿಂದ ಗುಡ್ಡೆಗುಳಿಗ ದೈವಸ್ಥಾನದಲ್ಲಿ ಕಾಲಾವಧಿ ಕೋಲ ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದಲ್ಲಿ ಸಂಘದ ಮಾಸಿಕ ಪತ್ರಿಕೆ ‘ಸನ್ಮತಿ’ ಮಾರ್ಚ್ ತಿಂಗಳ ಸಂಚಿಕೆಯ ಬಿಡುಗಡೆ ಹಾಗೂ 2025–28ನೇ ಸಾಲಿನ ಗಣ್ಯರೊಂದಿಗೆ ಸಂವಾದ ‘ತಿಂಗಳ ಅಂಗಳ’ ಕಾರ್ಯಕ್ರಮದ ಉದ್ಘಾಟನೆ ಗುರುವಾರ ಉಡುಪಿ ಪತ್ರಿಕಾ ಭವನದಲ್ಲಿ ನಡೆಯಿತು.
ಯುವಿಯೈಟಿಸ್ ಎಂಬುದು ಕಣ್ಣಿನ ಉರಿಯೂತದ ಒಂದು ವಿಧವಾಗಿದೆ. ಇದು ಐರಿಸ್, ಸಿಲಿಯರಿ ಬಾಡಿ, ಮತ್ತು ಕೋರಾಯ್ ಅನ್ನು ಒಳಗೊಂಡಿರುವ ಕಣ್ಣಿನ ಮಧ್ಯದ ಪದರದ ಮೇಲೆ ಪರಿಣಾಮ ಬೀರುತ್ತದೆ. ಇದು ಯಾವುದೇ ವಯಸ್ಸಿನಲ್ಲಿ ಸಂಭವಿಸಬಹುದು ಮತ್ತು ಇದನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ಚಿಕಿತ್ಸೆ ನೀಡದಿದ್ದರೆ, ದೃಷ್ಟಿ ಕಳೆದುಕೊಳ್ಳುವ ಅಪಾಯವಿರುತ್ತದೆ.
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪುಣ್ಯವಸರದಲ್ಲಿ, ಪೂರ್ವ ಸಂಪ್ರದಾಯದಂತೆ ಅರ್ಕುಳ ಬೀಡಿನಿಂದ ಶ್ರೀ ದೈವಗಳ ಭಂಡಾರವನ್ನು ಸಕಲ ಬಿರುದಾವಳಿಗಳೊಂದಿಗೆ ಶ್ರೀ ಕ್ಷೇತ್ರ ಪೊಳಲಿಗೆ ಆರಾಡದ ದಿನ ತರಲಾಗುತ್ತದೆ. ಅದೇ ದಿನ ರಾತ್ರಿ ಶ್ರೀ ಉಳ್ಳಾಕ್ಲು ಮಗೃಂತಾಯಿ ಧರ್ಮದೇವತೆಗಳಿಗೆ ನೇಮ ಸೇವೆಯು ಭಕ್ತಿಭಾವಪೂರ್ಣವಾಗಿ ನೆರವೇರಲಿದೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) “ಗೋ ಫಾರ್ ಗೋಲ್ಡ್–2026” ಎಂಬ ತನ್ನ ವಾರ್ಷಿಕ ಅಥ್ಲೆಟಿಕ್ ಮೀಟ್ ಅನ್ನು 2026 ಏಪ್ರಿಲ್ 07 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಕಾಲೇಜಿನ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಿತು. ಈ ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ವಿಭಾಗ ಹಾಗೂ ಸ್ಪೋರ್ಟ್ಸ್ & ವೆಲ್ನೆಸ್ ವಿಭಾಗ ಆಯೋಜಿಸಿತು.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ವಾಮಂಜೂರು, ತನ್ನ ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ ಮತ್ತು ಏಕತೆಯನ್ನು ಆಚರಿಸುವ ಉದ್ದೇಶದಿಂದ “ಮಿಲನ್ 2026” ಎಂಬ ಭವ್ಯ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸಲು ಸಜ್ಜಾಗಿದೆ. ಈ ಬಹುನಿರೀಕ್ಷಿತ ಕಾರ್ಯಕ್ರಮವು 2026 ಏಪ್ರಿಲ್ 10 ರಂದು ಎಸ್ಜೆಇಸಿ ಆವರಣದಲ್ಲಿ ನಡೆಯಲಿದೆ.
NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ NSUI ನ 56ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ “ಧ್ವಜಾರೋಹಣ” ಕಾರ್ಯಕ್ರಮ ಮಲ್ಲಿಕಟ್ಟೆಯ ಇಂದಿರಾ ಭವನದಲ್ಲಿ ನಡೆಯಿತು.
