Showing 20 of 19291 articles • Page 584 of 965
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 6 ಲಾರಿಗಳ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಜಿಲ್ಲೆಯ ಸಾತ್ ಮೈಲ್ ಕ್ರಾಸ್ ಬಳಿ ನಡೆದಿದೆ. ರಾಯಚೂರು ಎಸ್ಪಿ ಎಂ.ಪುಟ್ಟಮಾದಯ್ಯ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮರಳು ಸಹಿತ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಈಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ತಮ್ಮ ಮಗಳು ಮದುವೆಯಾಗಿ ಜೀವನದಲ್ಲಿ ಉತ್ತಮವಾಗಿ ನೆಲೆಸಿದ್ದಾಳೆ ಎಂದು ಖಚಿತಪಡಿಸಿಕೊಳ್ಳುವಾಗ ಮಹಿಳೆಯರನ್ನು ತಲೆ ತಗ್ಗಿಸಿ ಸನ್ಯಾಸಿಗಳಂತೆ ಬದುಕಲು ಏಕೆ ಪ್ರೋತ್ಸಾಹಿಸುತ್ತಾರೆ ಎಂದು ಮದ್ರಾಸ್ ಹೈಕೋರ್ಟ್ನ ನ್ಯಾಯಾಧೀಶರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಆಕಸ್ಮಿಕ ಹಿಂದೂಗಳಿಂದ ದೇಶಕ್ಕೆ ನಿಷ್ಠೆ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಪುತ್ರಿ ಹಾಗೂ ಹಿರಿಯ ಬಿಆರ್ ಎಸ್ ನಾಯಕಿ ಕೆ.ಕವಿತಾ ಅವರಿಗೆ ಅನಾರೋಗ್ಯ ಕಾಡಿದ್ದು, ಹೈದರಾಬಾದ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತೊಂದು ಇಸಿಐಆರ್ ದಾಖಲಿಸಿದೆ. 2022ರಲ್ಲಿ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ.
ಬಿಯರ್ಗಾಗಿ ಮೂರು ತಿಂಗಳ ಹಸುಗೂಸನ್ನೇ ದಂಪತಿಯೊಂದು ಮಾರಾಟ ಮಾಡಿರುವ ಘಟನೆ ಅಮೆರಿಕದ ವಾಷಿಂಗ್ಟನ್ನಲ್ಲಿ ನಡೆದಿದೆ.
ಪೋಷಕರು ಕೊಳಲು ನುಡಿಸುವ ಶಾಲೆಗೆ ಸೇರಿಸದಿದ್ದಕ್ಕೆ ಮನನೊಂದು SSLC ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿಯಲ್ಲಿ ನಡೆದಿದೆ.
ಕ್ಯಾಬ್ ಚಾಲಕನಿಂದ 2019 ರಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಗೆ ಪರಿಹಾರವಾಗಿ 5 ಲಕ್ಷ ರೂ ನೀಡುವಂತೆ ಓಲಾ ಕ್ಯಾಬ್ ಸಂಸ್ಥೆಗೆ ಹೈಕೋರ್ಟ್ ನಿರ್ದೇಶಿಸಿದೆ.
ರೋಗಿಯ ತಲೆಗೆ ಹೊಲಿಗೆ ಹಾಕಿ ಸೂಜಿಯನ್ನು ಅಲ್ಲಿಯೇ ಮರೆತು ಬಿಟ್ಟಿರುವ ಘಟನೆ ಉತ್ತರಪ್ರದೇಶದ ಹಾಪುರದಲ್ಲಿ ನಡೆದಿದೆ.
