Showing 20 of 20697 articles • Page 626 of 1035
ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ನ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವ ಉದ್ದೇಶದಿಂದ ನ.1ರಿಂದ ನ.7 ರವರೆಗೆ “ಕನ್ನಡ ಹಬ್ಬ ಸಪ್ತಾಹ”ವನ್ನು ಕುಂದಾಪುರದಲ್ಲಿ ಆಯೋಜಿಸಲಾಗಿದೆ.
ಅರಣ್ಯ ಇಲಾಖೆ ಉಪ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರಿಂದ ಬಿಲ್ಲವ ಯುವತಿ ಮತ್ತು ಭಜನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಹಿಂದೂಪರ ಸಂಘಟನೆಗಳಿಂದ ಪುತ್ತೂರು ಡಿವೈಎಸ್ಪಿ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ 17 ಅಕ್ಟೋಬರ್ 2024 ರಂದು ಶ್ರೀಮಾನ್ ಮೈಕಲ್ ಡಿ ಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಮರಡಿಗಟ್ಟೆಯಲ್ಲಿರುವ ಕರ್ನಾಟಕದ ಏಕೈಕ ಸಂಸ್ಕೃತ ವಿಶ್ವವಿದ್ಯಾಲಯವು 12 ವರ್ಷಗಳ ನಿರ್ಮಾಣದ ಅವಧಿಯ ನಂತರ ಅಂತಿಮವಾಗಿ ಪೂರ್ಣಗೊಂಡಿದೆ ಮತ್ತು ಉದ್ಘಾಟನೆಗೆ ಸಿದ್ಧವಾಗಿದೆ.
ಕಾಡುಗಳ್ಳ ವೀರಪ್ಪನ್ ವಂಶಸ್ಥರು ಬಿಜೆಪಿ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ವಾಗ್ದಾಳಿ ನಡೆಸಿದ್ದಾರೆ. ವೀರಪ್ಪನ್ ಮಗಳು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿಲ್ಲವೇ? ಅವರು ಅಂತಹ ಜನರನ್ನು ತಮ್ಮ ಪಕ್ಷದಲ್ಲಿ ಇಟ್ಟುಕೊಂಡು ನಂತರ ನಮಗೆ ಬೋಧಿಸುತ್ತಾರೆ.
ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಪುರಸಭೆಯಲ್ಲಿ ಸ್ಥಳೀಯ ಕೆರೆಗೆ ನೀರು ಪೂರೈಸುವ ರಾಜಕಾಲುವೆಯನ್ನು ಅತಿಕ್ರಮಿಸಿದ್ದ ಎಸ್ಇ ತುರೋಕಾ ಕಂಪನಿಗೆ ಸೇರಿದ ಶೆಡ್ ಅನ್ನು ಲೋಕಾಯುಕ್ತರ ಆದೇಶದ ಮೇರೆಗೆ ತೆರವುಗೊಳಿಸಲಾಗಿದೆ.
ಬೆಂಗಳೂರು ಮೂಲದ ‘ನಮ್ಮ ಯಾತ್ರಿ’ ಸಂಸ್ಥೆಯು ಉಚಿತ ಆಟೋರಿಕ್ಷಾ ಚಾಲನಾ ಪಾಠಗಳನ್ನು ನೀಡುವ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುತ್ತಿದೆ.
ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ್ದಾರೆ.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ನಿಟ್ಟಿನಲ್ಲಿ ಉಡುಪಿ ನಗರ ಸಭೆ ಸದ್ಯಸರ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಅರಣ್ಯ ಇಲಾಖೆಯ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಬಿಲ್ಲವ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಮತ್ತು ಹಿಂದು ಯುವಕರ ಬಗ್ಗೆ ಅಶ್ಲೀಲ, ಮಾನಹಾನಿ ಮಾಡುವ ಮತ್ತು ಸಮಾಜದಲ್ಲಿ ವರ್ಗ ಸಂಘರ್ಷಕ್ಕೆ ಎಡೆ ಮಾಡಿಕೊಡುವಂತಹ ಮತ್ತು ಸಮಾಜದ ಶಾಂತಿಗೆ ಧಕ್ಕೆ ಉಂಟಾಗುವ ರೀತಿಯಲ್ಲಿ ಮಾತನಾಡಿರುವ ಕುರಿತು ಮೂಡುಬಿದಿರೆ ಪೋಲೀಸರಿಗೆ ಹಿಂದೂ ಜಾಗರಣ ವೇದಿಕೆ ದೂರು ನೀಡಿದೆ.
ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಡಿಕೆ ಸುರೇಶ್ ಅವರಿಗೆ ಸಿಗಬೇಕೆಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಚರ್ಚ್ವೊಂದರ ವಿದ್ಯಾ ಜ್ಯೋತಿ ಬಿಲ್ಡಿಂಗ್ ನ ಪಟಾಕಿ ಮಾರಾಟದ ಅಂಗಡಿಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಇಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ವೇಳೆ ಭಾರತ ಮತ್ತು ನ್ಯೂಜಿಲೆಂಡ್ ಧ್ವಜಗಳ ಜೊತೆಗೆ ಕರ್ನಾಟಕ ರಾಜ್ಯ ಧ್ವಜವನ್ನು ಪ್ರಮುಖವಾಗಿ ಪ್ರದರ್ಶಿಸಲಾಯಿತು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾಕೂಟವನ್ನು ಅ.22ರಂದು ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ.
