Showing 20 of 20687 articles • Page 598 of 1035
ಮಂಗಳೂರು ವಿವಿ ವಿರುದ್ದ ವಿದ್ಯಾರ್ಥಿ ಸಮೂಹ ಸಿಡಿದೆದ್ದಿದೆ. ಅಂಕಪಟ್ಟಿಯ ಸಮಸ್ಯೆ, ಅವೈಜ್ಞಾನಿಕ ಕಾಲೇಜುಗಳ ಶುಲ್ಕಗಳ ಹೆಚ್ಚಳ, ಪರೀಕ್ಷಾ ಶುಲ್ಕ ಹೆಚ್ಚಳ ಯುಯುಸಿಎಂಎಸ್ ನಲ್ಲಿರುವ ಗೊಂದಲಗಳು ಮತ್ತು ವಿಶ್ವವಿದ್ಯಾನಿಲಯದಲ್ಲಿರುವ ಹಲವು ಸಮಸ್ಯೆಗಳನ್ನು ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಕೊಣಾಜೆ ಮಂಗಳಗಂಗೋತ್ರಿಯ ಆಡಳಿತ ಕಚೇರಿ ಎದುರುಗಡೆ ಬೃಹತ್ ಪ್ರತಿಭಟನೆ ನಡೆಯಿತು.
ಎಬಿವಿಪಿ ಸಂಘಟನೆಯು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಕಪಟ್ಟಿ ಬಿಡುಗಡೆಗೊಳಿಸುವಂತೆ ಮಂಗಳ ಗಂಗೋತ್ರಿಯಲ್ಲಿ ಪ್ರತಿಭಟನೆಯ ನೆಪದಲ್ಲಿ ಗೂಂಡಾಗಿರಿ ನಡೆಸಿದ್ದು,
ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ನೇತೃತ್ವದಲ್ಲಿ ದ.ಕ. ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಮುಂಡಾಲ ಸಮುದಾಯದ ಮುಖಂಡರ ಸಭೆಯು ಕುದ್ಮುಲ್ ರಂಗರಾವ್ ಸ್ಮಾರಕ ಭವನ, ಬಿಜೈ, ಕಾಪಿಕಾಡ್ನಲ್ಲಿ ಜರುಗಿತು.
ಭಾರತ ಸರ್ಕಾರದ ಎನ್.ಎ.ಡಿ.ಸಿ.ಪಿ ಯೋಜನೆಯಡಿಯಲ್ಲಿ ದೇಶಾದ್ಯಂತ ರಾಸುಗಳಿಗೆ ಕಾಲು ಬಾಯಿ ಜ್ವರದ ವಿರುದ್ದದ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ಇಲಾಖೆಯ ಅಪರ ನಿರ್ದೇಶಕರಾದ ಡಾ.ಶಿವರುದ್ರಪ್ಪ ತಿಳಿಸಿದರು.
ವಿಟ್ಲ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಕರ್ತವ್ಯನಿರತರಾಗಿದ್ದ ಕಂದಾಯ ನಿರೀಕ್ಷಕ ಪ್ರಶಾಂತ್ ಶೆಟ್ಟಿ ಅವರ ಕಚೇರಿಗೆ ಅಕ್ರಮವಾಗಿ ಪ್ರವೇಶಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಒಡ್ಡಿ, ಕಚೇರಿ ಸೊತ್ತುಗಳನ್ನು ಧ್ವಂಸ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಂಟ್ವಾಳ ಆಡಳಿತ ಸೌಧದ ಮುಂಭಾಗ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆ ವತಿಯಿಂದ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಯ ಚಾಮರಾಜನಗರ ವಿಭಾಗದ ಅಧೀನದಲ್ಲಿ 5 ಉಪವಿಭಾಗಗಳು ಹಾಗೂ 19 ಶಾಖಾ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಚಾಮರಾಜನಗರ ವಿಭಾಗ ವ್ಯಾಪ್ತಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಸ್ಥಳಗಳನ್ನು ಗುರುತಿಸಿ ಸರಿಪಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಉಪವಿಭಾಗಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಸಾರ್ವಜನಿಕರ ಸಹಾಯಕ್ಕಾಗಿ ಸಹಾಯವಾಣಿಯನ್ನು ಸ್ಥಾಪನೆ ಮಾಡಲಾಗಿದೆ.
ಖಬರಸ್ತಾನಗಳಿಗೆ ಸರ್ಕಾರಿ ಭೂಮಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದಲೇ ಆದೇಶ ನೀಡಲಾಗಿದ್ದು, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾಗೆ ಸಿಎಸ್ ಶಾಲೀನಿ ರಜನೀಶ್ ಆದೇಶ ನೀಡಿದ್ದಾರೆ.
: ದಕ್ಷಿಣ ಭಾರತದ ಪವಿತ್ರ ಯಾತ್ರಾ ಸ್ಥಳ ಕೇರಳದ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲ ಮಂಡಲ ಪೂಜೆಗಾಗಿ ಇಂದಿನಿಂದ ತೆರೆದಿದ್ದು ಡಿ.26ರ ತನಕ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿದೆ.
