Showing 20 of 19126 articles • Page 90 of 957
ಕಾಪು ಕ್ಷೇತ್ರದ 80 ಬಡಗಬೆಟ್ಟು ಗ್ರಾಮದಲ್ಲಿ ಇತ್ತೀಚೆಗೆ ಉಡುಪಿ ಕಂಬಳದ ಶಂಕುಸ್ಥಾಪನೆ ನಡೆದಿತ್ತು. ಅದೇ ದಿನ ಜಿಲ್ಲಾಡಳಿತ ಆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿತ್ತು.ಇದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಕಾಪು ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ನಡುವೆ ತೀವ್ರ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗುತ್ತದೆ.
ಇತ್ತೀಚಿನ ದಿನಗಳಲ್ಲಿ ಪತ್ರಕರ್ತ ಎಂಬ ಲೇಬಲ್ ಇಟ್ಟುಕೊಂಡು ಕೆಲವರು ಬ್ಲಾಕ್ಮೇಲ್ ದಂಧೆ ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕಾರ್ಯವನ್ನು ನಾವು ಮಾಡಬೇಕು. ಇಲ್ಲದಿದ್ದರೆ ಪತ್ರಕರ್ತರಿಗೆ ಈ ಸಮಾಜದಲ್ಲಿ ಗೌರವ ಸಿಗಲು ಸಾಧ್ಯವಿಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ.
ಅಂತರಾಷ್ಟ್ರೀಯ ಮಹಿಳಾ ದಿನ ಪ್ರಯುಕ್ತ ಏರ್ಪಡಿಸಿದ ಸೀರೆ ಓಟದಲ್ಲಿ ಸಾಮಾಜಿಕ ಕಟ್ಟಳೆಗಳನ್ನೂ ಮೀರಿ ಮಹಿಳೆಯರು ಓಡಿದರು. ಖಾಸಗಿ ಸಂಸ್ಥೆಯೊಂದು ಆಯೋಜಿಸಿದ್ದ ಸೀರೆ ಓಟದಲ್ಲಿ ಸುಮಾರು 5000 ಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ರು ಸ್ಫರ್ಧೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು.
ಕೋವಿಯಿಂದ ಗುಂಡು ಸಿಡಿದು ಯುವಕನೋರ್ವ ಮೃತಪಟ್ಟ ಘಟನೆ ಸೋಮವಾರಪೇಟೆ ಸಮೀಪದ ದೊಡ್ಡ ಕೊಡ್ಲಿ ಗ್ರಾಮದಲ್ಲಿ ನಡೆದಿದ್ದು ಹಲವು ಸಂಶಯ ಮೂಡಿದೆ.
ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳ ರಾಜಕೀಯ ವಲಯದಲ್ಲಿ ಇಂದು ಗಮನ ಸೆಳೆಯುವ ಬೆಳವಣಿಗೆಯೊಂದು ನಡೆದಿದೆ. ಕೆಲವು ಕಾಲ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದ ಜನತಾದಳ ಪಕ್ಷದ ಹಳೆಯ ಮುಖಂಡರು ಇದೀಗ ಮತ್ತೆ ರಾಜಕೀಯ ರಂಗ ಪ್ರವೇಶಿಸಿದ್ದು, ಜಿಲ್ಲೆಯ ರಾಜಕೀಯ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವ ಲಕ್ಷಣಗಳು ಕಾಣಿಸುತ್ತಿವೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಕಂಬಳವು ಜಾತ್ಯಾತೀತ ಹಾಗೂ ಧರ್ಮಾತೀತವಾಗಿ ಎಲ್ಲರೂ ಭಾಗವಹಿಸುವ ಜನಪ್ರಿಯ ಕ್ರೀಡೆಯಾಗಿದೆ. ಈ ಸಂಪ್ರದಾಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಂಬಳಕ್ಕೆ ಪ್ರೋತ್ಸಾಹ, ಬೆಂಬಲದ ಜೊತೆಗೆ ಹಣಕಾಸಿನ ನೆರವನ್ನೂ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಎಲ್ಪಿಜಿ ದರ ಏರಿಕೆಯಾಗಿದ್ದು, ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಇತ್ತೀಚೆಗೆ ಪ್ರೇಕ್ಷಕರು ಥಿಯೇಟರ್ಗೆ ಹೋಗಿ ಸಿನಿಮಾ ನೋಡುವುದು ಹೆಚ್ಚಾಗುತ್ತಿದೆ. ಟಿಕೆಟ್ಗೆ ಹಣ ನೀಡುವುದು ಮಾತ್ರವಲ್ಲದೆ, ಮಲ್ಟಿಫ್ಲೆಕ್ಸ್ನಲ್ಲಿ ಪಾರ್ಕಿಂಗ್, ಪಾಪ್ಕಾರ್ನ್ಗೂ ಭಾರೀ ಹಣವನ್ನು ನೀಡಬೇಕಾಗುತ್ತದೆ. ಆದರೆ ಈ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇನ್ಮುಂದೆ ಥಿಯೇಟರ್ ಆವರಣದಲ್ಲಿ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕ ನೀಡಬೇಕಿಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ.