ರಾಜ್ಯದ ಹವಾಮಾನದಲ್ಲಿ ಮಹತ್ವದ ಏರುಪೇರು ಕಂಡುಬಂದಿದೆ. ಮುಂಬರುವ ಎರಡು ದಿನಗಳ ಹವಾಮಾನ ಮುನ್ಸೂಚನೆಯು ರಾಜ್ಯದ ವಿವಿಧ ಭಾಗಗಳಲ್ಲಿ ವಿಭಿನ್ನ ಹವಾಮಾನ ಪರಿಸ್ಥಿತಿಗಳನ್ನು ಸೂಚಿಸಿದೆ.
ಟಿಯಾನ್ ಶಾನ್ ಪರ್ವತ ಶ್ರೇಣಿಗಳ ಮೈ ನಡುಗಿಸುವ ಚಳಿ, ಆಮ್ಲಜನಕದ ಕೊರತೆ ಮತ್ತು ಅತಿನೇರಳೆ ಕಿರಣಗಳ ನಡುವೆಯೂ ಸವಾಲು ಹಾಕಿ ಬೆಳೆಯುವ ಏಕೈಕ ಸಸ್ಯ ‘ಹಿಮ ಕಮಲ’. ಸುಮಾರು 10,000 ಅಡಿಗಳಿಗಿಂತಲೂ ಹೆಚ್ಚು ಎತ್ತರದಲ್ಲಿ ಮಾತ್ರ ಕಂಡುಬರುವ ಈ ಗಿಡವು ಅರಳಲು ಬರೋಬ್ಬರಿ 5 ರಿಂದ 8 ವರ್ಷ ಬೇಕು.
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ. ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದ್ದು ಎರಡೂ ಕ್ಷೇತ್ರಗಳಿಂದ ಒಟ್ಟು 34 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಲೆಬನಾನ್ ಮೇಲೆ ಕೇವಲ 10 ನಿಮಿಷಗಳಲ್ಲಿ ಇಸ್ರೇಲ್ ವಾಯುಪಡೆ 100 ಕ್ಷಿಪಣಿ ದಾಳಿ ನಡೆಸಿದೆ. ರಾಜಧಾನಿ ಬೈರೂತ್ ಮಧ್ಯಭಾಗ, ಬೆಕಾ ವ್ಯಾಲಿ ಮತ್ತು ದಕ್ಷಿಣ ಲೆಬನಾನ್ನ ಹಿಜ್ಬುಲ್ಲಾ ಕಮಾಂಡ್ ಕೇಂದ್ರಗಳು ಹಾಗೂ ಶಸ್ತ್ರಾಸ್ತ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ.
48 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಮೀರತ್ ನಲ್ಲಿ ನಡೆದಿದೆ.
ಗುರುಪುರ ಶಂಭಾವಿ ನದಿಗೆ ಹಾರಿ ಯುವಕ ಆತ್ಮಹತ್ಯೆ!
ಶೈಕ್ಷಣಿಕ ನಗರಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ನಡೆಯುತ್ತಿದ್ದ ಮಾದಕ ವಸ್ತು ಜಾಲದ ವಿರುದ್ಧ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ.
ಮಾನವೀಯ ಸಂಬಂಧ ಗಟ್ಟಿಗೊಳಿಸುವ ಜಾನಪದ ಕಲೆಗೆ ತನ್ನದೇ ಇತಿಹಾಸವಿದ್ದು, ಅದನ್ನು ಉಳಿಸಿ ಬೆಳೆಸುವುದು ಮುಖ್ಯವಾಗಬೇಕು ಎಂದು ನಾದಗಂಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕಳಲೆ ದೇವಣ್ಣ ಹೇಳಿದರು.
ದೇಶದ ಪ್ರಮುಖ ವಿಮಾನಯಾನ ಸಂಸ್ಥೆ ‘ಆಕಾಸ ಏರ್’, ತನ್ನ ಇನ್-ಫ್ಲೈಟ್ ಆಹಾರ ಸೇವೆಯಾದ ‘ಕೆಫೆ ಆಕಾಸ’ ಮೂಲಕ ಈಸ್ಟರ್ ಹಬ್ಬದ ಪ್ರಯುಕ್ತ ವಿಶೇಷ ಭೋಜನವನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026 ಏಪ್ರಿಲ್ 9ರಂದು ಸಂಜೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ನೈಜೀರಿಯಾ ದೇಶದ ಪ್ರಜೆಯೊಬ್ಬನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿ, ₹25.63 ಕೋಟಿ ವೆಚ್ಚದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.