ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳ ತಂಡಕ್ಕೆ ಮತ್ತೆ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆಗೊಂಡಿದ್ದಾರೆ. ದಕ್ಷ ಮತ್ತು ಪ್ರಮಾಣಿಕ ಅಧಿಕಾರಿ ಎಂದು ಖ್ಯಾತಿ ಗಳಿಸಿದ್ದ ಗಿರೀಶ್ ನಾಯ್ಕ್ ಅವರು ದರ್ಶನ್ ಮತ್ತು ಆತನ ಸಹಚರರನ್ನು ಬಂಧಿಸುವಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು.
ಕೊಲೆಯಾದ ಕೇವಲ ಒಂದು ವರೆ ದಿನದಲ್ಲಿಯೇ 13 ಜನರ ಎಡೆಮುರಿ ಕಟ್ಟಿದ್ದ ಗಿರೀಶ್ರನ್ನು ದಿಢೀರ್ನೇ ವರ್ಗಾವಣೆ ಮಾಡಲಾಗಿತ್ತು. ಈ ವಿಚಾರ ಎಲ್ಲೆಡೆ ಸುದ್ದಿಯಾಗಿ ಜನಾಕ್ರೋಶ ಕೂಡ ವ್ಯಕ್ತವಾಗಿತ್ತು ಈ ಹಿನ್ನಲೆ ಮತ್ತೆ ಗಿರೀಶ್ ನಾಯ್ಕ್ರನ್ನು ಮತ್ತೆ ತನಿಖಾ ತಂಡಕ್ಕೆ ಸೇರ್ಪಡೆಗೊಳಿಸಿ ಸರ್ಕಾರ ಆದೇಶಿಸಿದರ.
ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಹಾಗೂ ಎಸಿಪಿ ಚಂದನ್ ಆರೋಪಿ ದರ್ಶನ್ನನ್ನು ಮೈಸೂರಿನಿಂದ ಕರೆತಂದಿದ್ದರು. ಗಿರೀಶ್ ನಾಯ್ಕ್ ಮೊದಲಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು.
ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಗಿರೀಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಇದೇ ವೇಳೆ ದರ್ಶನ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಮರ್ಡರ್ ನಡೆದಿದೆ. ನಂತರ ಮತ್ತೆ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಆ ಬಳಿಕ ಎಸಿಪಿ ಚಂದನ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಆರೋಪಿಗಳ ಹೆಚ್ಚಿನ ವಿಚಾರಣೆ ಅಗತ್ಯತೆ ಹಿನ್ನೆಲೆ ಮತ್ತೆ ಗಿರೀಶ್ ನಾಯ್ಕ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 12 ಮಂದಿಯನ್ನು ಮತ್ತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಕೊಲೆ ಆರೋಪ ಎದುರಿಸುತ್ತಿರುವವರ ಪೈಕಿ 12 ಆರೋಪಿಗಳನ್ನು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಶನಿವಾರ ನ್ಯಾಯಾಲಯ ಆದೇಶ ಹೊರಡಿಸಿದೆ.