ರಾಷ್ಟ್ರ ರಾಜಧಾನಿ ದೆಹಲಿಯ ಉತ್ತಮ್ ನಗರದ ಜೆಜೆ ಕಾಲೋನಿಯಲ್ಲಿ ಹೋಳಿ ಬಲೂನ್ ನೀರು ಮಹಿಳೆಯೊಬ್ಬರ ಮೇಲೆ ಬಿದ್ದಿದ್ದರಿಂದ ಸಂಘರ್ಷ ಉಂಟಾಗಿದ್ದು, ಘಟನೆಯಲ್ಲಿ ತರುಣ್ (26) ಎಂಬ ಯುವಕ ಹತ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮತ್ತೊಬ್ಬ ಅಪ್ರಾಪ್ತನನ್ನು ವಶಕ್ಕೆ ಪಡೆಯಲಾಗಿದೆ.
ನಗರದ ನಿಷೇಧಿತ, ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮಾಡುತ್ತಿದ್ದವರ ವಿರುದ್ಧ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ನಿನ್ನೆ (ಮಾ.6) ಸಂಜೆಯಿಂದ ತಡರಾತ್ರಿವರೆಗೆ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ 295 ಮಂದಿಗೆ ದಂಡ ವಿಧಿಸಲಾಗಿದೆ.
ನಾಳೆ ನಡೆಯಲಿರುವ ಟಿ20 ವಿಶ್ವಕಪ್ ಫಿನಾಲೆ ಪಂದ್ಯದ ಹಿನ್ನೆಲೆ ನವದೆಹಲಿಯಿಂದ ಅಹಮದಾಬಾದ್ಗೆ ವಿಶೇಷ ರೈಲು ಸಂಚರಿಸಲಿದೆ.
ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲದೂ ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಯ ಎಲ್ಲಾ ಯೋಜನೆಗೆ ಅನುದಾನ ನೀಡಿದ್ದು ಯುವನಿಧಿಗೆ ಮಾತ್ರ ಒಂದು ಪೈಸೆಯು ನೀಡಿಲ್ಲ.
ಧರ್ಮಸ್ಥಳ ಶ್ರೀ ರಾಮ ಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್: ಮಾ.17ಕ್ಕೆ ಉಡುಪಿಯಲ್ಲಿ “ಅಪ್ರೆಂಟಿಶಿಪ್ ಮೇಳ, ಉದ್ಯೋಗ ಮೇಳ”
ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ಸಮಸ್ಯೆಯಿಂದಾಗಿ ಲಕ್ನೋಗೆ ವಾಪಸ್ ಆಗಿ, ತುರ್ತು ಲ್ಯಾಂಡಿಂಗ್ ಆಗಿದೆ.
ಕೊಟ್ಟಾರ ಚೌಕಿ ಬಳಿ ರಸ್ತೆ ಬದಿಯಲ್ಲಿ ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದ ಆರೋಪದಡಿ ಕೊಡಿಯಾಲಬೈಲು ನಿವಾಸಿ ರೋಶನ್ ಎಂಬಾತನನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಕ್ರಮ ಬಾಂಗ್ಲಾವಲಸಿಗರು ಹಾಗೂ ವೀಸಾ ಅವಧಿ ಮುಕ್ತಾಯಗೊಂಡವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ನಗರ ಪೊಲೀಸರು, ಮಾ.6ರಂದು 124 ಮಂದಿ ಅಕ್ರಮ ಬಾಂಗ್ಲಾವಲಸಿಗರನ್ನು ಬಂಧಿಸಿದ್ದಾರೆ.
ಉತ್ತರ ಕೋಲ್ಕತ್ತಾದ ಪೈಕ್ಪಾರಾದ ಪಾಳುಬಿದ್ದ ಕ್ಲಬ್ನ ಬೀಗ ಹಾಕಿದ ಕೋಣೆಯೊಳಗೆ ಕಚ್ಚಾ ಬಾಂಬ್ಗಳು ಶನಿವಾರ ಮುಂಜಾನೆ ಸ್ಫೋಟಗೊಂಡ ನಂತರ ಭೀತಿ ಆವರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮುಂಜಾನೆ ಇರಾನ್ ರಾಜಧಾನಿಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ನಂತರ ಇದೀಗ ಟೆಹ್ರಾನ್ನ ಮೆಹ್ರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ದೊಡ್ಡ ಸ್ಫೋಟಗಳು ಮತ್ತು ಬೆಂಕಿ ಕಾಣಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಟೊಮೆಟೊ ಬೆಲೆ ತೀವ್ರವಾಗಿ ಕುಸಿದಿದ್ದು, ಪಟ್ಟ ಶ್ರಮಕ್ಕೆ ಸೂಕ್ತ ಬೆಲೆ ಸಿಗದೆ ರೈತರು ಕಂಗಾಲಾಗಿದ್ದಾರೆ.