ಬೆಂಗಳೂರು: ನಿಯಮಗಳನ್ನು ಮೀರಿ ಎಲ್ಲೆಂದರಲ್ಲಿ ಪೊಲೀಸ್ ಚೌಕಿಗಳನ್ನು ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆ ಕೊಡುವುದು ಎಷ್ಟು ಸರಿ? ಎಂದು ಶಾಸಕ ವೇದವ್ಯಾಸ ಕಾಮತ್ ಅಧಿವೇಶನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾಹೀರಾತು ಟೆಂಡರ್ ಮತ್ತು ಟ್ರಾಫಿಕ್ ಪೊಲೀಸ್ ಬೂತ್ ಸ್ಥಾಪನೆ ಕುರಿತಾಗಿ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದೆ ಎಂದು ಆರೋಪಿಸಿ ಶಾಸಕ ವೇದವ್ಯಾಸ ಕಾಮತ್ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

