ಬೆಂಗಳೂರು: ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಪದವೀಧರ ಮತದಾರರು ಮತ್ತು ಶಿಕ್ಷಕರಿಗೆ ವಿಶೇಷ ರಜೆ ನೀಡಿ ರಾಜ್ಯ ಸರ್ಕಾರದಿಂದ ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ.
ರಾಜ್ಯದಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಸೇರಿದಂತೆ ಒಟ್ಟು 6 ಕ್ಷೇತ್ರಗಳಿಗೆ ಜೂ.3ಕ್ಕೆ ಚುನಾವಣೆ ನಿಗದಿಯಾಗಿದೆ. ಇತ್ತ ವಿಧಾನ ಪರಿಷತ್ ಚುನಾವಣೆ ಗೆಲ್ಲೋಕೆ ದೋಸ್ತಿ ನಾಯಕರು ಮೊದಲ ಸಮನ್ವಯ ಸಭೆ ನಡೆಸಿದರು. ಸಭೆಯಲ್ಲಿ ಜೂನ್ 3ರಂದು ನಡೆಯುವ ಶಿಕ್ಷಕ, ಮತ್ತು ಪದವೀಧರ ಕ್ಷೇತ್ರಗಳನ್ನ ಗೆಲ್ಲೋಕೆ ರಣತಂತ್ರ ರೂಪಿಸಲಾಗಿದೆ.
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಅಶ್ವತ್ಥ್ ನಾರಾಯಣ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಸಭೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ವಾಗ್ದಾನ ಮಾಡೋದ್ರ ಜೊತೆಗೆ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿತ್ತು.

