ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಆಯಂಡ್‌ ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಬಳ್ಳಾರಿ ಜೈಲಿನಿಂದ ವಿಚಾರಣೆಗೆ ದರ್ಶನ್ ಪರಪ್ಪನ ಅಗ್ರಹಾರದಿಂದ ಪವಿತ್ರಾ ಗೌಡ ವಿಚಾರಣೆಗೆ ಹಾಜರಾಗಿದ್ದರು.

ಇಂದು ಪ್ರಕರಣ ಸಂಬಂಧ ವಿಚಾರಣೆ ನಡೆಸಿ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಸೆ.30ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದೆ.

ಬೆನ್ನು ನೋವೆಂದು ಚೇರ್‌ ಕೇಳಿದರೂ ಕೊಟ್ಟಿಲ್ಲ, ಸ್ನೇಹಿತರ ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂದು ಕೋರ್ಟ್‌ಗೆ ದರ್ಶನ್‌ ಪರ ವಕೀಲರು ಹೇಳಿದ್ದಾರೆ. ಇದಕ್ಕೆ ನ್ಯಾಯಾಧೀಶರು ಅಗತ್ಯ ಸೌಲಭ್ಯವನ್ನು ನೀಡುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.