Showing 20 of 19126 articles • Page 79 of 957
ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಸಂತಸದ ವಾತಾವರಣ ಮನೆಮಾಡಿದೆ. ಇಲ್ಲಿನ ‘ಗೀತಾ’ ಎಂಬ ಹೆಸರಿನ ಭಾರತೀಯ ತೋಳ (Indian Wolf) ಒಂದೇ ಬಾರಿಗೆ ಏಳು ಮರಿಗಳಿಗೆ ಜನ್ಮ ನೀಡುವ ಮೂಲಕ ಗಮನ ಸೆಳೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಅರಸಮಜಲು ಎಂಬಲ್ಲಿ ಬುಧವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ.
ಚೀನಾದತ್ತ ಮುಖ ಮಾಡಿದ್ದ ರಷ್ಯಾದ ಕಚ್ಚಾ ತೈಲ ಹೊತ್ತ ಬೃಹತ್ ನೌಕೆಗಳು ದಕ್ಷಿಣ ಚೀನಾ ಸಮುದ್ರದಲ್ಲಿ ಇದ್ದಕ್ಕಿದ್ದಂತೆ ಯು ಟರ್ನ್ ಪಡೆದು ಈಗ ಭಾರತದತ್ತ ಧಾವಿಸುತ್ತಿವೆ.
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಪಕ್ಷದ ಪಾಲಿಗೆ ಪ್ರತಿಷ್ಠೆಯಾಗಿದೆ. ನಮಗೆ ಗೆಲುವೇ ಮಾನದಂಡ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ವಾಣಿಜ್ಯ ಬಳಕೆಯ ಸಿಲಿಂಡರ್ ಅಭಾವದಿಂದಾಗಿ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಹೊಟೇಲ್ ಗಳು ಬಂದ್ ಆಗಿವೆ.ಪ್ರತಿನಿತ್ಯ ಕೃಷ್ಣನಗರಿ ಉಡುಪಿಗೆ ಬೇರೆ ಬೇರೆ ಕಡೆಗಳಿಂದ ಸುಮಾರು 600 ರಷ್ಟು ಬಸ್ ಗಳು ಬರುತ್ತವೆ.ಹಾಗೆ ಬರುವ ಸಾವಿರಾರು ಪ್ರವಾಸಿಗರಿಗೆ ಊಟ ತಿಂಡಿ ಸಿದ್ದಪಡಿಸಬೇಕಿದೆ.ಆದರೆ ಗ್ಯಾಸ್ ಅಭಾವದಿಂದಾಗಿ ಅದು ಸಾಧ್ಯವಾಗುತ್ತಿಲ್ಲ.
ಗ್ಯಾಸ್ ಅಭಾವವನ್ನೇ ಸೈಬರ್ ವಂಚಕರು ಬಂಡವಾಳ ಮಾಡಿಕೊಂಡಿದ್ದಾರೆ ಎಂದು ಉಡುಪಿ ಎಸ್ಪಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಾರೊಂದು ಇನ್ನೊಂದು ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಗೆ ಡಿಕ್ಕಿಯಾದ ಘಟನೆ ಸಂತೆಕಟ್ಟೆಯ ಓವರ್ ಬ್ರಿಡ್ಜ್ ಬಳಿ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ.
ನೇಪಾಳದ ಖೋಟಾಂಗ್ ಜಿಲ್ಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಕುಟುಂಬ ಸದಸ್ಯರನ್ನು ಕರೆದೊಯ್ಯುತ್ತಿದ್ದಾಗ ಏರ್ ಡೈನಾಸ್ಟಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ದ.ಕ. ಜಿಲ್ಲೆಯಲ್ಲಿ ಆಟೋರಿಕ್ಷಾ ಚಾಲಕರಿಗೆ ಆಗುತ್ತಿರುವ ಸಮಸ್ಯೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಆಟೋ ರಿಕ್ಷಾ, ಟೂರಿಸ್ಟ್, ಭಾರೀ ವಾಹನ ಚಾಲಕರ ಸಂಘ (ಎಐಸಿಸಿಟಿಯು) ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ರಿಕ್ಷಾ ಚಾಲಕರು ಪ್ರತಿಭಟನೆ ನಡೆಯಿತು.
“ಕಳೆದ ಮಾರ್ಚ್ 13 ರಂದು ಸುದ್ದಿಗೋಷ್ಠಿ ನಡೆಸಿದ್ದ ಡಾ.ರತಿ ಅವರು ಕರಾವಳಿಯಲ್ಲಿ ದೈವ ನರ್ತನ ಸೇವೆಯನ್ನು ಪಂಬದ, ಪಾಣಾರ ಸುಮಾರು 16 ಜಾತಿಗಳವರು ಮಾಡಬೇಕು ಆದರೆ ಮಂಗಳೂರಿನ ಬೋಳೂರಿನಲ್ಲಿ ಜಾರಂದಾಯ ದೈವಸ್ಥಾನದ ಬಂಟ ದೈವಕ್ಕೆ ಕ್ರಿಶ್ಚಿಯನ್ ಮಹಿಳೆಗೆ ಹುಟ್ಟಿದ ಯುವಕನಿಂದ ನರ್ತನ ಸೇವೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ತಿರುವನಂತಪುಂ ನಾರ್ತ್-ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್ಪ್ರೆಸ್ ರೈಲಿನ ಸೇವೆಯನ್ನು ಖಾಯಂಗೊಳಿಸಲಾಗಿದೆ.
ಗಾಯಗೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ಕಾಡುಬೆಕ್ಕುನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಗಸ್ತು ಅರಣ್ಯಪಾಲಕ ಕಾಡುಬೆಕ್ಕನ್ನು ಚಿಕಿತ್ಸೆಗೆ ಒಳಪಡಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಳೆದ ಬಾರಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಈ ಬಾರಿ ಮತ್ತೆ ಅಗ್ರಸ್ಥಾನ ಪಡೆಯುವ ನಿರೀಕ್ಷೆಯೊಂದಿಗೆ ಪರೀಕ್ಷೆ ಎದುರಿಸಲು ಸಕಲ ಸಿದ್ಥತೆ ನಡೆಸಿದೆ.
ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ಕ್ರೈಸ್ತ ಸಮುದಾಯದವರಿಗೆ ಮಾಡಿರುವ ಭಕ್ತಿ ಸಂಜೀವನ ಕೂಟವಾಗಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ಸ್ಪಷ್ಟಪಡಿಸಿದ್ದಾರೆ.
ಮನು ಬಹ್ರೇನ್ ಎಂಬ ಕಾವ್ಯನಾಮದಿಂದ ಪೂಜಿಸಲ್ಪಡುತ್ತಿದ್ದ, ಹಿರಿಯ ಕೊಂಕಣಿ ಬರಹಗಾರ ಸ್ಟ್ಯಾನಿ ವಿಲಿಯಂ ಲೋಬೊ (78) ನಿಧನರಾದರು.
ವಾರಣಾಸಿಯ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ ಇಫ್ತಾರ್ ಕೂಟ ನಡೆಸುತ್ತಿರುವ ಜನರ ಗುಂಪೊಂದು ತೋರಿಸುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ದೂರು ದಾಖಲಿಸಿದ್ದು, 14 ಜನರನ್ನು ಬಂಧಿಸಲಾಗಿದೆ.
ಅಮೇರಿಕ-ಇಸ್ರೇಲ್ ಹಾಗು ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧದಿಂದ ಯುಎಇಯಲ್ಲಿ ಸಂಕಷ್ಟಕ್ಕೀಡಾಗಿದ್ದ ಪ್ರವಾಸಿ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸುವ ಜೊತೆಗೆ ವಿಸಿಟ್ ವೀಸಾ ಮೂಲಕ ಉದ್ಯೋಗವನ್ನು ಹರಸಿಬಂದ ಜನರಿಗೆ ವಸತಿ, ಊಟದ ವ್ಯವಸ್ಥೆ ಮಾಡುವ ಮೂಲಕ ‘ಕನ್ನಡಿಗಾಸ್ ಹೆಲ್ಪ್ ಲೈನ್’ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದೆ.
ಭೂ ವ್ಯವಹಾರದ ವ್ಯಾಜ್ಯದ ಕೋಪದಿಂದ ಕಾರಿನಲ್ಲಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊ ತೆದು ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ಮಂಗಳವಾರ (ಮಾ.17) ನಡೆದಿದೆ.
ದೈವ ಪಾತ್ರಿ ಸುಶಾಂತ್ ಬಂಗೇರ ಅವರ ಧರ್ಮದ ಕುರಿತು ಸಂಶೋಧಕಿ ರತಿ ಮಾಡಿರುವ ಆರೋಪಕ್ಕೆ ಈಗ ಸುಶಾಂತ್ ಅವರ ತಾಯಿ ಸವಿತಾ ಅವರು ಖಡಕ್ ಉತ್ತರ ನೀಡಿದ್ದಾರೆ.
ಕರಾವಳಿಯ ದೈವಾರಾಧನಾ ಪರಂಪರೆಯಲ್ಲಿ ಜಾತೀಯತೆ ಮತ್ತು ಧರ್ಮದ ಕುರಿತಾದ ಹೊಸ ವಿವಾದವೊಂದು ಸೃಷ್ಟಿಯಾಗಿದೆ. ದೈವ ಪಾತ್ರಿ ಸುಶಾಂತ್ ಬಂಗೇರ ಅವರು ಕ್ರೈಸ್ತ ಸಮುದಾಯಕ್ಕೆ ಸೇರಿದವರು ಮತ್ತು ಅವರಿಂದ ದೈವ ನರ್ತನ ಸೇವೆ ನಡೆಸಿರುವುದು ದೈವಾರಾಧನಾ ಪರಂಪರೆಗೆ ಮಾಡಿದ ಘೋರ ಅಪಚಾರ ಎಂದು ಸಂಶೋಧಕಿ ರತಿ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.