Showing 20 of 19290 articles • Page 550 of 965
ಥೈಲ್ಯಾಂಡ್ನಲ್ಲಿ ಗಜಾನನಿ ವೇಷ ಧರಿಸಿದ ಟ್ರಾನ್ಸ್ ಇನ್ಫ್ಲುಯೆನ್ಸರ್ನ ವೈರಲ್ ವಿಡಿಯೋ ಆನ್ಲೈನ್ನಲ್ಲಿ ತೀವ್ರ ಚರ್ಚೆಯನ್ನು ಹುಟ್ಟುಹಾಕಿದೆ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಸೆಳೆಯುತ್ತಿದೆ. ಕೆಲವರು ಸೃಜನಶೀಲತೆಯನ್ನು ಶ್ಲಾಘಿಸಿದರೆ, ಇತರರು ಸಂಘಟನೆಯು ಧಾರ್ಮಿಕ ಭಾವನೆಗಳಿಗೆ ಅಗೌರವ ತೋರುತ್ತಿದೆ ಎಂದು ಟೀಕಿಸಿದರು.
ಕರಾವಳಿಯಲ್ಲಿ ನಡೆದ ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು, ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ವ್ಯವಸ್ಥೆ ನಡೆಯುತ್ತಿದೆ.
ಕದ್ರಿ ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಮನ್ಷಿದಾ ಬಾನು ಅವರು ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ತಮ್ಮ ಸ್ಕೂಟರ್ನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಕೆನಾರಾ ಬ್ಯಾಂಕ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಇದೇ 25ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯವರೆಗೆ ಉಡುಪಿ ಕೋರ್ಟ್ ರಸ್ತೆಯ ಕೆನರಾ ಬ್ಯಾಂಕ್ ನ ಹಿಂಭಾಗದ ರಿಟೇಲ್ ಅಸೆಟ್ ಹಬ್ ನಲ್ಲಿ “ಕೆನರಾ ರಿಟೈಲ್ ಮೇಳ-2024” ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕ್ ನ ಉಡುಪಿ ಪ್ರಾದೇಶಿಕ ವಲಯದ ಮ್ಯಾನೇಜರ್ ಕೌಶಿಕ್ ರೆಡ್ಡಿ ತಿಳಿಸಿದರು.
ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಉಡುಪಿಯಲ್ಲಿ ನಿನ್ನೆ ನಡೆದಿತ್ತು.
ಭಾರೀ ವಿವಾದಕ್ಕೀಡಾಗಿರುವ ಇಂದ್ರಾಳಿ ಬ್ರಿಡ್ಜ್ ಕಾಮಗಾರಿ ಅವ್ಯವಸ್ಥೆಯ ವಿರುದ್ದ ಹೋರಾಟ ಸಮಿತಿ ಪ್ರತಿಭಟನೆಗೆ ಸಜ್ಜುಗೊಳ್ಳುತ್ತಿದ್ದಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಯಶ್ ಪಾಲ್ ಸುವರ್ಣ ಅವರು ಕಾಮಗಾರಿ ಪ್ರದೇಶಕ್ಕೆ ದೌಡಾಯಿಸಿದ್ದಾರೆ.
ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮಂಗಳೂರಿನ ಅಶೋಕನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಆಯೋಜಿಸಿದ ದ.ಕ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಹೈ-ಫ್ಲೈಯರ್ ಸ್ಕೇಟಿಂಗ್ ಕ್ಲಬ್ನ ಸ್ಕೇಟರ್ ಗಳು ಅಮೋಘ ಸಾಧನೆ ಮೆರೆದಿದ್ದಾರೆ.
ದ.ಕ ಜಿಲ್ಲೆಯ ಕಡಬ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದ್ದು, ಕಡಬದಲ್ಲಿ ಗಾಳಿ, ಸಿಡಿಲು ಸಹಿತ ಭಾರೀ ಮಳೆಯಾಗಿದೆ.
1999 ರಲ್ಲಿ ಜಿಲ್ಲೆಯ ಪ್ರಪ್ರಥಮ ತುಳುವಾಹಿನಿ ನಮ್ಮಕುಡ್ಲ ಸ್ಥಾಪನೆಯಾಗಿ ತುಳುನಾಡಿನ ಕಲೆ, ಇತಿಹಾಸ, ಸಂಸ್ಕೃತಿ, ಹಾಗೂ ಜನಜೀವನಕ್ಕೆ ಒತ್ತುಕೊಡುವ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಕೇಬಲ್ ಟಿವಿ, ಅಂತರ್ ಜಾಲದ ಮೂಲಕ ಪ್ರಸಾರ ಮಾಡುತ್ತಿದೆ.
ಇತ್ತೀಚೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರು ವಿಮಾನ ಹತ್ತುವ ಮೊದಲು ವಿಮಾನ ನಿಲ್ದಾಣದ ಲಾಂಜ್ ಪ್ರವೇಶಿಸಲು ಪ್ರಯತ್ನಿಸುವಾಗ 87,000 ರೂ.ಗಳನ್ನು ಕಳೆದುಕೊಂಡಿದ್ದಾರೆ.
ಪೂರ್ವದ್ಚೇಷದ ಹಿನ್ನೆಲೆಯಲ್ಲಿ ತಂಡವೊಂದು ಮಾರಕಾಸ್ತ್ರ ಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ಜಿಲ್ಲೆ ವತಿಯಿಂದ ಅಚ್ಲಾಡಿಯ ಇ.ಸಿ.ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನ ವಿರುದ್ಧ ತಡೆಹಿಡಿದ ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಅಂಕಪಟ್ಟಿಯನ್ನು ಹಿಂದಿರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಚೆನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಗೊಂದಲಗಳು ಶೀಘ್ರ ಸುಖಾಂತ್ಯ ಕಾಣಲಿದೆ. ಅಲ್ಲಿ ಎನ್ ಡಿಎ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಉಡುಪಿ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇದರ ಸಹಯೋಗದಲ್ಲಿ “ಜಾನಪದ ಹಬ್ಬ-2024” ಕಾರ್ಯಕ್ರಮವನ್ನು ಇದೇ ಅ.27ರಂದು ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದ “ಶತಾಭಿವಂದನಂ’ ಸಮಾರೋಪ ಸಂಭ್ರಮವು ಅ. 27ರ ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಟಿ. ಸತೀಶ್ ಶೆಟ್ಟಿ ತಿಳಿಸಿದರು.
ಪುತ್ತಿಲ ಪರಿವಾರ ಹಾಗೂ ವಿಶ್ವ ಹಿಂದೂ ಪರಿಷದ್ ನ ಕಾರ್ಯಕರ್ಯರ ನಡುವೆ ವಿಶ್ವ ಹಿಂದೂ ಪರಿಷದ್ ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ವೇಳೆ ಸ್ವಾಮೀಜಿ, ವಿಹಿಂಪ ರಾಷ್ಟೀಯ ನಾಯಕರ ಎದುರಲ್ಲೇ ಕಾರ್ಯಕರ್ತರು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸಾಸ್ ಉಡುಪಿ ಜಿಲ್ಲಾ ಮಹಿಳಾ ಘಟಕ, ಶಿರಡಿ ಸಾಯಿಬಾಬಾ ಮಂದಿರ ಕೊಡವೂರು ಹಾಗೂ ಎಪಿಎಂಸಿ ರಕ್ಷಣಾ ಸಮಿತಿಯ ಸಹಭಾಗಿತ್ವದಲ್ಲಿ ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ
ಶಿಗ್ಗಾವಿ ಕ್ಷೇತ್ರದ ಟಿಕೆಟ್ ಅನ್ನು ಮುಸ್ಲಿಂ ಅಭ್ಯರ್ಥಿಗೆ ಮೀಸಲಿಡುವಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕಾಂಗ್ರೆಸ್ ನಾಯಕರನ್ನು ಒತ್ತಾಯಿಸಿದ್ದಾರೆ.
ಸೊರಲಮಾವು ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ತೀವ್ರ ವಾಂತಿ ಮತ್ತು ಅತಿಸಾರದಿಂದ ಬಾಲಕಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.
ಸೋಮವಾರ ತಡರಾತ್ರಿ ಮತ್ತು ಮಂಗಳವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ 1,030 ಮನೆಗಳು ಜಲಾವೃತವಾಗಿದ್ದು, ನಗರದಾದ್ಯಂತ ನಿವಾಸಿಗಳು ಸಿಲುಕಿಕೊಂಡಿದ್ದಾರೆ.