Showing 20 of 38 posts • Page 1 of 2
ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಐದಾರು ಮಂದಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
9ನೇ ತರಗತಿ ವಿದ್ಯಾರ್ಥಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಇತರ ವಿದ್ಯಾರ್ಥಿಗಳು ಮತ್ತು ವಾರ್ಡನ್ ಮೇಲೆ ರಾಡ್ನಿಂದ ಹಲ್ಲೆ ನಡೆಸಿರುವ ಘಟನೆ ಬಳ್ಳಾರಿಯ ಗುರುಕುಲ ವಸತಿ ಶಾಲೆಯಲ್ಲಿ ನಡೆದಿದೆ. ಭೀಕರ ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೇರಳದಿಂದ ಹಂಪಿಗೆ ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ಘಟನೆ ನಡೆದಿದೆ.
ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಒಡೆತನದ ‘ಜಿ ಸ್ಕ್ವೇರ್’ ಬಡಾವಣೆಯ ಮಾಡೆಲ್ ಹೌಸ್ ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರೂ ಸೇರಿದಂತೆ ಒಟ್ಟು 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ ರಾತ್ರಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ಬಳ್ಳಾರಿ ನಗರದ ಹವಂಬಾವಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಬೈಕ್ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬಳ್ಳಾರಿ ಹೊರವಲಯದ ಬೆಳಗಲ್ ರಸ್ತೆಯ ಕಾಲುವೆ ಸಮೀಪ ನಡೆದಿದೆ.
ನಿಲ್ಲಿಸಿದ್ದ ಗೂಡ್ಸ್ ಲಾರಿಯೊಂದು ಬೆಂಕಿಗಾಹುತಿಯಾಗಿ ಅದರಲ್ಲಿದ್ದ 40 ಬೈಕ್ ಗಳು ಬೆಂಕಿಗಾಹುತಿಯಾದ ಘಟನೆ ಬಳ್ಳಾರಿ ನಗರದಲ್ಲಿ ಸಂಭವಿಸಿದೆ.
ಜಿಲ್ಲೆಯ ಸಿರಗುಪ್ಪ ತಾಲೂಕಿನ ದೊಡ್ಡ ರಾಜ್ ಕ್ಯಾಂಪ್ನಲ್ಲಿ ಕೌಟುಂಬಿಕ ಕಲಹದ ಹಿನ್ನಲೆ ಪತಿ, ಪತ್ನಿ ಇಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕನ್ನಡ ರಾಜ್ಯೋತ್ಸವದ ಸಂಭ್ರಮದ ಭಾಗವಾಗಿ, ಜಿಲ್ಲೆಯಲ್ಲಿ ಇರುವ ಎಲ್ಲಾ ಶಾಶ್ವತ, ಅರೆ-ಶಾಶ್ವತ ಹಾಗೂ ತಾತ್ಕಾಲಿಕ ಚಿತ್ರಮಂದಿರಗಳು ಸೇರಿದಂತೆ ವಿಡಿಯೋ ಚಿತ್ರಮಂದಿರ
ನೂರಾರು ಕಾರುಗಳನ್ನು ಬಾಡಿಗೆ ಪಡೆದು ಸಿನಿಮೀಯ ರೀತಿಯಲ್ಲಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಂಚಿನ ಕಾರ್ಯಾಚರಣೆ ನಡೆಸಿದ ಬಳ್ಳಾರಿ ಪೊಲೀಸರು ಬರೋಬ್ಬರಿ 46 ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.
ರಸ್ತೆ ಬದಿ ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ನಡೆದಿದೆ.
ಮನೆಯೊಂದರಲ್ಲಿದ್ದ ಫ್ರಿಡ್ಜ್ ಸ್ಫೋಟಗೊಂಡ ಘಟನೆ ಕಂಪ್ಲಿ ಪಟ್ಟಣದ ವಾರ್ಡ್ ನಂ 13 ರಲ್ಲಿ ನಡೆದಿದೆ. ಶರೀಫ್ ಸಾಬ್ ಅವರ ಮನೆಯಲ್ಲಿದ್ದ ಫ್ರಿಡ್ಜ್ ಸ್ಫೋಟಗೊಂಡಿದೆ.
ಕಳೆದ ವಾರ ಮಾಧ್ಯಮಗಳ ಮುಂದೆ ಡಿಕೆ ಶಿವಕುಮಾರ್ ಕೈ ಎತ್ತುವ ಮೂಲಕ ಸಿಎಂ ಸಿದ್ದರಾಮಯ್ಯ ದೊಡ್ಡ ಸಂದೇಶ ರವಾನಿಸಿದ್ದರು. ವಿಪಕ್ಷಗಳಿಗೆ ಮುಟ್ಟಿನೋಡಿಕೊಳ್ಳುವಂತೆ ತಿರುಗೇಟು ಕೊಟ್ಟಿದ್ದಾರೆ. ಕಾಂಗ್ರೆಸ್ನಲ್ಲಿ ಕುರ್ಚಿ ಕಾಳಗ ನಡೀತಿದೆ,
ಕುರಿ ಶೆಡ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ 40ಕ್ಕೂ ಹೆಚ್ಚು ಕುರಿಗಳು ಬೆಂಕಿಗೆ ಆಹುತಿಯಾದ ಘಟನೆ ವಿಜಯನಗರದ ಅಮಲಾಪುರ ಗ್ರಾಮದಲ್ಲಿ ನಡೆದಿದೆ.
ವಡ್ಡು ಗ್ರಾಮದ ಬಾಲಕಿ ರೂಪ ಮೇಲೆ ಅತ್ಯಾಚಾರ ಘಟನೆ ಜನ ಮಾನಸದಿಂದ ಮಾಸುವ ಮುಂಚೆಯೇ ತೋರಣಗಲ್ಲು ಗ್ರಾಮದಲ್ಲಿ ಜನರು ಬೆಚ್ಚಿ ಬೀಳಿಸುವಂತ ಪೈಶಾಚಿಕ ಕೃತ್ಯ
ಐವರು ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಮಕ್ಕಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಕುಮತಿ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಭರ್ಜರಿ ಮಳೆಯಾಗಿದ್ದು, ಮಳೆ ಆರ್ಭಟಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ.
ಹದಿಮೂರು ವರ್ಷದ ಬಳಿಕ ಜನಾರ್ದನ ರೆಡ್ಡಿ ಅವರು ಗುರುವಾರ(ಅ3 )ತವರು ಬಳ್ಳಾರಿಗೆ ಅದ್ದೂರಿ ಪ್ರವೇಶ ಮಾಡಿ ಗಮನಸೆಳೆದಿದ್ದಾರೆ. ಸಂಡೂರು ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದ್ದು,
ಪೊಲೀಸ್ ಹೆಡ್ಕಾನ್ಸ್ಟೇಬಲ್ ಕಳ್ಳರ ಜೊತೆ ಕೈಜೋಡಿಸಿ, ಕದ್ದ ಮಾಲನ್ನೇ ತನ್ನ ಮನೆಗೆ ಸಾಗಿಸಿ ಲಕ್ಷ ಲಕ್ಷ ಲೂಟಿ ಮಾಡಿರುವ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ.