Showing 20 of 1882 posts • Page 11 of 95
ಬೆಂಗಳೂರಿನ ಹಬ್ ಎಂದೇ ಕರೆಯಲ್ಪಡುವ ಎಲೆಕ್ಟ್ರಾನಿಕ್ ಸಿಟಿ ಹಂತ 1 ರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಅಗ್ನಿ ಅವಘಡದ ತೀವ್ರತೆಗೆ ಇಡೀ ಪ್ರದೇಶವೇ ದಟ್ಟವಾದ ಕಪ್ಪು ಹೊಗೆಯಿಂದ ಆವೃತವಾಗಿದೆ.
ಕೌಟುಂಬಿಕ ಕಲಹ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್ಮೆಂಟ್ನ ನಡೆದಿದೆ.
ಆಟೋ ಚಾಲಕನೊಬ್ಬ ಪ್ರಯಾಣಿಕರನ್ನು ಹೊತ್ತೊಯ್ಯುವಾಗ ರಸ್ತೆಯ ಮೇಲೆ ಗಮನ ಹರಿಸುವ ಬದಲು ಮೊಬೈಲ್ನಲ್ಲಿ ಸೋಶಿಯಲ್ ಮೀಡಿಯಾ ರೀಲ್ಸ್ ನೋಡುವುದರಲ್ಲಿ ಮಗ್ನನಾಗಿದ್ದ ವಿಡಿಯೋ ಈಗ ವೈರಲ್ ಆಗಿದೆ.
ವಿದೇಶಗಳಿಂದ ಅಕ್ರಮವಾಗಿ ನಕಲಿ ಸಿಗರೇಟ್ ಸಾಗಾಣಿಕೆ ಮಾಡುತ್ತಿದ್ದ ಜಾಲವನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಪತ್ತೆಹಚ್ಚಿ ತಂದೆ, ಮಗ ಸೇರಿ ಐವರನ್ನು ಬಂಧಿಸಿದ್ದಾರೆ.
ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ರಾಜಾರೋಷವಾಗಿ ಮೊಬೈಲ್ ಫೋನ್ ಮತ್ತು ಟೆಲಿವಿಷನ್ ಬಳಸುತ್ತಿರುವುದು ಬೆಳಕಿಗೆ ಬಂದಿದೆ.
ಬೆಂಗಳೂರಿನ ಜನನಿಬಿಡ ನಂದಿನಿ ಲೇಔಟ್ನಲ್ಲಿ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಭೀಕರವಾಗಿ ಅಪಘಾತಕ್ಕೀಡಾಗಿದೆ. ಲಾರಿ ವೇಗವಾಗಿ ಬಂದು ರಸ್ತೆ ಬದಿಗೆ ಅಪ್ಪಳಿಸುವಾಗ ಅದರ ಪಕ್ಕದಲ್ಲೇ ಇದ್ದ ಇಬ್ಬರು ಬೈಕ್ ಸವಾರರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಸಾಮಾನ್ಯ ಜನರನ್ನು ಉದ್ದೇಶಿಸಿ ಆಡಿರುವ ಮಾತುಗಳು ಈಗ ವಿವಾದದ ಕಿಚ್ಚು ಹಚ್ಚಿವೆ.
ಶ್ರೀ ಅಖಿಲ ಹವ್ಯಕ ಮಹಾಸಭೆಯು ನೀಡುವ ವಾರ್ಷಿಕ ವಿಶೇಷ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಮಾರ್ಚ್ 26 ಭಾನುವಾರದಂದು ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ನಡೆಯುವ 83ನೇಯ ವರ್ಷದ ಹವ್ಯಕ ಸಂಸ್ಥಾಪನೋತ್ಸವ ಕಾರ್ಯಕ್ರಮದಲ್ಲಿ 2025-26 ನೇಯ ಸಾಲಿನ ಪ್ರಶಸ್ತಿ ಪ್ರದಾನ ನಡೆಯಲಿದೆ.
ಸತತ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ ಈಗ ಪಾತಾಳಕ್ಕೆ ಕುಸಿಯುತ್ತಿದ್ದು, 1 ಲಕ್ಷ ರೂ. ಸನಿಹಕ್ಕೆ ಬರುವ ಹಾಗಿದೆ.
ಹಣದುಬ್ಬರ ಸಂಬಂಧಿತ ವಾರ್ಷಿಕ ಹೆಚ್ಚಳದ ಭಾಗವಾಗಿ ಏಪ್ರಿಲ್ 1 ರಿಂದ ರಾಜ್ಯಾದ್ಯಂತ ಟೋಲ್ ದರಗಳು 3-5% ರಷ್ಟು ಹೆಚ್ಚಾಗಲಿದ್ದು, ವಾಹನ ಬಳಕೆದಾರರು ಹೆಚ್ಚಿನ ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಮೂವರು ವೈದ್ಯರು ಜನದಟ್ಟಣೆಯ ರಸ್ತೆಯಲ್ಲಿ ಮದ್ಯ ಸೇವಿಸಿ ದ್ವಿಚಕ್ರ ವಾಹನ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯರ ಮೇಲೆ ಮೂಡುಬಿದಿರೆ ಪೊಲೀಸ್ ಇನ್ ಸ್ಪೆಕ್ಟರ್ ಸಂದೇಶ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.
