Showing 20 of 19125 articles • Page 75 of 957
ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಯುಗಾದಿ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಅಂಗವಾಗಿ ಅಪ್ಪು ಉತ್ಸವ ಮತ್ತು ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಮಾರ್ಚ್ 15ರ ಭಾನುವಾರದಂದು ರಾಮಮೂರ್ತಿ ನಗರದ ನಾಟ್ಯ ಪ್ರಿಯ ಆಡಿಟೋರಿಯಂ ನಲ್ಲಿ ಬೆಳಗ್ಗೆ 9 ಗಂಟೆಯಿಂದ ರಾತ್ರಿ 9:00ವರೆಗೆ ನಿರಂತರವಾಗಿ ಅದ್ದೂರಿಯಾಗಿ ನಡೆಸಲಾಯಿತು.
ಹೆಜಮಾಡಿ ಟೋಲ್ ಬಳಿ ಟಯರ್ ಪಂಕ್ಚರ್ ಅಂಗಡಿಯಲ್ಲಿ ಬೆಂಕಿ ಅವಘಡ ಉಂಟಾದ ಘಟನೆ ಭಾನುವಾರ ಸಂಭವಿಸಿದೆ.
ನಿಗೂಢ ಕಾರಣಕ್ಕೆ ಯುವ ಉದ್ಯಮಿಯೊಬ್ಬ ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಗೂನಡ್ಕದಲ್ಲಿ ನಡೆದಿದೆ.
ತಾಲೂಕಿನ ಚಾರ್ಮಾಡಿ ಘಾಟ್ನಲ್ಲಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಟಿಟಿ ವಾಹನ ಪಲ್ಟಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದವರಲ್ಲಿ ಓರ್ವ ವೃದ್ಧ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶೇಖರಪ್ಪ (59) ಎಂದು ಗುರುತಿಸಲಾಗಿದೆ.
ಕೊಲೆಯತ್ನ, ದರೋಡೆ ಸೇರಿದಂತೆ ಹತ್ತಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಫರಾಜ್ ಅಲಿಯಾಸ್ ಮೊಹಮ್ಮದ್ ಫರಾಜ್ (32) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿಧಾನಸೌಧದ ಮುಖ್ಯ ದ್ವಾರವನ್ನು ಮಾರ್ಚ್ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.
ಬಡನಿಡಿಯೂರಿನ ಸಮುದ್ರ ತೀರದಲ್ಲಿ ರೆಸಾರ್ಟ್ ನಿರ್ಮಿಸಲು ಕಾನೂನಿನಲ್ಲಿ ಯಾವುದೇ ತೊಡಕಿಲ್ಲದೇ ಇದ್ದರೂ ವೈಯಕ್ತಿಕ ದ್ವೇಷದಿಂದ ಶಾಸಕ ಯಶ್ವಾಲ್ ಸುವರ್ಣ ಅವರು ರೆಸಾರ್ಟ್ ನಿರ್ಮಾಣಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ.
ISO ಪ್ರಮಾಣೀಕರಣ ಹೊಂದಿರುವ ಮತ್ತು 163 ವರ್ಷಗಳ ವಿಶ್ವಾಸಾರ್ಹ ಸಂಪ್ರದಾಯ ಹೊಂದಿರುವ ಆಭರಣ ಸಮೂಹ ಬಾಬಿ ಚೆಮ್ಮನೂರು ಇಂಟರ್ನ್ಯಾಷನಲ್ ಜ್ಯುವೆಲ್ಲರ್ಸ್, ಕರ್ನಾಟಕದ ಮಂಗಳೂರಿನಲ್ಲಿ ತನ್ನ ಹೊಸ ಶೋರೂಮ್ ಅನ್ನು ತೆರೆಯುತ್ತಿದೆ. ಈ ಶೋರೂಮ್ ಅನ್ನು ಮಾರ್ಚ್ 22 ರ ಭಾನುವಾರ ಸಂಜೆ 5 ಗಂಟೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ.
ಡೇಜಿಯಾನ್ನ ಮುನ್ಪ್ಯೋಂಗ್-ಡಾಂಗ್ನಲ್ಲಿರುವ ಕಾರು ಬಿಡಿಭಾಗಗಳ ತಯಾರಿಕಾ ಕಾರ್ಖಾನೆಯಲ್ಲಿ ಶುಕ್ರವಾರ ತಡರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ಸ್ಥಳಗಳಲ್ಲಿ ಒಂದಾದ ಮದೀನಾದ ಪ್ರವಾದಿ ಮಸೀದಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ.
ಮುಂದಿನ ವರ್ಷದಿಂದ ಗರಳಪುರಿ ಉತ್ಸವವನ್ನು ಇನ್ನು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಅದ್ದೂರಿಯಾಗಿ ಮಾಡಲಾಗುತ್ತದೆ. ತಾಲ್ಲೂಕಿನಲ್ಲಿರುವ ಕಲಾವಿದರನ್ನು ಗುರುತಿಸಲು ವೇದಿಕೆಯನ್ನು ಕಲ್ಪಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.
ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೋಡಿ ಎಂಬಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಯೊಂದರಲ್ಲಿ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕಚೇರಿಯ ಸೊತ್ತುಗಳನ್ನು ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕನೊಬ್ಬನ ವಿರುದ್ಧ ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಅಡ್ರೆಸ್ ಇಲ್ಲದ ರಸ್ತೆ, ಅಡಿಗಡಿಗೂ ಗುಂಡಿಯಾಗಿರುವ ಘಟನೆ ಹುಣಸೂರು ತಾಲ್ಲೂಕಿನ ಹಲವು ಗ್ರಾಮಗಳ ರಸ್ತೆಯಾಗಿದೆ. ರಸ್ತೆ ಗುಂಡಿ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಲಾಯಿತು.
ಕಬಿನಿ ಕಾಡಿನಲ್ಲಿ ಹುಲಿ ಮರಿಗಳ ಕಲರವ ಕಂಡುಬಂದಿದ್ದು, ನಾಗರಹೊಳೆ ಅಭಯಾರಣ್ಯದಲ್ಲಿ ಹುಲಿ ಮರಿಗಳ ಅಪರೂಪದ ದೃಶ್ಯ ಸೆರೆಯಾಗಿದೆ. ಕಾಡಿನ ಮಣ್ಣಿನ ಸುವಾಸನೆ ಸವಿದು ಪುಟ್ಟ ಹುಲಿ ಮರಿಗಳು ಮೈಮರೆತಿದೆ.
ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ.
ಪುರಾತತ್ವ ಇಲಾಖೆಯ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ನಂಜನಗೂಡಿನ ಕಲ್ಲು ಮಂಟಪಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಹೊತ್ತಿ ಉರಿದಿದೆ. ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಹಿಂಭಾಗದಲ್ಲಿರುವ ಕಲ್ಲು ಮಂಟಪದಲ್ಲಿ ಸಂಜೆ ಬೆಂಕಿ ಕಾಣಿಸಿಕೊಂಡಿದೆ.
ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ರಾಮೋತ್ಸವವನ್ನು ಅತ್ಯಂತ ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ಈ ಸಂಬಂಧ ಪುತ್ತಿಗೆ ಮಠದ ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ಪ್ರಾರ್ಥನೆಯನ್ನು ಮಾಡಿ, ಸೀತಾ ಲಕ್ಷ್ಮಣ ಸಹಿತ ಶ್ರೀ ರಾಮ ದೇವರಿಗೆ ವಿಶೇಷ ಪೂಜೆಯನ್ನು ಮಾಡಿ, ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ, ಅನುಗ್ರಹ ಸಂದೇಶ ನೀಡಿದರು.
ಭುವನೇಶ್ವರದಿಂದ ನಬರಂಗ್ಪುರಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ನ ಹಿಂಭಾಗದ ಟೈರ್ ಸ್ಫೋಟಗೊಂಡ ನಂತರ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.
ಬದ್ಲಾಪುರದಿಂದ ಸಿಯಾನ್ ಆಸ್ಪತ್ರೆಗೆ ಪ್ರಯಾಣಿಸುತ್ತಿದ್ದಾಗ, ಒಂದು ಕುಟುಂಬದ ಆಂಬ್ಯುಲೆನ್ಸ್ ಮುಂಬೈನ ಬೆಳಗಿನ ಟ್ರಾಫಿಕ್ನಲ್ಲಿ ಸಿಲುಕಿಕೊಂಡಿತು, ಅಪರಿಚಿತ ಬೈಕ್ ಸವಾರನೊಬ್ಬ ಬಂದು ದಾರಿ ತೆರವುಗೊಳಿಸಿ ಮಾನವೀಯತೆ ಮೆರೆದಿದ್ದಾನೆ.
ಕರಾವಳಿ ಪ್ರದೇಶದ ಜನರ ಬದುಕು ಸಮುದ್ರದ ಜೊತೆ ಬಹುತೇಕ ಹೊಂದಿಕೊಂಡಿದೆ. ಮಳೆಗಾಲದ ಅವಧಿಯಲ್ಲಿ ಸಮುದ್ರ ಅಲೆಗಳು ಭಾರೀ ಆಗಿರುವುದರಿಂದ ಹಾಗೂ ಸರ್ಕಾರದ ಮೀನುಗಾರಿಕೆ ನಿಷೇಧವೂ ಇರುವುದರಿಂದ ಈ ಅವಧಿಯಲ್ಲಿ ಮೀನುಗಾರಿಕೆ ಚಟುವಟಿಕೆಗಳು ಬಹುತೇಕ ನಿಲ್ಲುತ್ತವೆ.