ತುಳುನಾಡಿನ ಜಾನಪದೀಯ ಕ್ರೀಡೆ ಕಂಬಳದ ಋತು ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈ ಬಾರಿ ಮೊದಲ ಕಂಬಳ ಬೆಂಗಳೂರಿನಲ್ಲಿ ನಡೆದರೆ, ಕೊನೆಯ ಕಂಬಳ ಮಲೆನಾಡು ಶಿವಮೊಗ್ಗದಲ್ಲಿ ನಡೆಯಲಿದೆ.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್ ತನ್ನ ಬಹು ನಿರೀಕ್ಷಿತ ವಾರ್ಷಿಕ ತಾಂತ್ರಿಕ ಉತ್ಸವವಾದ ದಿ ಇಂಜಿನಿಯರ್ 2024 ಅನ್ನು ಇಂದು (17.10.2024) NITK ಸುರತ್ಕಲ್ ಕ್ಯಾಂಪಸ್ನಲ್ಲಿ ಪ್ರಾರಂಭಿಸಿತು. ಈ ವರ್ಷದ ಥೀಮ್, “ಎನ್ಚ್ಯಾಂಟೆಡ್ ಕಾಸ್ಮೊಸ್”, ವಿಶಾಲವಾದ ಬ್ರಹ್ಮಾಂಡದ ನಾವೀನ್ಯತೆ, ಕುತೂಹಲ ಮತ್ತು ಅನ್ವೇಷಣೆಯನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿದೆ.
ಕಾರ್ಕಳದ ರೆಂಜಾಳ ನಾಯಕ್ ಕುಟುಂಬದ ಹಿರಿಯರಾದ ‘ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ (76)’ ಅಕ್ಟೋಬರ್ 16 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಪ್ರತಿ ಪಂದ್ಯವು ರೋಮಾಂಚಕ ವಿಜಯಗಳು ಅಥವಾ ಅನಿರೀಕ್ಷಿತ ಅಸಮಾಧಾನಗಳಿಗೆ ಕಾರಣವಾಗುವ ಕ್ರೀಡಾ ಅಂದಾಜಿಸುವಿಕೆಯ ಆಹ್ಲಾದಕರ ಜಗತ್ತಿನಲ್ಲಿ, ಫೋಮೊ7 ಕ್ರಿಕೆಟ್, ಟೆನ್ನಿಸ್ ಮತ್ತು ವಾಲಿಬಾಲ್ನಲ್ಲಿ ತಮ್ಮ ಕೌಶಲ್ಯಗಳನ್ನು ಪರೀಕ್ಷಿಸಲು ಉತ್ಸುಕರಾಗಿರುವ ಉತ್ಸಾಹಿಗಳಿಗೆ ಒಂದು ಪ್ರಮುಖ ವೇದಿಕೆಯಾಗಿ ನಿಂತಿದೆ.
ಅಭಿಘ್ನ ನೃತ್ಯಾಲಯಂ ಸಂಸ್ಥೆ ವತಿಯಿಂದ ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಸಹಯೋಗದೊಂದಿಗೆ ನಾಳೆ (ಅ.17) ಶ್ರೀಕೃಷ್ಣಮಠದ ಮಧ್ವಮಂಟದಲ್ಲಿ ಹಾಗೂ ರಾಜಾಂಗಣದಲ್ಲಿ ಬುಕ್ ಆಫ್ ರೆಕಾರ್ಡ್ ದಾಖಲೆಗಾಗಿ 100 ಮಂದಿ 14 ಗಂಟೆಗಳ ನಿರಂತರ ಭರತನಾಟ್ಯ ಪ್ರಸ್ತುತಪಡಿಸಲಿದ್ದಾರೆ ಎಂದು ಅಭಿಘ್ನ ನೃತ್ಯಾಲಯಂ ಸಂಸ್ಥೆ ಮುಖ್ಯಸ್ಥೆ, ಕಾರ್ಯಕ್ರಮ ಸಂಚಾಲಕಿ ಚಂದ್ರಬಾನು ಚತುರ್ವೇದಿ ತಿಳಿಸಿದರು.
ಮಾದಕ ದ್ರವ್ಯ ಹಾವಳಿ ತಡೆಗೆ ಸರಕಾರ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಪ್ರಯತ್ನಗಳಿಗೆ ಪೂರಕವಾಗಿ ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯ, ಫಾದರ್ ಮುಲ್ಲರ್ ಚಾರಿಟೇಬಲ್ ಟ್ರಸ್ಟ್, ಅಲೋಶಿಯಸ್ ಡೀಮ್ಸ್ ಯೂನಿವರ್ಸಿಟಿ, ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಕ್ಯಾಥೋಲಿಕ್ ಶಿಕ್ಷಣ ಮಂಡಳಿ ಸಹಯೋಗದಲ್ಲಿ ಅ. 18ರಂದು ಮಧ್ಯಾಹ್ನ 2 ರಿಂದ 4:30 ರವರೆಗೆ ವಾಕಥಾನ್ ಕಾರ್ಯಕ್ರಮ ಆಯೋಜಿಸುತ್ತಿದೆ.