Showing 20 of 1841 posts • Page 1 of 93
ನಗರದ ಕುರುಬರಹಳ್ಳಿ ವೃತ್ತದ ಬಳಿ ಎಟಿಎಂ ಗ್ರಾಹಕರನ್ನು ಗುರಿಯಾಗಿಸಿಕೊಂಡು ವಂಚನೆಗೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಐವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿದ್ದ ಕಾರಿನ ಚಕ್ರ ತಾಲ್ಲೂಕಿನ ಮುದುಗೆರೆ ಸಮೀಪ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಫೋಟಗೊಂಡು ಪಲ್ಟಿಯಾಗಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕಾರು ಚಾಲಕ ಆನಂದ ಎಂಬುವರು ಮೃತಪಟ್ಟಿದ್ದಾರೆ.
ವಾಹನಕ್ಕೆ ಅಡ್ಡಲಾಗಿ ಬಂದ ನಾಯಿಯನ್ನು ತಪ್ಪಿಸಲು ಯತ್ನಿಸಿದ ಸರಕು ಸಾಗಣೆ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟಿರುವ ಘಟನೆ ನಗರದ ಸಂಗಮ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಕಾಂಗ್ರೆಸ್ ಸಮಾವೇಶದಿಂದ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ನಿಮಿಷ ತಡವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದ ನಾಲ್ವರು ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
: ‘ಸಂಕಲ್ಪ ಸಮಾವೇಶ’ದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಪರ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರ ವರ್ತನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕೇರಳದ ಕಣ್ಣೂರು ಕಡಲಲ್ಲಿ ನೆಲಮಂಗಲದ ಯುವಕ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮಾದಾವರ – ರೇಷ್ಮೆ ಸಂಸ್ಥೆ ಮಾರ್ಗದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಹಾಡಹಗಲೇ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ವೇಳೆ ಅಲ್ಲೇ ಇದ್ದ ಕಾರ್ಮಿಕನ್ನೊಬ್ಬ ಸಮಯಪ್ರಜ್ಞೆಯಿಂದ ತನ್ನ ಗಾಡಿಯ ಮೇಲಿದ್ದ ಮೂಟೆಯನ್ನು ಕಳ್ಳರ ಮೇಲೆ ಎಸೆದು ಕಳ್ಳರನ್ನು ಹೊಡೆದೋಡಿಸಿದ್ದಾನೆ. ಆದರೆ, ಆತಂಕಗೊಂಡು ಓಡುವ ವೇಳೆ ಕಳ್ಳ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಕಬ್ಬಿಣದ ಸೇತುವೆಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ, ಕೊಳ್ಳೇಗಾಲ ನ್ಯಾಯಾಲಯದ ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಕೊಳ್ಳೇಗಾಲ ನಗರದ ಮುಡಿಗುಂಡ ಬಳಿ ಜೂ.18ರ ಗುರುವಾರ ತಡರಾತ್ರಿ ಸಂಭವಿಸಿದೆ.
ಸಿಎಂ ಡಿ.ಕೆ ಶಿವಕುಮಾರ್ ಅವರು ಪತ್ನಿ ಉಷಾ ಅವರ ಜೊತೆ ತಿರುಪತಿ ತಿರುಮಲ ದೇವಸ್ಥಾನಕ್ಕೆ ತೆರಳಿದ್ದಾರೆ.
ಆಟವಾಡುತ್ತಿದ್ದ ಮಗು ಮೊದಲನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರಿನ ವಿವಿಧೆಡೆ ಬಾಡಿಗೆ ಮನೆ ಹಾಗೂ ಸ್ಪಾಗಳನ್ನು ಕೇಂದ್ರವಾಗಿಸಿಕೊಂಡು ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಹೋಬಳಿಯ ಚಿಕ್ಕಹರಳಗೆರೆ ಮುಖ್ಯ ರಸ್ತೆಯಲ್ಲಿ ಬುಧವಾರ ಶಾಲಾ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಚಿಕ್ಕಹರಳಗೆರೆ ಗ್ರಾಮದ ಕಾಮಾಕ್ಷಮ್ಮ (49) ಮೃತಪಟ್ಟಿದ್ದು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಲಿವ್-ಇನ್ ರಿಲೇಶನ್ಶಿಪ್ ನಲ್ಲಿದ್ದ ಪ್ರೇಯಸಿಯನ್ನು ಕತ್ತು ಹಿಸುಕಿ ಹತ್ಯೆಗೈದ ಪ್ರಕರಣದಡಿ ಆರೋಪಿಯನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಾಡಿಗೆ ಮನೆಯಲ್ಲಿ ಅನುಷಾ ಎಂಬ 20 ವರ್ಷದ ಮಹಿಳೆಯನ್ನು ಆಕೆಯ ಲಿವ್-ಇನ್ ಪಾರ್ಟ್ನರ್ ಶರತ್ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ.
ಕಳೆದ ಡಿಸೆಂಬರ್ 2025 ರಲ್ಲಿ ರೊನಾಲ್ಡ್ ಕೊಲಾಸೊ ನೇತೃತ್ವದಲ್ಲಿ 30 ದೇಶಗಳ 43 ಅನಿವಾಸಿ ಸಂಘಟನೆಗಳ ಪ್ರತಿನಿಧಿಗಳ ನಿಯೋಗ ಸಿಎಂ, ಡಿಸಿಎಂ ಭೇಟಿ ನೀಡಿ ಇಟ್ಟ ಬೇಡಿಕೆಗೆಯನ್ನು ಈಡೇರಿಸಿ, ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ಘೋಷಣೆ ಮಾಡಿದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ವಿಶ್ವದಾದ್ಯಂತದ ಅರವತ್ತಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಒಕ್ಕೊರಲಿನಿಂದ ಅಭಿನಂದಿಸಿವೆ.
ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತುಕತೆ ನಡೆಸಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬ್ಯಾಂಕ್ನ ಸಹೋದ್ಯೋಗಿ ಗೆಳತಿಯರಿಬ್ಬರು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶದ ಖಾಸಗಿ ಸ್ವೀಟ್ಸ್ ಅಂಗಡಿ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.