Showing 20 of 19102 articles • Page 62 of 956
‘ನಮ್ಮ ಮೆಟ್ರೊ’ ನೇರಳೆ ಮಾರ್ಗದಲ್ಲಿ ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಮೈಸೂರು ರಸ್ತೆ ಮೆಟ್ರೊ ನಿಲ್ದಾಣಗಳ ನಡುವೆ ಏಪ್ರಿಲ್ 5ರಂದು ಬೆಳಿಗ್ಗೆ ಎರಡು ಗಂಟೆ ಮೆಟ್ರೊ ಸಂಚಾರ ಸ್ಥಗಿತಗೊಳ್ಳಲಿದೆ.
ಯಾವುದೇ ದುಸ್ಸಾಹಸಕ್ಕೆ ಕೈ ಹಾಕಬೇಡಿ. ಒಂದು ವೇಳೆ ದುಸ್ಸಾಹಸ ಮಾಡಿದರೆ ಊಹಿಸಲಸಾಧ್ಯ ಪ್ರತಿಕ್ರಿಯೆ ಕೊಡುತ್ತೇವೆ ಎಂದು ಪಾಕಿಸ್ತಾನಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ಕೊಟ್ಟಿದ್ದಾರೆ.
ಸ್ನಾನಕ್ಕೆ ನೀರು ಕಾಯಿಸುವ ವೇಳೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಗೃಹಿಣಿಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ದೇವರಹುಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.
ರಣ್ಬೀರ್ ಕಪೂರ್ ಹಾಗೂ ಯಶ್ ನಟನೆಯ ‘ರಾಮಾಯಣ’ ಸಿನಿಮಾದ ಟೀಸರ್ ಇಂದು ಬಿಡುಗಡೆಯಾಗಿದೆ.
ಸಿ.ಎಸ್.ಐ ಲೊಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆಯು ಕಟಪಾಡಿಯಲ್ಲಿ ಆರಂಭಿಸಿರುವ ನೂತನ ಆರೋಗ್ಯ ಕೇಂದ್ರದ ಉದ್ಘಾಟನಾ ಸಮಾರಂಭವು ಎ.4ರ ಶನಿವಾರದಂದು ಬೆಳಿಗ್ಗೆ 10.30ಕ್ಕೆ ಕಟಪಾಡಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ ಎಂದು ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶಿಲ್ ಜತನ್ನ ಹೇಳಿದರು.
ಇಂಡೋನೇಷ್ಯಾದ ಉತ್ತರ ಭಾಗದಲ್ಲಿ ಗುರುವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀ ವಿದ್ಯಾಚೌಡೇಶ್ವರಿ ಅಮ್ಮನವರ ವಾರ್ಷಿಕ ಮಹೋತ್ಸವವು ಏ.17 ರಿಂದ ಏ. 26 ರವರೆಗೆ ನಡೆಯಲಿದೆ ಎಂದು ಶ್ರೀ ವಿದ್ಯಾ ಚೌಡೇಶ್ವರಿ ಮಹಾ ಸಂಸ್ಥಾನ ಮಠದ ಶ್ರೀ ವಿದ್ಯಾನಂದ ಸ್ವಾಮೀಜಿ ಹೇಳಿದರು.
ಜಕಾರ್ತದ ಗುಣುಂಗ್ ಸಹಾರಿ ರಸ್ತೆಯಲ್ಲಿ ನಡೆದ ಈ ಘಟನೆ ಈಗ ಹೊಸ ತಿರುವು ಪಡೆದುಕೊಂಡಿದೆ. ಕಪ್ಪು ಬಣ್ಣದ ಟೊಯೋಟಾ ಕ್ಯಾಲ್ಯ ಕಾರಿನ ಚಾಲಕ ಹಫೀಜ್ ಮಹೇಂದ್ರ (25) ಎಂಬಾತನನ್ನು ಪೊಲೀಸರು ತಡೆಯಲು ಯತ್ನಿಸಿದಾಗ ಆತ ನಿಲ್ಲಿಸದೆ ಅತಿವೇಗವಾಗಿ ರಾಂಗ್ ರೂಟ್ನಲ್ಲಿ ನುಗ್ಗಿದ್ದಾನೆ.
