ಬೆಂಗಳೂರು:  ಸಿಲಿಕಾನ್‌ ಸಿಟಿ ಹಲವು ಪ್ರದೇಶಗಳಲ್ಲಿ ಶನಿವಾರ ಮಧ್ಯಾಹ್ನ ಜೋರು ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸಿದರು. ರಾಜ್ಯಕ್ಕೆ ಮುಂಗಾರು ಆಗಮಿಸುತ್ತಿದೆ. ಇತ್ತ ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉಂಟಾಗಿದ್ದು, ಪರಿಣಾಮ ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನ 1 ಗಂಟೆಯಾಗುತ್ತಿದ್ದಂತೆ ಹನಿ ಮಳೆ ಆರಂಭವಾಗಿ, 2 ಗಂಟೆಗೆ ಮಳೆ ಜೋರಾಯಿತು.

ಗುಡುಗು, ಸಿಡಿಲಿನ ಜತೆ ಒಂದು ಗಂಟೆಗೂ ಹೆಚ್ಚು ಕಾಲ ಬಿದ್ದ ಮಳೆಗೆ ನಗರದ ರಸ್ತೆಗಳಲ್ಲಿ ನೀರು ನಿಂತಿದೆ. ಇದರಿಂದ ವಾಹನ ಸವಾರರು ಸಂಚಾರ ನಡೆಸಲಾಗದೆ ಸಮಸ್ಯೆ ಅನುಭವಿಸಿದರು. ಸಂಜೆ 4 ಗಂಟೆಯಾದರೂ ತುಂತುರು ಮಳೆ ಹಲವು ಪ್ರದೇಶಗಳಲ್ಲಿ ಮುಂದುವರೆದಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ವರುಣನ ಆಗಮನದ ಸೂಚನೆ ಇದೆ. ಬೆಂಗಳೂರಿನಲ್ಲಿ ವರುಣನ ಆರ್ಭಟ ಮತ್ತೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