Showing 20 of 19102 articles • Page 61 of 956
ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ ಹಾಗೂ ಶ್ರೀಮದ್ಭಾಗವತ ಸಪ್ತಾಹ ಮಹೋತ್ಸವ ವೈಭವದ ಹಸಿರು ಹೊರೆಕಾಣಿಕೆ ಮೆರವಣಿಗೆ ನೆರವೇರಿತು.
ವಿಮಾನ ನಿಲ್ದಾಣದ ರನ್ವೇ ಮೂಲಕ ಶ್ರೀ ಪದ್ಮನಾಭಸ್ವಾಮಿ ದೇವಾಲಯದ ಆರಟ್ಟು ಮೆರವಣಿಗೆ ಹಾದು ಹೋಗುತ್ತದೆ. ಶ್ರೀ ಪದ್ಮನಾಭಸ್ವಾಮಿ ದೇವಾಲಯದ ಪವಿತ್ರ ‘ಪೈಂಗುಣಿ ಅರಟ್ಟು’ಗೆ ದಾರಿ ಮಾಡಿಕೊಡಲು ಗುರುವಾರ ಮಧ್ಯಾಹ್ನ ಸುಮಾರು ಐದು ಗಂಟೆಗಳ ಕಾಲ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು.
ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳಿಂದಾಗಿ ಪಿಲಿಕುಳ ನಿಸರ್ಗಧಾಮದಲ್ಲಿರುವ ಜೈವಿಕ ಉದ್ಯಾನವನವು ಏಪ್ರಿಲ್ 1 ರಿಂದ ಏಪ್ರಿಲ್ 8 ರವರೆಗೆ ಸಾರ್ವಜನಿಕರಿಗೆ ಮುಚ್ಚಲ್ಪಡುತ್ತದೆ.
ಬೈಕಿಗೆ ಲಾರಿಯೊಂದು ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ಕಂಬಳಪದವು ಬಳಿ ನಡೆದಿದೆ. ಗಂಭೀರ ಗಾಯಗೊಂಡ ಯುವಕನನ್ನು ನಡುಪದವಿನ ಸುಶಾಂತ್ (23 ) ಎಂದು ಗುರುತಿಸಲಾಗಿದೆ.
ಯುವತಿಯೊಬ್ಬಳು ಬೈಕ್ನಲ್ಲಿ ಸವಾರಿ ಮಾಡುತ್ತಾ ಸಾರ್ವಜನಿಕವಾಗಿ ಹುಚ್ಚಾಟ ಮೆರೆದಿರುವ ಘಟನೆ ಬನಶಂಕರಿ ವ್ಯಾಪ್ತಿಯಲ್ಲಿ ನಡೆದಿದೆ.
ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನಗಳ (EV) ಬೆಲೆ ಶೀಘ್ರದಲ್ಲೇ ಏರಿಕೆಯಾಗಲಿದೆ. ಬ್ಯಾಟರಿ ಚಾಲಿತ ವಾಹನಗಳಾದ ಕಾರುಗಳು, ಜೀಪುಗಳು, ಓಮ್ನಿ ಬಸ್ಗಳು ಮತ್ತು ಖಾಸಗಿ ಸೇವಾ ವಾಹನಗಳಿಗೆ ಇದುವರೆಗೆ ನೀಡಲಾಗುತ್ತಿದ್ದ 100 ಪ್ರತಿಶತ ರಸ್ತೆ ತೆರಿಗೆ ವಿನಾಯಿತಿಯನ್ನು ಅಂತ್ಯಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಜನನಿಬಿಡ ಜಂಕ್ಷನ್ನಲ್ಲಿ ಹುಲ್ಲು ತುಂಬಿದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಬೈಕ್ ಸವಾರನ ಮೇಲೆ ಬಿದ್ದ ಘಟನೆ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.
ಜನಸೇವೆಯ ನಿಜವಾದ ಅರ್ಥವನ್ನು ಜೀವನದಲ್ಲಿ ತೋರಿಸುವ ನಾಯಕರು ವಿರಳ. ಆದರೆ ಅಂತಹ ಅಪರೂಪದ ನಾಯಕತ್ವದ ಜೀವಂತ ರೂಪವಾಗಿ ಹೊರಹೊಮ್ಮಿರುವವರು ಯು.ಟಿ.ಖಾದರ್ ಅವರ ನಾಯಕತ್ವವು ಕೇವಲ ರಾಜಕೀಯದ ಮಿತಿಗಳಲ್ಲಿ ಸೀಮಿತವಾಗಿಲ್ಲ, ಅದು ಮಾನವೀಯತೆ, ಕಾಳಜಿ, ನಿಷ್ಠೆ ಮತ್ತು ನಿಜವಾದ ಸೇವಾಭಾವದ ಮಹಾನ್ ಸಂಕೇತವಾಗಿದೆ.
