Showing 20 of 1943 posts • Page 1 of 98
ಜಿಬಿಎ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 14ರಂದು ಮಾಂಸ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಕಕ್ಷಿದಾರರ ಹಿತರಕ್ಷಣೆಯೂ ಕೋರ್ಟಿನ ಹೊಣೆ’ ಎಂಬ ಕಾಳಜಿ ವ್ಯಕ್ತಪಡಿಸಿರುವ ಹೈಕೋರ್ಟ್, ‘ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಯಾವುದೇ ಕಿರುಕುಳ ಇಲ್ಲದೆ ಸೌಹಾರ್ದಯುತವಾಗಿ ಮತ್ತು ವಿಳಂಬಗೊಳ್ಳದೆ ಮುಗಿಯಬೇಕು. ತಾಂತ್ರಿಕ ಕಾರಣಗಳಿಂದ ಸಾಕ್ಷಿಗಳ ವಿಚಾರಣೆ ತಡವಾಗಬಾರದು’ ಎಂದರು.
ಬೆಂಗಳೂರಿನ ಗಾಂಧಿನಗರದಲ್ಲಿ ಡಿಆರ್ಐ (DRI) ಅಧಿಕಾರಿಗಳು ವ್ಯಕ್ತಿಯೊಬ್ಬರನ್ನು ತಡೆದು, ‘ಆಪರೇಷನ್ ಕೂರ್ಮ’ದ ಭಾಗವಾಗಿ 180 ಜೀವಂತ ಭಾರತೀಯ ಸ್ಟಾರ್ ಆಮೆಗಳನ್ನು ವಶಪಡಿಸಿಕೊಂಡರು.
ಹೊಸ ವ್ಯವಸ್ಥೆಯು ಆಂಬ್ಯುಲೆನ್ಸ್ ಚಾಲಕರ ಮೇಲೆ ಕಟ್ಟುನಿಟ್ಟಿನ ಕ್ರಮ ಹಾಗೂ ಸಮಯದ ಗುರಿಗಳನ್ನು ಸಹ ವಿಧಿಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ 10 ನಿಮಿಷಗಳಲ್ಲಿ ಮತ್ತು ನಗರ ಪ್ರದೇಶಗಳಲ್ಲಿ 15 ರಿಂದ 20 ನಿಮಿಷಗಳಲ್ಲಿ ಆಂಬ್ಯುಲೆನ್ಸ್ಗಳು ಆಸ್ಪತ್ರೆಗಳನ್ನು ತಲುಪಬೇಕು
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಏರುಪೇರುಂಟಾಗಿರುವ ಆತಂಕಕಾರಿ ಘಟನೆ ನಡೆದಿದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಮುಂದುವರಿದಿದೆ.
ಈ ಹಿಂದಿನ ವ್ಯವಸ್ಥೆಯಡಿ ಪಿಂಚಣಿ ಪ್ರಯೋಜನಗಳನ್ನು ನೀಡುವ ಒಪಿಎಸ್ ಪುನಃಸ್ಥಾಪನೆಗೆ ಒತ್ತಾಯಿಸುತ್ತಿರುವ ಸರ್ಕಾರಿ ನೌಕರರಿಗೆ ಈ ಘೋಷಣೆಯು ಸಂತಸ ತಂದಿದ್ದು, ಅಧಿಕೃತ ಆದೇಶ ಇನ್ನಷ್ಟೇ ಹೊರಬರಬೇಕಿದೆ.
ಗ್ಯಾಸ್ ಸಂಪರ್ಕದ ಇ-ಕೆವೈಸಿ ಪೂರ್ಣಗೊಳಿಸಲು ಸೆಪ್ಟೆಂಬರ್ 7, ಸೋಮವಾರ ಕೊನೆಯ ದಿನವಾಗಿದೆ.
ಪಿಒಪಿ ಗಣೇಶ ಮೂರ್ತಿಗಳ ವಿರುದ್ಧ ಕ್ರಮ ಕೈಗೊಂಡ ಬೆನ್ನಲ್ಲೇ ಇದೀಗ ಪಟಾಕಿ ಬಳಕೆ ಹಾಗೂ ಮಾರಾಟಕ್ಕೂ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿಗೆ ಮುಂದಾಗಿದೆ.
ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಬೇಸಿಗೆಯಂತಹ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಸಂಚರಿಸುವ ಎಲ್ಲ ಯೆಲ್ಲೋ ಬೋರ್ಡ್ ಕ್ಯಾಬ್ಗಳಿಗೆ ಫೇರ್ ಮೀಟರ್ ಅಳವಡಿಸುವುದನ್ನು ಸಾರಿಗೆ ಇಲಾಖೆ ಕಡ್ಡಾಯಗೊಳಿಸಿದೆ.
ಸಕ್ಕರೆ ಹಾಗೂ ಬೆಲ್ಲದ ಬೆಲೆಯಲ್ಲಿ ಏರಿಳಿತ ಕಂಡುಬಂದ ಬೆನ್ನಲ್ಲೇ ನಗರದ ಕೆಲವು ಹೋಟೆಲ್ಗಳು ಹಾಗೂ ಟೀ ಸ್ಟಾಲ್ಗಳಲ್ಲಿ ಕಾಫಿ ಮತ್ತು ಟೀ ದರವನ್ನು ಸದ್ದಿಲ್ಲದೆ ₹2ರಿಂದ ₹3ರವರೆಗೆ ಹೆಚ್ಚಿಸಲಾಗಿದೆ.
ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಮೆಜೆಸ್ಟಿಕ್) ರೈಲು ನಿಲ್ದಾಣದಲ್ಲಿ ಭಾನುವಾರ ತಡರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಪ್ಲಾಟ್ಫಾರ್ಮ್ ನಂ. 1 ರಲ್ಲಿ ನಿಲ್ಲಿಸಲಾಗಿದ್ದ ರೈಲಿನ ಖಾಲಿ ಬೋಗಿಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಬೆಂಗಳೂರು: ಕೇಂದ್ರ ಸರ್ಕಾರದ ಏಳನೇ ಕರಡು ಅಧಿಸೂಚನೆ ಆಧಾರಿತ ಡಾ. ಕೆ. ಕಸ್ತೂರಿ ರಂಗನ್ ಸಮಿತಿ ವರದಿ ಮತ್ತು ರಾಜ್ಯದಲ್ಲಿ ಆವರಿಸಿರುವ ಬರ ಪರಿಸ್ಥಿತಿ ಕುರಿತು ಚರ್ಚಿಸಲು ಸೆಪ್ಟೆಂಬರ್ 21 ರಿಂದ 23 ರವರೆಗೆ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲು ಸಚಿವ ಸಂಪುಟ ನಿರ್ಧರಿಸಿದೆ. ಇದರ ಜೊತೆಗೆ, ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಚರ್ಚಿಸಿ, ಕೇಂದ್ರಕ್ಕೆ ಆರ್ಥಿಕ ನೆರವು ಕೋರಿ ಪ್ರಸ್ತಾವನೆ ಕಳುಹಿಸುವ ಬಗ್ಗೆಯೂ ಚರ್ಚಿಸಲಾಗುವುದು. “ಹಿಂದಿನ ಅಧಿವೇಶನದಲ್ಲಿ ರೈತರು […]
ಕಿರುತೆರೆಯ ಜನಪ್ರಿಯ ನಟಿ ಆಸಿಯಾ ಫಿರ್ದೋಸ್ ತಮ್ಮ ಮನದಾಳದ ಪಾತ್ರ ಶ್ರಾವಣಿಗೆ ಭಾವುಕ ವಿದಾಯ ಹೇಳಿದ್ದಾರೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ತನ್ನ ಟಿವಿ ಪಯಣವನ್ನು ಮುಗಿಸಿದ ಬೆನ್ನಲ್ಲೇ ನಟಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹೃದಯಸ್ಪರ್ಶಿ ಬರಹವೊಂದನ್ನು ಹಂಚಿಕೊಂಡಿದ್ದಾರೆ.
ರಸ್ತೆ ಕಾಮಗಾರಿ ವೇಳೆ ಗ್ಯಾಸ್ ಪೈಪ್ಗೆ ಹಾನಿಯಾದ ಪರಿಣಾಮ ಅನಿಲ ಸೋರಿಕೆಯಾಗಿ ಆತಂಕದ ವಾತಾವರಣ ನಿರ್ಮಾಣವಾಗಿರುವ ಘಟನೆ ಎಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹಜ್ ಯಾತ್ರೆಗೆ ಆಯ್ಕೆಯಾಗಿರುವ ಯಾತ್ರಿಕರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯವು ಮಹತ್ವದ ಸೂಚನೆ ನೀಡಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಮೊಹಮದ್ ಮುಶಾಮೀರ್, ಅಬ್ದುಲ್ ಶಪ್ಪನ್, ಮೊಹ್ಮದ್ ರಿಜ್ವಾನ್, ನಿಯಾಜ್, ಕಲಂದರ್ ವಿರುದ್ಧ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ತಮ್ಮ ಮೇಲೆ ನಡೆದ ಮಾರಣಾಂತಿಕ ಹಲ್ಲೆಯ ಕುರಿತು ಮಂಜುನಾಥ್ ಹವೇಲಿ ಅವರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಗೌರಿ-ಗಣೇಶ ಹಬ್ಬ ಹಾಗೂ ವಾರಾಂತ್ಯದ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಸೆಪ್ಟೆಂಬರ್ 11ರಿಂದ 13ರವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಪ್ರದೇಶಗಳಿಗೆ ಒಟ್ಟು 2,400 ಹೆಚ್ಚುವರಿ ಬಸ್ಗಳನ್ನು ಕಾರ್ಯಾಚರಣೆಗೆ ತರಲಾಗುತ್ತಿದೆ.
ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯನ್ನು ತಡೆಗಟ್ಟುವ ಉದ್ದೇಶ ಹೊಂದಿರುವ ‘ಬೇಡಾ ಬ್ರೋ’ ಮತ್ತು ‘ರೈಸ್’ ಅಭಿಯಾನಗಳ ಭಾಗವಾಗಿ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಇಲ್ಲಿನ ಶಿಕ್ಷಣ ಸಂಸ್ಥೆಗಳ ಸುತ್ತಲೂ ತಪಾಸಣೆ ತೀವ್ರಗೊಳಿಸಿದ್ದಾರೆ.