ತನ್ನ ಮಗು ಹೃದಯ್ ಹಾಗೂ ಪತ್ನಿ ಪ್ರಿಯಂಕಾ ಅವರನ್ನು ಕೊಂದು ಬೆಳ್ಳಾಯರು ಗ್ರಾಮದ ರೈಲ್ವೆ ಬ್ಲ್ಯಾಕ್ನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹೆಚ್ಚಿನ ಕೈಸಾಲವನ್ನು ಕಾರ್ತಿಕ್ ಮಾಡಿಕೊಂಡಿದ್ದ ಎನ್ನುವ ಅಂಶ ಬೆಳಕಿಗೆ ಬರುತ್ತಲಿದೆ. ಆದರೆ ಈ ಬಗ್ಗೆ ಯಾರೊಬ್ಬರೂ ಪೊಲೀಸ್ ದೂರು ನೀಡಲು ಮುಂದೆ ಬರುತ್ತಿಲ್ಲ.
ಸಂತೆಕಟ್ಟೆ ಮಾರುಕಟ್ಟೆ ಪ್ರದೇಶಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಾತ್ಸಲ್ಯ ಛಾಯಾ ಟ್ರಸ್ಟ್ (ರಿ.) ಇದರ ನೆರಳಲ್ಲಿ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರದ ಉದ್ಘಾಟನಾ ಸಮಾರಂಭ ತಾ 21/11/2024ರಂದು ಗುರುವಾರ ಮಂಗಳೂರಿನ ಬಳ್ಳಾಲ್ ಭಾಗ್ ನಲ್ಲಿ ನಡೆಯಲಿದೆ.
ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್16 ತನಕ ವಾಸ್ತವ್ಯ ಹೂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ “ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಕಾರ್ಯಕ್ರಮದ ಉದ್ಘಾಟನೆ ಗುರುವಾರ ಸಂಜೆ ಎಸ್.ಡಿ.ಎಂ. ಕಾನೂನು ಕಾಲೇಜು ಸಭಾಂಗಣದಲ್ಲಿ ಜರುಗಿತು.
ಬಾವುಟಗುಡ್ಡೆ ಯ ಎಬಿ ಶೆಟ್ಟಿ ರಸ್ತೆಯ ಅಲೋಶಿಯಶ್ ಶಿಕ್ಷಣ ಸಂಸ್ಥೆಯ ಎದುರಿನ ಬಸ್ ತಂಗುದಾಣದ ಎದುರು ‘ಬಸ್ ಬೇ ಗೆಂದು ಮೀಸಲಿರಿಸಿದ್ದ ಜಾಗ ಬನಗಳ ನಿಲುಗಡೆಗೆ ಸಿಗಲಿದೆ ಟ್ರಾಫಿಕ್ ಜಾಮ್ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ ಇದೆ.
ಹಿಂಗಾರು ಮಳೆ ಕ್ಷೀಣಿಸಿದ್ದರೂ, ಕಳೆದ ಒಂದು ತಿಂಗಳಲ್ಲಿ ಉತ್ತಮ ಮಳೆಯಾಗಿ ಮೂರು ತಿಂಗಳಲ್ಲಿ ಸುರಿಯಬೇಕಾಗಿದ್ದ ವಾಡಿಕೆ ಮಳೆಯ ಗುರಿ ತಲುಪಿದೆ.
ನಿದ್ರಾಸುಖವನ್ನು ತ್ಯಜಿಸಿ ವಿಷ್ಣು ಜಾಗೃತ ಆಗುವ ಉತ್ಥಾನ ದ್ವಾದಶಿ ಹಿನ್ನಲೆಯಲ್ಲಿ ಉಡುಪಿಯ ಲಕ್ಷ್ಮೀ ವೆಂಕಟೇಶ ದೇವಾಲಯದಲ್ಲಿ ವೈಭವದ ವಿಶ್ವರೂಪ ದರ್ಶನ ಗಮನ ಸೆಳೆಯಿತು.
ಕಾಪು ತಾಲೂಕಿನ ಶಿರ್ವ ಧರ್ಮೆಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಉಡುಪಿ, ಕುಂದಾಪುರ, ಕಾರ್ಕಳ ಹಾಗು ಬೈಂದೂರು ನ್ಯಾಯಾಲಯದಲ್ಲಿ ಡಿ.14 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.
ಗೋವಾ ಅಕ್ರಮ ಮದ್ಯ ವಶಪಡಿಸಿಕೊಂಡ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿದ್ದು, ಈ ವಿಚಾರವಾಗಿ ಅಬಕಾರಿ ಇಲಾಖೆ ಎಡಿಸಿ ಬಿಂದುಶ್ರೀ ಹೇಳಿಕೆ ನೀಡಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ವ್ಯವಹಾರದಲ್ಲಿ ಭಾರೀ ನಷ್ಟ ಅನುಭವಿಸಿದ ಪರಿಣಾಮ ಸಾಲಗಾರರ ಕಾಟಕ್ಕೆ ಹೆದರಿ ಪತ್ನಿಯೊಂದಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಹೊನ್ನೂರು ಕಾವಲ್ ಗ್ರಾಮದಲ್ಲಿ ನಡೆದಿದೆ.