Showing 20 of 19126 articles • Page 81 of 957
ಉತಾಹ್ನ ಮಕ್ಕಳ ಪುಸ್ತಕ ಲೇಖಕಿ ಕೌರಿ ರಿಚಿನ್ಸ್, ತನ್ನ ಪತಿಗೆ ಫೆಂಟನಿಲ್ ಮಿಶ್ರಿತ ಪಾನೀಯದಿಂದ ವಿಷಪ್ರಾಶನ ಮಾಡಿದ ಆರೋಪ ಹೊತ್ತಿದ್ದಾರೆ. ಅವರ ಮೇಲೆ ಕೊಲೆ ಆರೋಪ ಸಾಬೀತಾಗಿದೆ.
ಧ್ರುವ ಸರ್ಜಾ ನಟನೆಯ ‘KD: The Devil’ ಚಿತ್ರದ “ಸರ್ಸೆ ನಿನ್ನ ಸೆರಗ ಸರ್ಸೆ” ಹಾಡು ಈಗ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ನಿರ್ದೇಶಕ ಪ್ರೇಮ್ ಅವರೇ ಬರೆದಿರುವ ಈ ಹಾಡಿನ ಸಾಹಿತ್ಯ ಅತ್ಯಂತ ಅಶ್ಲೀಲವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.
ರಾಜ್ಯದ 12ಕ್ಕೂ ಹೆಚ್ಚು ಜಿಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಗುಡುಗು, ಸಿಡಿಲು ಹಾಗೂ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ.
ಬುಡುಬುಡುಕೆಯವರು ಮನೆಗೆ ನುಗ್ಗಿ ಚಿನ್ನದ ಸರ ಲಪಟಾಯಿಸಿದ ಪ್ರಕರಣ ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮನೆ ಕೆಲಸ ಮಾಡುವ ಸರಸ್ವತಿ ಎಂಬುವರು ಪ್ರಕರಣ ದಾಖಲಿಸಿದ್ದಾರೆ. 1.44 ಲಕ್ಷ ಮೌಲ್ಯದ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆಂದು ಪ್ರಕರಣ ದಾಖಲಿಸಿದ್ದಾರೆ.
ಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹುಣಸೂರು ತಾಲೂಕು ಮುಳ್ಳೂರು ಗ್ರಾಮ ಪಂಚಾಯ್ತಿ ಪಿಡಿಓ ಮಂಜುಳಾ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ. 25 ಸಾವಿರ ಲಂಚ ಪಡೆದು ಕಚೇರಿಯಲ್ಲೇ ಮಂಜುಳಾ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಅಫ್ಘಾನಿಸ್ತಾನದ ಕಾಬೂಲ್ನ ಆಸ್ಪತ್ರೆಯ ಮೇಲೆ ಪಾಕ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 400 ಜನರು ಮೃತಪಟ್ಟಿದ್ದು, ಸುಮಾರು 250 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ವಕ್ತಾರರು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದ ಮಾನಸ್ ಪಾಟೀಲ್ ಕೇವಲ ಆರು ವರ್ಷ ವಯಸ್ಸಿನಲ್ಲಿ ಪಿರ್ವಾಡಿ ಬೀಚ್ನಿಂದ ಜೆಎನ್ಪಿಟಿ ಬಂದರಿಗೆ ಅರೇಬಿಯನ್ ಸಮುದ್ರದಾದ್ಯಂತ 17 ಕಿ.ಮೀ ದೂರವನ್ನು 4 ಗಂಟೆ 49 ನಿಮಿಷಗಳಲ್ಲಿ ಈಜುವ ಮೂಲಕ ಇತಿಹಾಸ ನಿರ್ಮಿಸಿದರು.
ಭಕ್ತರು ತಮ್ಮ ಭಕ್ತಿಯ ಗಮನಾರ್ಹ ಪ್ರದರ್ಶನವಾಗಿ ತಿರುಪತಿಯಲ್ಲಿ ವೆಂಕಟರಮಣ ದೇವರಿಗೆ 3.86 ಕೋಟಿ ರೂ. ಮೌಲ್ಯದ ಅದ್ಭುತ ಚಿನ್ನದ ಹಾರವನ್ನು ಅರ್ಪಿಸಿದರು, ಇದು ಧಾರ್ಮಿಕ ಗೌರವ ಮತ್ತು ಔದಾರ್ಯದ ಐತಿಹಾಸಿಕ ಕ್ಷಣವಾಗಿದೆ.
ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡುವುದು ಹೊಸದೆನಲ್ಲ. ಆದರೆ ಈ ಬಾರಿ ಅಪರೂಪದಲ್ಲಿ ಅಪರೂಪ ಎಂಬಂತೆ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು ಸಭಾತ್ಯಾಗ ಮಾಡಿದ ಅಚ್ಚರಿಯ ಪ್ರಸಂಗ ನಡೆದಿದೆ.
