Showing 20 of 19118 articles • Page 71 of 956
ಜಂಕ್ಷನ್-ಸೂರತ್ ಸಂಚರಿಸುತ್ತಿದ್ದ ವಿಶೇಷ ರೈಲನ್ನು ಖಾಯಂಗೊಳಿಸಲು ರೈಲ್ವೇ ಸಚಿವಾಲಯ ಒಪ್ಪಿಗೆ ನೀಡಿದೆ. ರೈಲಿನ ಸಂಖ್ಯೆಯೂ ಬದಲಾಗಲಿದ್ದು, ನಂ. 19057 ಸೂರತ್ ಮಂಗಳೂರು ಎಕ್ಸ್ ಪ್ರೆಸ್ ಬುಧವಾರ, ರವಿವಾರ ರಾತ್ರಿ 7.35ಕ್ಕೆ ಸೂರತ್ನಿಂದ ಹೊರಡಲಿದ್ದು, ಗುರುವಾರ, ಸೋಮವಾರ ಮಂಗಳೂರು ತಲಪಲಿದೆ.
ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಓರ್ವನಿಗೆ ಜಾಮೀನು ಮಂಜೂರಾಗಿದೆ. ರಿಯಾಜ್ ಎಚ್ ವೈ ಎಂಬ ವ್ಯಕ್ತಿಗೆ ಜಾಮೀನು ಮಂಜೂರಾಗಿದೆ.
ದಕ್ಷಿಣ ಕನ್ನಡ ಮೋಟಾರ್ ಸ್ಪೋರ್ಟ್ಸ್ ಇತಿಹಾಸದಲ್ಲೇ ಮಹತ್ವದ ಕ್ಷಣಕ್ಕೆ ವೇದಿಕೆ ಸಜ್ಜಾಗಿದೆ. ಐಎಂಎಸ್ಸಿ. ಮೋಟಾರ್ ಸ್ಪೋರ್ಟ್ಸ್ನ 25ನೇ ವರ್ಷದ ಸಂಭ್ರಮದ ಅಂಗವಾಗಿ 400ನೇ ಸ್ಪರ್ಧೆಯಾಗಿ ಪ್ರತಿಷ್ಠಿತ ಐಎಂಎನ್ಸಿ ಆಫ್ ರೋಡ್ ಟ್ರೋಪಿ 2020ನ್ನು ಮಾ.28, 29ರಂದು ಮಂಗಳೂರು ಸಮೀಪದ ಒಡ್ದುರು ಫಾರ್ಮ್ಸ್ನಲ್ಲಿ ಆಯೋಜಿಸಿದೆ.
ಬೆಳ್ಳಂಬೆಳಿಗ್ಗೆ ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಬ್ರಿಜ್ ಮೇಲೆ ನಡೆದಿದೆ.
ಇಂಧನ ಭದ್ರತೆಗೆ ಹೆಚ್ಚಿನ ಬಲ ತುಂಬಲು, ಗುಜರಾತ್ನಿಂದ ಹೊರಟಿದ್ದ ‘ಅಪೋಲೊ ಓಷಿಯನ್’ (Apollo Ocean) ಎಂಬ ಬೃಹತ್ ಎಲ್ಪಿಜಿ ಟ್ಯಾಂಕರ್ ಬುಧವಾರ ರಾತ್ರಿ ನವ ಮಂಗಳೂರು ಬಂದರನ್ನು ತಲುಪಿದೆ.
ಶ್ರೀ ಅಖಿಲ ಹವ್ಯಕ ಮಹಾಸಭೆಯು ನೀಡುವ ವಾರ್ಷಿಕ ವಿಶೇಷ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಮಾರ್ಚ್ 26 ಭಾನುವಾರದಂದು ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ನಡೆಯುವ 83ನೇಯ ವರ್ಷದ ಹವ್ಯಕ ಸಂಸ್ಥಾಪನೋತ್ಸವ ಕಾರ್ಯಕ್ರಮದಲ್ಲಿ 2025-26 ನೇಯ ಸಾಲಿನ ಪ್ರಶಸ್ತಿ ಪ್ರದಾನ ನಡೆಯಲಿದೆ.