ಬೆಂಗಳೂರು ಸಮೀಪದ ಚನ್ನಪಟ್ಟಣದಲ್ಲಿ ಅಪರೂಪದ ಮತ್ತು ಮನಮಿಡಿಯುವ ದೃಶ್ಯವೊಂದು ಕಂಡುಬಂದಿದೆ. ಕಳೆದ ಹಲವು ವರ್ಷಗಳಿಂದ ಸ್ಥಳೀಯ ಮಂಗಗಳಿಗೆ ಪ್ರತಿದಿನ ತಪ್ಪದೇ ಆಹಾರ ನೀಡುತ್ತಿದ್ದ 85 ವರ್ಷದ ಪಾರ್ವತಮ್ಮ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ಭಾರತದ ಸುಪ್ರಸಿದ್ಧ ಕಲಾವಿದ ರಾಜಾ ರವಿವರ್ಮ ಅವರ ‘ಯಶೋದಾ ಮತ್ತು ಕೃಷ್ಣ’ ತೈಲಚಿತ್ರವು ಹರಾಜಿನ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದೆ. ಮುಂಬೈನಲ್ಲಿ ನಡೆದ ಸ್ಯಾಫ್ರನ್ ಆರ್ಟ್ನ ಸ್ಪ್ರಿಂಗ್ ಲೈವ್ ಆಕ್ಷನ್ನಲ್ಲಿ ಈ ಅದ್ಭುತ ಕಲಾಕೃತಿ ಬರೋಬ್ಬರಿ 167.2 ಕೋಟಿ ರೂಪಾಯಿಗಳಿಗೆ ಹರಾಜಾಗಿದೆ.
ಗಲ್ಫ್ ಮೆಡಿಕಲ್ ಯೂನಿವರ್ಸಿಟಿ ಮತ್ತೊಂದು ಮಹತ್ವದ ಜಾಗತಿಕ ಸಾಧನೆ ಮಾಡಿದ್ದು, ಅದರ ಸಹ ಸಂಸ್ಥೆ ಕಾಲೇಜ್ ಆಫ್ ಫಾರ್ಮಸಿ, ಕ್ಯೂಎಸ್ ವರ್ಲ್ಡ್ ಯುನಿವರ್ಸಿಟಿ ರ್ಯಾಂಕಿಗ್ಸ್ ಬೈ ಸಬ್ಜೆಕ್ಟ್ 2026ರಲ್ಲಿ ಫಾರ್ಮಸಿ ಮತ್ತು ಫಾರ್ಮಕಾಲಜಿ ವಿಭಾಗದಲ್ಲಿ ವಿಶ್ವದ 351–400 ಸ್ಥಾನಗಳ ಬ್ಯಾಂಡ್ನಲ್ಲಿ ಸ್ಥಾನ ಪಡೆದಿದೆ.
ಸುದೀಪ್ ರೈ ಆಸ್ಪತ್ರೆಯಲ್ಲೇ ಪೊಲೀಸರ ಮುಂದೆಯೇ ‘ವೈಯಕ್ತಿಕ ಕಾರಣದಿಂದ ನಾನೇ ಸ್ವ ಇಚ್ಛೆಯಿಂದ ವಿಷ ತೆಗೆದುಕೊಂಡಿದ್ದೇನೆ’ ಎಂದು ಹೇಳಿದ್ದಾರೆ. ಆದರೆ ಸುದೀಪ್ ರೈ ತಂದೆ ಮತ್ತು ವೇಣುಗೋಪಾಲ ಶೆಟ್ಟಿ ನನ್ನ ಮೇಲೆ ಮಾಡುತ್ತಿರುವ ಆರೋಪಗಳು ಸಂಪೂರ್ಣ ಸುಳ್ಳು. ನನ್ನ ವಿರುದ್ಧ ಕೇಳಿಬರುತ್ತಿರುವ ಹನಿ ಟ್ರ್ಯಾಪ್ ಆರೋಪ ಸಂಪೂರ್ಣ ಸುಳ್ಳಾಗಿದ್ದು, ಇದು ನನ್ನ ವ್ಯಕ್ತಿತ್ವಕ್ಕೆ ಹಾನಿ ಮಾಡುವ ಉದ್ದೇಶದಿಂದ ಮಾಡುತ್ತಿರುವ ಆರೋಪ ಎಂದು ಸುದೀಪ್ ರೈ ಪತ್ನಿ ನಟಿ ಸೌಮ್ಯ ಶೆಟ್ಟಿ ಹೇಳಿದ್ದಾರೆ.
ನೆಲ್ಯಾಡಿ ಮೂಲದ ಉದ್ಯಮಿ ಸುದೀಪ್ ರೈ ಅವರ ಆತ್ಮಹತ್ಯೆ ಪ್ರಕರಣವು ಉಡುಪಿ ಜಿಲ್ಲೆಯಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇದಿನೇ ಹೊಸ ಬೆಳವಣಿಗೆಗಳು ಬೆಳಕಿಗೆ ಬರುತ್ತಿವೆ.
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಚೈತ್ರ ಶುದ್ಧ ಹುಣ್ಣಿಮೆ ಅಂಗವಾಗಿ ಹನುಮಜಯಂತಿಯನ್ನು ಸಡಗರ-ಸಂಭ್ರಮದಿಂದ ಆಚರಿಸಲಾಯಿತು.
ಮೈಸೂರು ರೈಲ್ವೆ ವಿಭಾಗವು ತನ್ನ ಇತಿಹಾಸದಲ್ಲಿಯೇ ಮೊದಲ ಬಾರಿಗೆ 449.13 ಕೋಟಿ ರೂಪಾಯಿಗಳ ಆದಾಯಗಳಿಸಿದೆ. ಅತಿ ಹೆಚ್ಚಿನ ಪ್ರಯಾಣಿಕ ಆದಾಯವನ್ನು ಗಳಿಸಿದ್ದು, ಹಿಂದಿನ ₹419.89 ಕೋಟಿ ದಾಖಲೆಯನ್ನು ಮೀರಿಸಿದೆ. ಟಿಕೆಟ್ ಪರಿಶೀಲನೆ ಮೂಲಕ ₹9.75 ಕೋಟಿ ಆದಾಯವನ್ನು ಗಳಿಸಿದ್ದು, ಇದು ಹಿಂದಿನ ದಾಖಲೆ ಮತ್ತು ವಾರ್ಷಿಕ ಗುರಿಯನ್ನೂ ಮೀರಿದೆ ಈ ಮೂಲಕ ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ ಮತ್ತು ವಾಣಿಜ್ಯ ವೃದ್ಧಿಯಾಗಿದೆ.
ಎಗ್ಗಿಲ್ಲದೆ ಮೈಸೂರಿನಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದೆ. ರಾಜ್ಯದ ಮೂಲೆ ಮೂಲೆಗಳಿಂದ ಮೈಸೂರಿಗೆ ಬಂದು ಜೂಜಾಟ ಮಾಡುತ್ತಿದ್ದಾರೆ. ಲಕ್ಷ ಲಕ್ಷ ಹಣ ಹಾಕಿ ಜೂಜಾಟವಾಡುವ ದೃಶ್ಯ ಲಭ್ಯವಾಗಿದೆ.
ಇಂದ್ರಾಳಿಯ ಇಂದ್ರಾಣಿ ಶ್ರೀ ಪಂಚದುರ್ಗಾ ಪರಮೇಶ್ವರೀ ದೇವಸ್ಥಾನ ಸಮೀಪದಲ್ಲಿರುವ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರು ಹಾಗೂ ನಾಗ ದೇವರ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಎ. 3ರಿಂದ ಎ. 7ರ ವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಬುಧವಾರ ಹಸಿರು ಹೊರೆಕಾಣಿಕೆ ಶೋಭಾಯಾತ್ರೆ ವಿಜೃಂಭಣೆಯಿಂದ ನಡೆಯಿತು.
ಬೆಂಜಮಿನ್ ಮೆಮೋರಿಯಲ್ ಸ್ಪೋರ್ಟ್ಸ್ ಫೌಂಡೇಶನ್ (BMFS) ವತಿಯಿಂದ ಆಯೋಜಿಸಲಾದ ಸಮರ್ ಕೋಚಿಂಗ್ ಕ್ಯಾಂಪ್ 2026 ಅನ್ನು ಸಂತ ಅಲೋಶಿಯಸ್ ಪಿಯು ಕಾಲೇಜು ಮೈದಾನದಲ್ಲಿ ಉದ್ಘಾಟಿಸಲಾಯಿತು. ಈ ಶಿಬಿರವು ಯುವ ಕ್ರೀಡಾಪಟುಗಳ ಶಾರೀರಿಕ ಹಾಗೂ ಮಾನಸಿಕ ಅಭಿವೃದ್ಧಿಗೆ ಮಹತ್ವದ ವೇದಿಕೆಯಾಗಲಿದೆ.
ದಕ್ಷಿಣಕಾಶಿ ನಂಜನಗೂಡಿನಲ್ಲಿ ಐತಿಹಾಸಿಕ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ ಕಪಿಲಾ ನದಿಯಲ್ಲಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ತೆಪ್ಪೋತ್ಸವವು ಬುಧವಾರ ರಾತ್ರಿ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು.
ಏಪ್ರಿಲ್ 1 ರಂದು ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಯಾದ ದಿನವಾಗಿದ್ದು, ಈ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ರವರು ಆರ್ಬಿಐ ಸ್ಥಾಪನೆಗೆ ನೀಡಿರುವ ಕೊಡುಗೆಗಳ ಸ್ಮರಣಾರ್ಥವಾಗಿ ಅರ್ಥಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಸಹಭಾಗಿತ್ವದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಆರ್ಥಿಕ ಚಿಂತನೆಗಳು ಎಂಬ ವಿಷಯದ ಬಗ್ಗೆ ನಂಜನಗೂಡು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.