Showing 20 of 20367 articles • Page 80 of 1019
ಭಾರೀ ಮಳೆ ಮತ್ತು ಬಿರುಗಾಳಿಯ ಆರ್ಭಟಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರ ಸಂಪೂರ್ಣ ವ್ಯತ್ಯಯಗೊಂಡಿದೆ.
ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲ್ಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ.
ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಧರ್ಮಸ್ಥಳ ಗ್ರಾಮದಲ್ಲಿ ಬುರುಡೆ ರಹಸ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗ್ಲಗುಡ್ಡೆ ಅರಣ್ಯ ಪ್ರದೇಶಕ್ಕೆ ಬೆಂಗಳೂರಿನ ಎಫ್ ಎಸ್ ಎಲ್ ತಜ್ಞರು ಬಂದಿದ್ದಾರೆ.
ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ ಗೊಳ್ಳಲಿದೆ ಎಂದು ಮಾಜಿ ಸಚಿವ ಹಾಗೂ ವಿಕಾಸ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಜೆ ಪಾಲೆಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಒಂದೆಡೆ ಕಟ್ಟಡದ ತುದಿಯಿಂದ ಆಕಾಶಕ್ಕೇರಿದ ದಟ್ಟ ಹೊಗೆ, ಮತ್ತೊಂದೆಡೆ ಕಿವಿಗೆ ಬಿದ್ದ ಎಚ್ಚರಿಕೆಯ ಸೈರನ್ ಶಬ್ದ. ದಿಕ್ಕಾಪಾಲಾಗಿ ಓಡಾಡುತ್ತಿರುವ ಜನರು, ಕ್ಷಣಕ್ಕೊಂದು ಆತಂಕದ ವಾತಾವರಣ.
ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಪ್ರಥಮ ಬಾರಿಗೆ ವಿಪ್ರಬಾಂಧವರಿಗಾಗಿ ‘ಜಿಲ್ಲಾಮಟ್ಟದ ಭಜನಾ ಸ್ಪರ್ಧೆ’ಯನ್ನು ಮೇ 24ರಂದು ಗುಂಡಿಬೈಲಿನ ಬ್ರಾಹ್ಮ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಪರಿಷತ್ನ ವಿಷ್ಣುಪ್ರಸಾದ್ ಪಾಡಿಗಾರ್ ತಿಳಿಸಿದ್ದಾರೆ.
ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಹಾಲಿನ ದರ ಏರಿಕೆಯಾಗಿದೆ.
ಮನೆಯ ಮೇಲ್ಛಾವಣಿ ಕುಸಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಿಡಗುಂದಿ ಪಟ್ಟಣದ ಗೌರೀಶ್ವರ ದೇವಸ್ಥಾನ ಬಳಿ ಗುರುವಾರ ಮುಂಜಾನೆ ಸಂಭವಿಸಿದೆ.
ಕಾಕ್ರೋಚ್ ಜನತಾ ಪಾರ್ಟಿಯ ‘ಎಕ್ಸ್’ ಖಾತೆಗೆ ಭಾರತದಲ್ಲಿ ನಿರ್ಬಂಧ ಹೇರಲಾಗಿದೆ.
ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಗುರುವಾರ (ಮೇ 21) ನಡೆದಿದೆ.
ಲಾರಿ, ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಹುಕ್ಕೇರಿ ತಾಲೂಕಿನ ಸಂಕೇಶ್ವರ-ಗೋಟುರ ರಸ್ತೆಯಲ್ಲಿ ನಡೆದಿದೆ.
ವ್ಯಕ್ತಿಯೊಬ್ಬರು ಕಣಜದ ಹುಳುಗಳು ಕಚ್ಚಿ ಸಾವನ್ನಪ್ಪಿದ ಘಟನೆ ಅರಂತೋಡು ಸಮೀಪದ ಪೆರಾಜೆ ಗ್ರಾಮದ ಹೊದ್ದೆಟ್ಟಿ ಎಂಬಲ್ಲಿ ನಡೆದಿದೆ.
ಮಳೆಗಾಲಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳಲ್ಲಿ ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು, ಪ್ರತೀ ವಾರ್ಡ್ ಗಳಿಗೆ ಗ್ಯಾಂಗ್ ಮೆನ್ ನೇಮಿಸುವುದು, ಸೇರಿದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಅನೇಕ ಬಾರಿ ಸೂಚಿಸಿದ ಹೊರತಾಗಿಯೂ ಪಾಲಿಕೆಯ ಆಡಳಿತ ಆ ಬಗ್ಗೆ ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸದಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.
ಕರಾವಳಿ ಭಾಗದ ಜನರಿಗೆ ಶೀಘ್ರಗತಿಯಲ್ಲಿ ನ್ಯಾಯದಾನ ಒದಗಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂಬ ಮಂಗಳೂರು ವಕೀಲರ ಸಂಘದ ಹಲವು ವರ್ಷಗಳ ಬೇಡಿಕೆಯು ಎಲ್ಲಾ ರೀತಿಯಿಂದಲೂ ನ್ಯಾಯಯುತವಾಗಿದೆ. ಅಂತೆಯೇ ಇಡೀ ಮಂಗಳೂರಿನ ಜನತೆಯ ಪರವಾಗಿ ನನ್ನ ಆಗ್ರಹವೂ ಅದೇ ಆಗಿದ್ದು, ಅದರಲ್ಲಿ ಯಾವುದೇ ರಾಜಿಯಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.
ಆಫ್ರಿಕಾ ಖಂಡದ ಕೆಲವು ದೇಶಗಳಲ್ಲಿ ಎಬೋಲಾ ವೈರಸ್ ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಹಾಗೂ ಕರ್ನಾಟಕ ರಾಜ್ಯದಲ್ಲಿ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಮದರಸಾ ಶಿಕ್ಷಣ ಇಲಾಖೆಯ ಅಡಿಯಲ್ಲಿರುವ ಎಲ್ಲಾ ಮದರಸಾಗಳಲ್ಲಿ ‘ವಂದೇ ಮಾತರಂ’ ಹಾಡುವುದನ್ನು ಪಶ್ಚಿಮ ಬಂಗಾಳ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಕಡ್ಡಾಯಗೊಳಿಸಿದೆ.
ಐಐಎಂಟಿ ವಿಶ್ವವಿದ್ಯಾಲಯದ ಮಹಿಳೆಯರ ಹಾಸ್ಟೆಲ್ನ ಟೆರೇಸ್ ಮೇಲಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ.
ಭೀಕರ ಅಗ್ನಿ ದುರಂತದಲ್ಲಿ ಓರ್ವ ಅಗ್ನಿಶಾಮಕ ಸಿಬ್ಬಂದಿ ಹಾಗೂ ಓರ್ವ ಭದ್ರತಾ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಠಾಣೆ ರೈಲ್ವೆ ನಿಲ್ದಾಣದ ಸಮೀಪವಿರುವ ಗಾಮ್ದೇವಿ ಮಾರುಕಟ್ಟೆ ಬಳಿ ಗುರುವಾರ ಮುಂಜಾನೆ ಸಂಭವಿಸಿದೆ.
ಪತಿಯನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಪತ್ನಿ ಕೊಲೆಗೈದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರ ನಾಗನೂರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.