ದೇವನಹಳ್ಳಿಯ ಹೊರವಲಯದ ರಾಣಿ ಕ್ರಾಸ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ, ವೇಗವಾಗಿ ಬಂದ ಲಾರಿಯೊಂದು ಪ್ರವಾಸಿ ಟೆಂಪೋ ಟ್ರಾವೆಲರ್ (ಟಿಟಿ) ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಿಟಿಎಂ ರಸ್ತೆಯಲ್ಲಿ ಟ್ರಿಪಲ್ ರೈಡಿಂಗ್ ಕಂಡುಬಂದಿದ್ದು, ಕೆಲವರು ಹೆಲ್ಮೆಟ್ ಧರಿಸಿಲ್ಲ. ಆಘಾತಕಾರಿ ಸಂಗತಿಯೆಂದರೆ, ಒಬ್ಬ ವ್ಯಕ್ತಿ ಬಿಯರ್ ಬಾಟಲಿಯನ್ನು ಹಿಡಿದುಕೊಂಡು ಬೈಕ್ ಚಲಾಯಿಸುತ್ತಿದ್ದ, ಮತ್ತು ಹಿಂಬದಿ ಸವಾರ ಬಹಿರಂಗವಾಗಿ ಮದ್ಯಪಾನ ಮಾಡುತ್ತಿದ್ದ, ಯಾವುದೇ ಭಯ ಅಥವಾ ಜವಾಬ್ದಾರಿಯಿಲ್ಲದೆ ಸಾರ್ವಜನಿಕವಾಗಿ ಅಜಾಗರೂಕ ಕೈ ಸನ್ನೆಗಳನ್ನು ಮಾಡುತ್ತಿದ್ದಾನೆ.
ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಯುಗಾದಿ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಅಂಗವಾಗಿ ಅಪ್ಪು ಉತ್ಸವ ಮತ್ತು ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಮಾರ್ಚ್ 15ರ ಭಾನುವಾರದಂದು ರಾಮಮೂರ್ತಿ ನಗರದ ನಾಟ್ಯ ಪ್ರಿಯ ಆಡಿಟೋರಿಯಂ ನಲ್ಲಿ ಬೆಳಗ್ಗೆ 9 ಗಂಟೆಯಿಂದ ರಾತ್ರಿ 9:00ವರೆಗೆ ನಿರಂತರವಾಗಿ ಅದ್ದೂರಿಯಾಗಿ ನಡೆಸಲಾಯಿತು.
ಹೆಚ್.ಬಿ.ಆರ್ ಬಡಾವಣೆಯಲ್ಲಿರುವ ಕಂಪ್ಯೂಟರ್ ಹಾರ್ಡ್ವೇರ್ ಮಳಿಗೆಯೊಂದಕ್ಕೆ ಬುರ್ಖಾ ಧರಿಸಿ ನುಗ್ಗಿದ ತಂದೆ-ಮಗನ ಜೋಡಿ ಸುಮಾರು 80 ಲಕ್ಷ ರೂಪಾಯಿ ಮೌಲ್ಯದ ಬಿಡಿಭಾಗಗಳನ್ನು ಕಳ್ಳತನ ಮಾಡಿದ್ದಾರೆ.
ಮಹಿಳೆಯರಲ್ಲಿ ಉದ್ಯಮಶೀಲತೆಯನ್ನು ಅಭಿವೃದ್ಧಿಪಡಿಸುವ ತರಬೇತಿ ಕಾರ್ಯಕ್ರಮಕ್ಕೆ ಇಲ್ಲಿನ ಮದನಾಯಕನಹಳ್ಳಿ ಗ್ರಾಮದ ಬಸವೇಶ್ವರ ಲೇಔಟ್ನಲ್ಲಿ ಚಾಲನೆ ನೀಡಲಾಯಿತು.
ಜೆಪ್ಟೋ ಮೂಲಕ ಡೆಲಿವರಿ ಮಾಡಲಾದ ಆಮುಲ್ ಹಾಲಿನ ಪ್ಯಾಕೆಟ್ ಅಸಹಜವಾಗಿ ಉಬ್ಬಿರುವುದು ಇತ್ತೀಚೆಗೆ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಕಂಡುಬಂದಿದೆ.
ಇಸ್ರೇಲ್ ಹಾಗೂ ಇರಾನ್ ಯುದ್ಧದಿಂದ ಬೆಂಗಳೂರು ಸೇರಿದಂತೆ ಎಲ್ಲೆಡೆ ಗ್ಯಾಸ್ ಸಮಸ್ಯೆ ಎದುರಾದ ಬೆನ್ನಲ್ಲೇ ಇದೀಗ ಪೆಟ್ರೋಲ್ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 2 ರೂ ಏರಿಕೆಯಾಗಿದೆ. ಲೀಟರ್ಗೆ 106 ರೂಪಾಯಿ ಇದ್ದ ಪೆಟ್ರೋಲ್ ದರ 108.50 ರೂಪಾಯಿಗೆ ಏರಿಕೆಯಾಗಿದೆ. ಇನ್ನು 91 ರೂಪಾಯಿ ಇದ್ದ ಡೀಸೆಲ್ ದರ ಇದೀಗ 93.50 ರೂಪಾಯಿ ಏರಿಕೆ ಮಾಡಲಾಗಿದೆ.