ಮುಂಬೈ: ನಟ ಮತ್ತು ಶಿವಸೇನೆ ಮುಖಂಡ ಗೋವಿಂದ ಅವರು ಆಕಸ್ಮಿಕವಾಗಿ ತಮ್ಮ ಸ್ವಂತ ರಿವಾಲ್ವರ್ ನಿಂದ ಕಾಲಿಗೆ ಗುಂಡು ಹಾರಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವರದಿಗಳ ಪ್ರಕಾರ, ಗೋವಿಂದ ಬೆಳಿಗ್ಗೆ ತನ್ನ ರಿವಾಲ್ವರ್ ನ್ನು ಕ್ಲೀನ್ ಮಾಡುವಾಗ ಆಕಸ್ಮಿಕವಾಗಿ ಗುಂಡು ಅವರ ಕಾಲಿಗೆ ಬಂದು ತಗುಲಿದೆ ಎಂದು ವರದಿಯಾಗಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ನಿನ್ನೆಗುಲಾಬಿ, ಹಸಿರು ಮತ್ತು ಹಳದಿ ಬಣ್ಣಗಳ ಶ್ರೇಣಿಯಾಗಿ ಆಕಾಶ ರೂಪಾಂತರಗೊಂಡಿರುವುದನ್ನು ನೋಡಿ ಆಶ್ಚರ್ಯಚಕಿತರಾದರು.
ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳ್ಳುಳ್ಳಿ ದರ 300 ರಿಂದ 350 ರೂ. ತಲುಪಿದ್ದು, ಬೆಳ್ಳುಳ್ಳಿ ದರ ಜಾಸ್ತಿ ಆಗಿರುವುದನ್ನು ಗಮನಿಸಿದ ಕೆಲ ಬೆಳ್ಳುಳ್ಳಿ ಸಗಟು ವ್ಯಾಪಾರಸ್ಥರು ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು ಕಡಿಮೆ ದರದಲ್ಲಿ ಮಾರುಕಟ್ಟೆಗೆ ಬಿಟ್ಟು ಮಾರಾಟ ಮಾಡುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾಗೆ 14 ನಿವೇಶನಗಳನ್ನು ಬಿಟ್ಟುಕೊಡುವಂತೆ ಪತ್ರ ಬರೆದಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣ ಮುಳ್ಳಗಿದ್ದು, ಇದೀಗ ಸಿಎಂ ಪತ್ನಿ ಸೈಟ್ ಹಿಂದಿರುಗಿಸಿರುವ ಬಗ್ಗೆ ಪತ್ರ ಬರೆದಿದ್ದು, ಸಿಎಂ ಸ್ಥಾನಕ್ಕೇ ಆಪತ್ತು ತಂದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯ 3ನೇ ಮತ್ತು ಅಂತಿಮ ಹಂತದ ಮತದಾನ ಈಗ ಆರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳಲ್ಲಿ ವೋಟಿಂಗ್ ನಡೆಯಲಿದೆ. 39.18 ಲಕ್ಷ ಮತದಾರರು 415 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿದೆ.
ಸೂಪರ್ ಸ್ಟಾರ್ ರಜನಿಕಾಂತ್ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಸುದ್ದಿ ಮೂಲಗಳು ತಿಳಿಸಿವೆ.
ತೂಕ ಹೆಚ್ಚಳದಿಂದ ದೇಹ ಸೌಂದರ್ಯ ಹಾಳಾಗುವುದು ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದಲ್ಲ. ತೂಕ ಹೆಚ್ಚಳವಾದ ಹಾಗೆ ಅಧಿಕ ಕೊಲೆಸ್ಟ್ರಾಲ್, ಮಧುಮೇಹ, ಅಧಿಕ ಬಿಪಿ ಮತ್ತು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ.
ನೀವು ಆಡಿದ ಮಾತುಗಳು ಎಲ್ಲವೂ ಸತ್ಯವಾಗುವಂತೆ ನಿಮಗೆ ಅನ್ನಿಸುವುದು. ಕುಟುಂಬಕ್ಕೆ ಧಕ್ಕೆಯಾಗದಂತೆ ನೀವು ನೋಡಿಕೊಳ್ಳ ಬೇಕಾಗಬಹುದು.