Showing 20 of 20367 articles • Page 58 of 1019
ಯೆನೆಪೊಯ ದಂತ ಮಹಾವಿದ್ಯಾಲಯದ ತಂಬಾಕು ನಿಷೇಧ ಕೇಂದ್ರವು 2026ರ ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ “ಆಕರ್ಷಣೆಯ ಮುಖವಾಡ ಬಯಲು – ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ಎದುರಿಸುವುದು” ಎಂಬ ವಿಷಯದಡಿ ಒಂದು ವಾರದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.
ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಕಾರ್ಯಕ್ರಮ ಪ್ರಾರ್ಥನೆಯೊಂದಿಗೆ ಆರಂಭವಾಯಿತು. “ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದಕ್ಷತೆಯಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿ ಶಾಲೆಗೆ, ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡುವಂತಾಗಲಿ.” ಎಂದು ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರು ಮತ್ತು ಉರ್ವಾ ಇಮ್ಯಾಕ್ಯುಲೇಟ್ ಚರ್ಚಿನ ಧರ್ಮ ಗುರುಗಳಾಗಿರುವ ವಂ. ಗುರು ಬೆಂಜಮಿನ್ ಪಿಂಟೋ ರವರು 2026- 27 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಹಿತವಚನ ನುಡಿದರು.
ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NITK), ಸುರತ್ಕಲ್, 2025–26 ಆರ್ಥಿಕ ವರ್ಷದ Groww ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಘೋಷಿಸಿದೆ. Groww, ಆರ್ಥಿಕ ಸೇವಾ ವೇದಿಕೆ, ಸಂಸ್ಥೆಯ ಎಲ್ಲಾ ಬಿ.ಟೆಕ್ ವಿಭಾಗಗಳ 200 ಪದವಿಪೂರ್ವ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಿದೆ. ಈ ಕಾರ್ಯಕ್ರಮವು ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ಒದಗಿಸುತ್ತದೆ.
: ತಮಿಳುನಾಡಿನ ದೇವಸ್ಥಾನವೊಂದರ ಆನೆಯ ಮುದ್ದಾದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದ ಗಮನ ಸೆಳೆದಿದೆ.
ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ ಪ್ರಭಾರ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಆರ್.ರಕ್ಷಿತ್ ರನ್ನ ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಪ್ರಕರಣ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ.ಮನೆಯಲ್ಲಿ ತಾಯಿ ಹಾಗೂ ಮಗ ಮೃತದೇಹ ಪತ್ತೆಯಾಗಿದೆ.ಬಟ್ಟೆ ಅಂಗಡಿಯಲ್ಲಿ ತಂದೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ಯೆಯಾಗಿದ್ದಾರೆ.
ಗಾಳಿಯ ಅಬ್ಬರಕ್ಕೆ ತೆಂಗಿನ ಮರ ಮುರಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟು, ಇನ್ನಿಬ್ಬರು ಅಪಾಯದಿಂದ ಪಾರಾದ ಘಟನೆ ಇಂದು ಬೆಳಿಗ್ಗೆ ಕುಂಬಳೆ ಸಮೀಪದ ಪೆರುವಾಡ್ ಮೈದಾನ ಬಳಿ ನಡೆದಿದೆ.
ಮದುವೆಯಾದ ಒಂದು ತಿಂಗಳಲ್ಲೇ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಹಾದ್ವಾರ ರಸ್ತೆಯ ಲಕ್ಷ್ಮೀ ಗಲ್ಲಿಯಲ್ಲಿ ಜೂ. 9ರ ಮಂಗಳವಾರ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬರೋಬ್ಬರಿ 600 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಾಖಂಡದ ಮಸ್ಸೂರಿ ಬಳಿ ಸಂಭವಿಸಿದೆ.
ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯಲ್ಲಿ ನಡೆದಿದೆ.
ಇಸ್ಪೀಟು ಜೂಜಾಟ ಆಡುತ್ತಿದ್ದ ಗುಂಪಿನ ಮೇಲೆ ಕೆಂಚಾರ್ಲಹಳ್ಳಿ ಠಾಣೆ ಪೊಲೀಸರು ಮಂಗಳವಾರ ದಾಳಿ ನಡೆಸಿ 8 ಮಂದಿಯನ್ನು ಬಂಧಿಸಿರುವ ಘಟನೆ ತಾಲ್ಲೂಕಿನ ಮಿಂಚಲಹಳ್ಳಿ ಗ್ರಾಮದ ಸರ್ಕಾರಿ ಕೆರೆ ಅಂಗಳದಲ್ಲಿ ನಡೆದಿದೆ.
ಅಫ್ಗಾನಿಸ್ತಾನ: ಪಾಕಿಸ್ತಾನವು ಗಡಿಯಲ್ಲಿ ಮತ್ತೆ ದಾಳಿ ಆರಂಭವಾಗಿದ್ದು, ಘಟನೆಯಲ್ಲಿ 12ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಅಫ್ಗಾನಿಸ್ತಾನದ ಅಧಿಕಾರಿಗಳು ಹೇಳಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಕಳೆದ ರಾತ್ರಿ ಪಾಕಿಸ್ತಾನದ ಸೈನ್ಯವು ಮತ್ತೆ ನಮ್ಮ ವಾಯುಗಡಿಯನ್ನು ಉಲ್ಲಂಘಿಸಿದೆ. ಕುನಾರ್, ಖೋಸ್ಟ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿ ನಾಗರಿಕ ಕಟ್ಟಡಗಳ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ 11 ಮಕ್ಕಳು ಹಾಗೂ ಒಬ್ಬ ಮಹಿಳೆ ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ ಎಂದು ಅಫ್ಗಾನಿಸ್ತಾನ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ. […]
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್ನಿಂದ ಬಂದ ಪ್ರಯಾಣಿಕರೊಬ್ಬರಿಂದ 14.93 ಕೆ.ಜಿ ಹೈಡ್ರೋಫೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ಜಪ್ತಿ ಮಾಡಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು ಮಾಜಿ ಸಿಎಂ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ನಿಧನರಾಗಿದ್ದಾರೆ.
ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿ ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಆಂಧ್ರ- ಕರ್ನಾಟಕ ಗಡಿಯ ಜಾಜರಕಲ್ ಟೋಲ್ಗೇಟ್ ಬಳಿ ನಡೆದಿದೆ.
ಶಾಲಾ ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಕೆಳಗೆ ಬಿದ್ದು ಹದಿನೈದು ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಎಲ್ಐಸಿ ಕಾಲನಿಯಲ್ಲಿರುವ ಜನಸೇವಾ ಖಾಸಗಿ ಶಾಲೆಯಲ್ಲಿ ನಡೆದಿದೆ.
ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.