ಬೆಳಗಾವಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ಏರಿಕೆ ಕಾಣುತ್ತಿದೆ. ಇದುವರೆಗೂ ಒಟ್ಟು 7 ಮಂದಿಯನ್ನು ಬಲಿ ಪಡೆದಿತ್ತು ಇದೀಗ ಮತ್ತೋತರ್ವ ಬಾಲಕಿ ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ.ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೇಯಾ ಕೃಷ್ಣಾ ದೇವದಾತೆ (11) ಎಂಬಾಕೆ ಮೃತಪಟ್ಟಿದ್ದಾಳೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದ ನಿವಾಸಿ ಥೈಪಾಡ್ನಿಂದ ಬಳಲುತ್ತಿದ್ದ ಶ್ರೇಯಾಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರ ಅನಾರೋಗ್ಯದಿಂದ ಶ್ರೇಯಾ ಅಸುನೀಗಿದ್ದಾಳೆ. ಬಾಲಕಿ ಸಾವಿನ ಬಗ್ಗೆ ಡಿಹೆಚ್ಒ ಮಹೇಶ ಕೋಣಿ ಮಾಹಿತಿ ನೀಡಿದ್ದಾರೆ.