ಯುಎಇ ನಲ್ಲಿ ಕಳೆದ 23 ವರ್ಷಗಳಿಂದ ಕನ್ನಡ ಪರಸೇವೆಗಳನ್ನು ಮಾಡುತ್ತಾ ವಿಶೇಷ ಮತ್ತು ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಅನಿವಾಸಿ ಕನ್ನಡಿಗರಿಗೆ ಆಯೋಜನೆ ಮಾಡುವ ಹೆಮ್ಮಯ ಸಂಸ್ಥೆ ಕರ್ನಾಟಕ ಸಂಘ ಶಾರ್ಜಾ.
ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟು ಪೂರ್ಣಪ್ರಮಾಣದಲ್ಲಿ ಇನ್ನೂ ಬಗೆಹರಿಯದ ಹಿನ್ನೆಲೆ ಭಾರತ, ರಷ್ಯಾದಿಂದ ತೈಲ ಖರೀದಿಯನ್ನ ಮುಂದುವರಿಸಿದೆ.
ಭಾರತದ ಆರೋಗ್ಯ ರಕ್ಷಣಾ ಕ್ಷೇತ್ರದಲ್ಲಿ ಹಿಂದೆಂದೂ ಕಂಡಿರದ ಅತಿದೊಡ್ಡ ಐಪಿಒ (Initial Public Offering) ಗೆ ಮಣಿಪಾಲ್ ಹಾಸ್ಪಿಟಲ್ಸ್ ಸಜ್ಜಾಗಿದೆ. ಸಿಂಗಾಪುರದ ಹೂಡಿಕೆ ಸಂಸ್ಥೆ ಟೆಮಾಸೆಕ್ ಮತ್ತು ಡಾ. ರಂಜನ್ ಪೈ ಬೆಂಬಲಿತ ಮಣಿಪಾಲ್ ಹಾಸ್ಪಿಟಲ್ಸ್, ಬಿಲಿಯನ್ ಡಾಲರ್ಗೂ ಅಧಿಕ ಮೊತ್ತದ ಐಪಿಒಗಾಗಿ ಸೆಬಿಗೆ (Sebi) ಡ್ರಾಫ್ಟ್ ಪೇಪರ್ಗಳನ್ನು ಸಲ್ಲಿಸಿದೆ.
ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿಯಾಗಿ ಮೆಸ್ಕಾಂ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ನಿಂತಿಕಲ್ಲು ಸಮೀಪ ನಡೆದಿದೆ.
ನಕಲಿ ಬಿಡಿಎಸ್ ಪ್ರಮಾಣಪತ್ರ ಬಳಸಿ 20 ವರ್ಷಗಳ ಕಾಲ ಅಕ್ರಮ ಕ್ಲಿನಿಕ್ ನಡೆಸುತ್ತಿದ್ದನು. ಅನುಮಾನ ಬರದಂತೆ ರಾತ್ರಿ ಮಾತ್ರ ಕ್ಲಿನಿಕ್ ಕಾರ್ಯಾಚರಣೆ ನಡೆಯುತ್ತಿತ್ತು.
ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ಮಂಗಳವಾರ ತಡರಾತ್ರಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ವಿಮಾನ ನಿಲ್ದಾಣದ ಇಂಧನ ಟ್ಯಾಂಕ್ವೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಆಕಾಶದತ್ತ ದಟ್ಟವಾದ ಹೊಗೆ ಆವರಿಸಿರುವ ದೃಶ್ಯಗಳು ಕಂಡುಬಂದಿವೆ.
ತುಳುನಾಡಿನ ಏಳು ಪ್ರಸಿದ್ಧ ಜಾತ್ರೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ಪಡೆದಿರುವ ಕಾಪುವಿನ ಶ್ರೀ ಹಳೇ ಮಾರಿಗುಡಿ , ಶ್ರೀ ಹೊಸ ಮಾರಿಗುಡಿ ಮತ್ತು ಶ್ರೀ ಮೂರನೇ ಮಾರಿಗುಡಿ (ಕಲ್ಯ)ಯಲ್ಲಿ ನಡೆಯುವ ಎರಡು ದಿನಗಳ ಸುಗ್ಗಿ ಮಾರಿಪೂಜೆ ಬುಧವಾರ ಸಂಜೆ ವೈಭವದಿಂದ ಸಂಪನ್ನಗೊಂಡಿತು.
ಭಾರೀ ಮಳೆಯಿಂದಾಗಿ ಉತ್ತರ ಸಿಕ್ಕಿಂನ ಚುಂಗ್ಥಾಂಗ್ನ ಹಲವೆಡೆ ಭೂಕುಸಿತಗಳು ಸಂಭವಿವೆ. ಇದರಿಂದ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಮಂಗಳೂರಿನ ಜ್ಯುವೆಲ್ಲರಿ ಶಾಪ್ ಮಾಲೀಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ನಗರದ ಪ್ರಸಿದ್ಧ ‘ಶುಭಾಂಗಿ ಜ್ಯುವೆಲ್ಲರ್ಸ್’ ಅಂಗಡಿಗೆ ಸ್ವಾಮೀಜಿ ವೇಷದಲ್ಲಿ ಬಂದ ವ್ಯಕ್ತಿಯೊಬ್ಬ, ಮಾಲೀಕರನ್ನು ನಂಬಿಸಿ ಸುಮಾರು 4 ಗ್ರಾಂ ತೂಕದ ಚಿನ್ನದ ಉಂಗುರವನ್ನು ದೋಚಿ ಪರಾರಿಯಾಗಿದ್ದಾನೆ.
ದಾಖಲೆಯ ಐಪಿಎಲ್ ಒಪ್ಪಂದದಲ್ಲಿ 16,000 ಕೋಟಿ ರೂ.ಗೂ ಹೆಚ್ಚು ಬೆಲೆಗೆ ಮಾರಾಟವಾಗಿದೆ. ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟವು ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಸ್ವಾಧೀನವನ್ನು ಪೂರ್ಣಗೊಳಿಸಿತು.
ಕಾಪು ಕಡಲ ಕಿನಾರೆಯಲ್ಲಿ ಅಕ್ರಮ ಪಾಚ್ಚಾಲೆ (ಅಜಿರ್ ) ತೆಗೆಯುತ್ತಿದ್ದ ತಮಿಳುನಾಡು ಮೂಲದ ಮೀನುಗಾರ ದೋಣಿ ಗುದ್ದಿದ ಪರಿಣಾಮ ಸ್ಥಳೀಯ ಮೀನುಗಾರ ದೋಣಿ ಮಗುಚಿ ಇಬ್ಬರು ಮೀನುಗಾರು ನೀರಿಗೆ ಬಿದ್ದು ಒಬ್ಬನನ್ನು ರಕ್ಷಿಸಲಾಗಿದ್ದು, ಇನ್ನೊಬ್ಬ ಮೀನುಗಾರ ನಾಪತ್ತೆಯಾದ ಘಟನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ತಲ್ಲೂರು-ಪ್ರವಾಸಿ ಮಂದಿರದ ಬಳಿ ಕಳೆದ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕುಂದಾಪುರ ತಾಲೂಕು ಗಾಣಿಗ ಸಮಾಜ ಸಂಘಟನೆಯ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ಪಂಚಾಯತ್ ರಾಜ್ ಕಾರ್ಯಕರ್ತ ಶ್ರೀನಿವಾಸ ಗಾಣಿಗ (68) ಅವರು ದುರ್ಮರಣಕ್ಕೀಡಾಗಿದ್ದಾರೆ.
ಶ್ರೀಕೃಷ್ಣ ದೇವರ ದರ್ಶನಕ್ಕೆ ತೆರಳುವ ಮಾರ್ಗದಲ್ಲಿ ಕೆಲವೊಂದು ಬದಲಾವಣೆ ಮಾಡಿದ್ದು, ಪ್ರತಿಯೊಬ್ಬ ಭಕ್ತರಿಗೂ ದೇವರ ದರ್ಶನವಾಗಬೇಕೆನ್ನುವ ನಿಟ್ಟಿನಲ್ಲಿ ನೂತನ ಪಥಕ್ಕೆ ತಯಾರಿ ಮಾಡಲಾಗಿದೆ ಎಂದು ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳಾತ್ತಾಯ ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೇರಳ ಪ್ರವಾಸ ರದ್ದುಗೊಳಿಸಿದ್ದಾರೆ.