Showing 20 of 19102 articles • Page 60 of 956
ಐಪಿಎಲ್ನ 2 ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇಂದು ಬೆಂಗಳೂರಿನಲ್ಲಿ ಹಣಾಹಣಿಗೆ ಸಜ್ಜಾಗಿವೆ.
ಕಾಯಕಯೋಗಿ ಪ್ರಾದೇಶಿಕ ದಿನಪತ್ರಿಕೆಯಿಂದ ನೀಡುವ ವಾರ್ಷಿಕ “ಕಾಯಕಯೋಗಿ” ಪ್ರಶಸ್ತಿಯನ್ನು ಪತ್ರಕರ್ತ ಸಿಎಂ ಸುಗಂಧರಾಜುರವರಿಗೆ ನೀಡಿ ಗೌರವಿಸಲಾಯಿತು.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಯನ್ನು ಕೊಂದು ತಲೆ ಮರೆಸಿಕೊಂಡಿದ್ದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಿ.ನರಸೀಪುರ ಮುಖ್ಯ ರಸ್ತೆಯ ಮೇಗಳಾಪುರ ಗ್ರಾಮದಲ್ಲಿ ರಾತ್ರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿಯೇ ವ್ಯಕ್ತಿ ಮೃತಪಟ್ಟಿದ್ದಾನೆ.
ಕ್ಷುಲ್ಲಕ ಕಾರಣಕ್ಕೆ ವಿಶೇಷ ಚೇತನನಿಗೆ ಥಳಿಸಿರುವ ಘಟನೆ ತಾಲೂಕಿನ ತಗಡೂರು ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ. ಮುದ್ದು ಮಾದೇಗೌಡ (40) ಗಾಯಗೊಂಡಿದ್ದು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೀ ಬ್ರಿಜ್ ಮ್ಯಾರಥಾನ್ ಇದೆಯೆಂಬ ಹೆಸರಿನಲ್ಲಿ ನಕಲಿ ಪೋಸ್ಟ್ ಒಂದನ್ನು ಜಾಲತಾಣದಲ್ಲಿ ಹರಿಯ ಬಿಡಲಾಗಿದ್ದು ಸೈಬರ್ ವಂಚಕರದ್ದೇ ಜಾಲ ಎನ್ನುವ ಶಂಕೆ ವ್ಯಕ್ತವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಸಂಭವಿಸಿರುವ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ತನಿಖೆಯನ್ನು ತೀವ್ರಗೊಳಿಸಿದೆ. ಈ ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ವ್ಯಕ್ತಿಯೊಬ್ಬನ ಭಾವಚಿತ್ರವನ್ನು ಬಿಡುಗಡೆ ಮಾಡಲಾಗಿದ್ದು, ಶಂಕಿತನ ಪತ್ತೆಗಾಗಿ ಸಾರ್ವಜನಿಕರ ಸಹಕಾರವನ್ನು ಕೋರಲಾಗಿದೆ.
12ನೇ ಶತಮಾನದಲ್ಲಿ ಬಸವಣ್ಣನವರು ಸಮಾನತೆಯ ಸಂದೇಶ ನೀಡಿದರೆ, ಕೆಂಪೇಗೌಡರು ಸರ್ವ ಜನಾಂಗಗಳನ್ನು ಒಗ್ಗೂಡಿಸಿ ನಾಡು ಕಟ್ಟಿದರು. ಸಮಾನತೆಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಚಿಂತನೆ ಅಗತ್ಯ ಎಂದು ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ಚಲನಚಿತ್ರ ನಟ ಜಗ್ಗೇಶ್ ಅಭಿಪ್ರಾಯಪಟ್ಟರು.
ಏನಾದರೂ ಆದರೆ ರಾಜಕಾರಣಿಗಳು ಬರ್ತಾರೆ. ಆದರೆ ನಮ್ಮ ಸಮಸ್ಯೆ ಯಾರಿಗೂ ಕಾಣುವುದಿಲ್ಲ. ಗ್ಯಾಸ್ ಸಮಸ್ಯೆಯಿಂದ ಇಷ್ಟೊಂದು ಸಮಸ್ಯೆ ಆಗಿದೆ. ಜಿಲ್ಲಾಧಿಕಾರಿ, ಸಂಸದರು ನಮ್ಮ ಸಮಸ್ಯೆಯನ್ನ ಸರಿಪಡಿಸಬೇಕು. ಪಂಪ್ಗಳಲ್ಲಿ ಗ್ಯಾಸ್ ಖಾಲಿಯಾಗಿದ್ದು, ದುಡಿಮೆ ಇಲ್ಲದಂತೆ ಆಗಿದೆ.
ಉಡುಪಿಯ ಸಿಎಸ್ಐ ಲೊಂಬಾರ್ಡ್ ಮೆಮೋ ರಿಯಲ್(ಮಿಷನ್) ಆಸ್ಪತ್ರೆಯ ಪೂರ್ಣ ಪ್ರಮಾಣದ ಮೊದಲ ಆರೋಗ್ಯ ಕೇಂದ್ರ(ಪಾಲಿ ಕ್ಲಿನಿಕ್) ಕಟಪಾಡಿಯ ಬಸ್ ನಿಲ್ದಾಣದ ಬಳಿ ಶನಿವಾರ ಉದ್ಘಾಟನೆಗೊಂಡಿತು.
ಸರಳಬೆಟ್ಟುವಿನ ಉಮಾಮಹೇಶ್ವರಿ ದೇವಸ್ಥಾನದ ಪಕ್ಕದ ಮನೆಯೊಂದರಲ್ಲಿ ಆಟೋ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ವಿದ್ಯೆ ಕಲಿಯಲು ಬರುವ ಪವಿತ್ರ ತಾಣಗಳು ಇಂದು ರಣರಂಗವಾಗುತ್ತಿವೆ. ಮಂಗಳೂರಿನ ಪ್ರತಿಷ್ಠಿತ ಪಿ.ಎ. ಕಾಲೇಜಿನಲ್ಲಿ (P.A. College) ಪ್ರತಿ ತಿಂಗಳು ಐದಾರು ಬಾರಿ ರಾಗಿಂಗ್ ಮತ್ತು ಗುಂಪು ಘರ್ಷಣೆಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.
ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ಉಡುಪಿ ಜಿಲ್ಲೆಯಾ ದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.
ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅವರು ತಮ್ಮ ಐಷಾರಾಮಿ ಲ್ಯಾಂಬೋರ್ಗಿನಿ ಕಾರಿಗೆ ನಕಲಿ ನಂಬರ್ ಪ್ಲೇಟ್ ಬಳಸಿ ಮತ್ತು ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಕಾನೂನು ಬಲೆಗೆ ಬಿದ್ದಿದ್ದಾರೆ.
ತುಳುನಾಡಿನ ಪವಿತ್ರ ಹಾಗೂ ವಿಶಿಷ್ಟ ಆಚರಣೆಗಳಲ್ಲಿ ಒಂದಾದ ‘ಸಿರಿ ಆಲಡೆ’ ಉತ್ಸವವು ನಿಡಿಗಲ್ನ ಶ್ರೀ ಲೋಕನಾಥೇಶ್ವರ ಸಿರಿ ಕ್ಷೇತ್ರದಲ್ಲಿ ಭಕ್ತಿ-ಸಂಭ್ರಮದಿಂದ ಜರುಗಿತು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಈ ಅಪರೂಪದ ಧಾರ್ಮಿಕ ವಿಧಿಯ ಸಡಗರಕ್ಕೆ ಸಾಕ್ಷಿಯಾದರು.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಜಿಲ್ಲೆಯ ಇಬ್ಬರು ವ್ಯಕ್ತಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಖ್ಯಾತ ಗಾಯಕ ಯಶವಂತ್ ಎಂ.ಜಿ ಅವರ ಕಂಠದಿಂದ ಮೂಡಿಬಂದಿರುವ “ಬನ್ನಂಜೆ ಒಡೆಯ ಮಹಾಲಿಂಗೇಶ್ವರ” ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವದಲ್ಲಿ ಈ ಬಾರಿ ಒಂದು ಅಪರೂಪದ ಮತ್ತು ಐತಿಹಾಸಿಕ ಘಟನೆ ನಡೆದಿದೆ. ಕರಗ ಹೊರುವ ಮುಖ್ಯ ಅರ್ಚಕ ಜ್ಞಾನೇಂದ್ರ ಸ್ವಾಮಿ ಅವರಿಗೆ ಶುಭ ಹಾರೈಸಲು ಮುಸ್ಲಿಂ ಸಮುದಾಯದ ಪ್ರಮುಖರು ನೇರವಾಗಿ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದರು.
ಅಮ್ರೋಹಾ ಜಿಲ್ಲೆಯ ಬೈಪಾಸ್ ಮೊಹಲ್ಲಾ ಪ್ರದೇಶದಲ್ಲಿ ದೊಡ್ಡ ಅವಘಡ ಸಂಭವಿಸಿದೆ. ಕಟ್ಟಡವೊಂದರ ನಿರ್ಮಾಣ ಕೆಲಸ ನಡೆಯುತ್ತಿದ್ದ ವೇಳೆ ಹಠಾತ್ತನೆ ಗೋಡೆ ಕುಸಿದು ಬಿದ್ದಿದೆ.