ಕ್ರೈಸ್ತ ಧರ್ಮದ ಅತ್ಯಂತ ಪವಿತ್ರ ಹಾಗೂ ಶೋಕದ ದಿನವಾದ ‘ಶುಭ ಶುಕ್ರವಾರ’ವನ್ನು (ಗುಡ್ ಫ್ರೈಡೇ) ಮಂಗಳೂರು ಧರ್ಮಪ್ರಾಂತ್ಯದಾದ್ಯಂತ ಇಂದು ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಲಾಗುತ್ತಿದೆ. ಈ ವರ್ಷದ ಆಚರಣೆಯು ವಿಶೇಷವಾಗಿ “ಮಕ್ಕಳ ವರ್ಷ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿದ್ದು, ಚರ್ಚ್ಗಳ ವಿವಿಧ ವಿಧಿವಿಧಾನಗಳಲ್ಲಿ ಮಕ್ಕಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದೆ.
ಕ್ಷುಲ್ಲಕ ವಿಚಾರಕ್ಕೆ ಯುವಕರ ಗುಂಪಿನಿಂದ ಮಾರಣಾಂತಿಕ ಹಲ್ಲೆ ಆರೋಪ ಕೇಳಿಬಂದಿದ್ದು, ಆರು ಜನ ಮುಸ್ಲಿಂ ಯುವಕರ ಮೇಲೆ ಮುಸ್ಲಿಂ ಯುವಕರಿಂದಲೇ ಹಲ್ಲೆ ನಡೆಸಿರುವ ಘಟನೆ ನಂಜನಗೂಡಿನ ನೀಲಕಂಠ ನಗರದಲ್ಲಿ ನಡೆದಿದೆ.
ತುಳು ರಂಗಭೂಮಿ ಕಲಾವಿದ, ಕಾಪು ರಂಗ ತರಂಗ ನಾಟಕ ತಂಡದ ಸ್ಥಾಪಕ ಸದಸ್ಯ, ಮಾಜಿ ಸಂಚಾಲಕ ಸುಜಿತ್ ಶೆಟ್ಟಿ ಪಾದೂರು (54) ಶುಕ್ರವಾರ ನಿಧನ ಹೊಂದಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ. 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಸನ್ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್ ಅಬ್ಬರಕ್ಕೆ ಕೋಲ್ಕತ್ತಾ ನೈಟ್ ರೈಡರ್ಸ್ ತತ್ತರಿಸಿದೆ. ಕೆಕೆಆರ್ ವಿರುದ್ಧ ಎಸ್ಆರ್ಹೆಚ್ 65 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.
ಪಶ್ಚಿಮ ಏಷ್ಯಾದಲ್ಲಿ ಯುದ್ಧ ಆರಂಭವಾಗಿ 34ನೇ ದಿನದಂದು ಇರಾನ್ ಭಾರತಕ್ಕೆ ಮಹತ್ವದ ಸಂದೇಶವನ್ನು ರವಾನಿಸಿದೆ. ಹೋರ್ಮುಜ್ ಜಲಸಂಧಿಯಲ್ಲಿ ಏನಾಗುತ್ತದೆ ಎಂಬುದನ್ನು ಇರಾನ್ ಮತ್ತು ಓಮನ್ ನಿರ್ಧರಿಸುತ್ತಾರೆ.
ನನ್ನ ಮಗಳ ವಿಚಾರದಲ್ಲಿ ನ್ಯಾಯ ಕೊಡಿಸದಿದ್ದರೆ, ಪುತ್ತೂರು ಮಹಾಲಿಂಗೇಶ್ವರ ದೇವರ ಧ್ವಜಸ್ತಂಭದ ಮುಂದೆ ಕುಳಿತುಕೊಳ್ಳುತ್ತೇನೆ ಎಂದು ಸಂತ್ರಸ್ತೆ ತಾಯಿ ನಮಿತಾ ಸ್ಫೋಟಕ ಹೇಳಿಕೆಯನ್ನ ನೀಡಿದ್ದಾರೆ.
ಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರ(ಮೊಂಡಿ ಥರ್ಸ್ಡೇ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು.
ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎನ್ನುವ ಕಾರಣದಿಂದ ವಿದ್ಯಾರ್ಥಿಗಳ ಬಸ್ ಪಾಸ್ಗಳ ಮಾನ್ಯತೆ ಅವಧಿಯನ್ನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೆಚ್ಚು ಮಾಡಿದೆ.
ಶ್ರೀ ಕ್ಷೇತ್ರ ಮಾರಣಕಟ್ಟೆ ಮೇಳದ ಯಕ್ಷಗಾನ ಸೇವೆಯ ವೇಳೆ ಮಹಿಷಾಸುರನ ಪಾತ್ರಧಾರಿ ತೋರಿದ ಅತಿರೇಕದ ಆವೇಶ ಈಗ ವಿವಾದಕ್ಕೆ ಕಾರಣವಾಗಿದೆ.
ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭಾ ಉಪನಾಯಕನ ಸ್ಥಾನದಿಂದ ವಜಾಗೊಳಿಸಲಾಗಿದೆ.