ಪಶ್ಚಿಮ ಬಂಗಾಳದ ಭದ್ರಕಾಳಿ ಹೈಸ್ಕೂಲ್ನಲ್ಲಿ ಅಡುಗೆ ಅನಿಲದ (LPG) ತೀವ್ರ ಕೊರತೆಯಿಂದಾಗಿ ವಿಚಿತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಯಲ್ಲಿ ಮಧ್ಯಾಹ್ನದ ಪೌಷ್ಟಿಕ ಆಹಾರ ತಯಾರಿಸಲು ಗ್ಯಾಸ್ ಇಲ್ಲದ ಕಾರಣ, ಶಾಲಾ ಆಡಳಿತ ಮಂಡಳಿಯು ಹೊರಗಿನ ಪಾನಿಪುರಿ ಮಾರಾಟಗಾರನ ಮೂಲಕ ವಿದ್ಯಾರ್ಥಿಗಳಿಗೆ ‘ಗೋಲ್ಗಪ್ಪಾ’ (ಪಾನಿಪುರಿ) ವಿತರಿಸಿದೆ.
ಬಿಗ್ ಬಾಸ್ ಕನ್ನಡ 12 ರನ್ನರ್ ಆಗಿ ಹೊರಹೊಮ್ಮಿದ ರಕ್ಷಿತಾ ಶೆಟ್ಟಿ ಅವರು ತಮ್ಮ ಹುಟ್ಟುಹಬ್ಬವನ್ನು ಉಡುಪಿಯ ಸಾಲಿಗ್ರಾಮದಲ್ಲಿರುವ ಹೊಸಬದುಕು ಆಶ್ರಮದಲ್ಲಿ ಆಚರಿಸಿ ಗಮನ ಸೆಳೆದರು. ಆಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿದ ಅವರು ನಿವಾಸಿಗಳಿಗೆ ಊಟದ ವ್ಯವಸ್ಥೆ ಮಾಡಿದ್ದು, ಅವರೊಂದಿಗೆ ಸಮಯ ಕಳೆಯುವ ಮೂಲಕ ಸಂತೋಷ ಹಂಚಿಕೊಂಡರು.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ನಡುವೆ, ದೇಶದ ಅಡುಗೆ ಅನಿಲ (LPG) ಅಗತ್ಯಗಳನ್ನು ಪೂರೈಸುವ ಪ್ರಮುಖ ಸರಕು ಹಡಗು ‘ಶಿವಾಲಿಕ್’ ಅಂತಿಮವಾಗಿ ಭಾರತದ ಗಡಿಯನ್ನು ಸುರಕ್ಷಿತವಾಗಿ ಪ್ರವೇಶಿಸಿದೆ.
ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಗೆ ನೀಡಲಾಗಿದೆ.
ನ್ಯೂಯಾರ್ಕ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಐರ್ಲೆಂಡ್ನಲ್ಲಿ ತುರ್ತು ಲ್ಯಾಂಡ್ ಆಗಿದೆ.
ಈ ವರ್ಷ ಬೆಂಗಳೂರಿನಲ್ಲಿ ನೇರಳಾತೀತ (UV) ಸೂಚ್ಯಂಕವು 13 ರ ತೀವ್ರ ಮಟ್ಟವನ್ನು ತಲುಪಿದ್ದು, ನಗರದ ವೈದ್ಯರು ನಿವಾಸಿಗಳು ದೀರ್ಘಕಾಲದವರೆಗೆ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳದಂತೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ತೀವ್ರವಾದ UV ವಿಕಿರಣವು ತಕ್ಷಣದ ಮತ್ತು ದೀರ್ಘಕಾಲೀನ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ಎಚ್ಚರಿಸಿದ್ದಾರೆ.
ಕೆ.ಆರ್ ನಗರ ತಾಲ್ಲೂಕು ಆಡಳಿತದ ವಿರುದ್ಧ ರೈತರು ಕೆ.ಆರ್ ನಗರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟಿಸಿದರು.
ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗಿಯ ಕಚೇರಿ ಮೈಸೂರು ಇದರ ಸಹಯೋಗದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳವನ್ನು ಮಾ. 17ರಂದು ನಗರದ ಅಮೃತ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ ಯೋಜಿಸಲಾಗಿದೆ ಎಂದು ಮಾಜಿ ಶಾಸಕ ಹಾಗೂ ಗೌರವಾಧ್ಯಕ್ಷ ಕೆ. ರಘುಪತಿ ಭಟ್ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ 66 ಎಲ್ಪಿಜಿ ಟ್ಯಾಂಕರ್ ಪಲ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿದಿದೆ.
“ಸಮಾಧಾನ ಮಹೋತ್ಸವ” ನಡೆಸಲು ಅವಕಾಶ ನೀಡಿದರೆ ತೀವ್ರ ಹೋರಾಟನ ನಡೆಸಲಾಗುತ್ತದೆ ಎಂದು ಹಿಂದೂ ಜಾಗರಣ ವೇದಿಕೆ ಎಚ್ಚರಿಕೆಯನ್ನು ನೀಡಿದೆ.
ಇಸ್ರೇಲ್ ಇರಾನ್ ಯುದ್ಧದಿಂದಾಗಿ ಮಂಗಳೂರು ಮತ್ತು ಗಲ್ಫ್ ಬಹುತೇಕ ರಾಷ್ಟ್ರ ಗಳೊಂದಿಗೆ ವಿಮಾನ ಸಂಚಾರ ರದ್ದುಗೊಂಡಿದ್ದರೂ ಮಂಗಳೂರು ಮತ್ತು ಮಸ್ಕತ್ ನಡುವಿನ ವಿಮಾನ ಯಾನ ಮುಂದುವರಿದಿದೆ.