Showing 20 of 1864 posts • Page 1 of 94
: ರಾಜ್ಯದ ಬಹುತೇಕ ಪಂಚಾಯತ್ಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೊಡ್ಡಬಳ್ಳಾಪುರ ತಾಲೂಕಿನ ಮಲ್ಲಹಳ್ಳಿ ಬಳಿ ಗುರುವಾರ ಬೆಳ್ಳಂಬೆಳಗ್ಗೆ ಘೋರ ಅಗ್ನಿ ದುರಂತವೊಂದು ಸಂಭವಿಸಿದೆ.
ಅಂಬುಲೆನ್ಸ್ಗೆ ದಾರಿ ಬಿಡದೆ ವೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.
ನಕಲಿ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಅಂತರ್ಜಿಲ್ಲಾ ಖೋಟಾ ನೋಟು ದಂಧೆಯ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಫೋಟೋ ತೆಗೆಯಲು ಹೋಗಿ ಜಲದಿಗ್ಬಂಧನಕ್ಕೆ ಸಿಲುಕಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಸಿಬ್ಬಂದಿ ರೋಮಾಂಚನಕಾರಿಯಾಗಿ ರಕ್ಷಿಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ಪ್ರಸಿದ್ಧ ಮಲ್ಲಳ್ಳಿ ಜಲಪಾತದಲ್ಲಿ ನಡೆದಿದೆ.
ಬೆಂಗಳೂರು: ರೈಲ್ವೆಯ ಉದ್ಯೋಗ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದೆ. 2022ರಲ್ಲಿ ನಡೆದಿದ್ದ ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಯ ಸಾಮಾನ್ಯ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜುಲೈ 3 ರಂದು ಈ ಬಂಧನ ನಡೆದಿದ್ದು, ಸಿಬಿಐ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಬಂಧಿತರಿಬ್ಬರೂ ಈ ಇಡೀ ಹಗರಣದ ಪ್ರಮುಖ ಸೂತ್ರಧಾರಿಗಳು ಎಂದು ಸಿಬಿಐ ತಿಳಿಸಿದೆ. ಪರೀಕ್ಷೆ ನಡೆಯುವುದಕ್ಕಿಂತ ಮುಂಚಿತವಾಗಿಯೇ […]
ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದ ಐವರನ್ನು ತಲಘಟ್ಟಪುರ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ನಗರದ ವಿವಿಧ ರಸ್ತೆಗಳಲ್ಲಿ ರಾತ್ರಿ ವೇಳೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಆತನ ಮನೆಯನ್ನು ಪರಿಶೀಲಿಸಿದಾಗ ಆಯುಧ ಹಾಗೂ ಮೊಬೈಲ್ ಕಳ್ಳತನದ ಜಾಲವೂ ಪತ್ತೆಯಾಗಿದೆ.
ಕೆಆರ್ ಸರ್ಕಲ್ ಬಳಿ ಸಿಗ್ನಲ್ನಲ್ಲಿ ನಿಂತಿದ್ದ ಬಸ್ಗೆ ಮತ್ತೊಂದು ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬಸ್ನಲ್ಲಿದ್ದ ಪ್ರಯಾಣಿಕರು, ಡ್ರೈವರ್ಗೆ ಗಾಯಗಳಾದ ಪ್ರಕರಣ ಸಂಬಂಧ ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪಘಾತ ಮಾಡಿದ ಚಾಲಕ ಅಭಿಷೇಕ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೇಬಿ ಕೇರ್ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್ಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮೂವರು ಆರೋಪಿಗಳನ್ನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಐದು ಮಹಿಳೆಯರ ಮೇಲೆ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದ್ದು, ಕ್ಯಾಪ್ಜೆಮಿನಿ ತನ್ನ ಡೇಕೇರ್ ಸೌಲಭ್ಯವನ್ನು ತಾತ್ಕಾಲಿಕವಾಗಿ ಮುಚ್ಚಿದೆ.
ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಏಳು ಮಂದಿ ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದಲ್ಲಿ ಕಾವೇರಿ ಜಲ್ಲಿ ಕ್ರಷರ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಅಂತರರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ, ಪ್ರಗತಿಪರ ಚಿಂತಕ ಕೆ.ಟಿ.ಶಿವಪ್ರಸಾದ್ (79) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಚಿನ್ನದ ಜೊತೆಗೆ ಬೆಳ್ಳಿ ದರದಲ್ಲೂ ಭಾರಿ ಇಳಿಕೆಯಾಗಿದ್ದು, ದೇಶದಲ್ಲಿ ಇಂದು 100 ಗ್ರಾಂ 24 ಕ್ಯಾರಟ್ ಚಿನ್ನದ ದರದಲ್ಲಿ ಬರೋಬ್ಬರಿ 18,000 ರೂಪಾಯಿಗಳಷ್ಟು ದರ ಇಳಿಕೆಯಾಗಿದೆ.
ರಾಜ್ಯಾದ್ಯಂತ ಎಸ್ಐಆರ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾರೊಬ್ಬರೂ ಮತದಾನದ ಹಕ್ಕು ಕಳೆದುಕೊಳ್ಳಬೇಡಿ. ಮತದ ಹಕ್ಕು ಕಳೆದುಕೊಂಡರೆ ಸರ್ಕಾರದ ಸವಲತ್ತುಗಳನ್ನೂ ಕಳೆದುಕೊಳ್ಳುತ್ತೀರಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.
ಪತಿಗಿಂತ ಹೆಚ್ಚು ದುಡಿಯುವ ಪತ್ನಿಗೆ ಜೀವನಾಂಶ ನೀಡಬೇಕಿಲ್ಲ ಎಂದು ನ್ಯಾ. ಡಾ. ಚಿಲ್ಲಕೂರ್ ಸುಮಲತಾ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.
ನಮ್ಮ ಮೆಟ್ರೋ ಪಿಲ್ಲರ್ಗಳಿಗೆ ಬೆಳಕಿನ ವ್ಯವಸ್ಥೆಗಾಗಿ ನಡೆಯುತ್ತಿದ್ದ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಟ್ರಿನಿಟಿ ಮೆಟ್ರೋ ನಿಲ್ದಾಣದ ಸಮೀಪ ಶುಕ್ರವಾರ ನಡೆದಿದೆ.
ರಾಜಾಜಿನಗರದಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಒಣಗಿದ ಮರದ ಕೊಂಬೆಯೊಂದು ಮೋಟಾರ್ ಸೈಕಲ್ ಸವಾರನ ತಲೆಯ ಮೇಲೆ ಬಿದ್ದ ಪರಿಣಾಮ, 52 ವರ್ಷದ ವ್ಯಕ್ತಿಯೊಬ್ಬರು ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ.