Showing 20 of 1883 posts • Page 42 of 95
ನಗರದಲ್ಲಿ ವಾಹನ ದಟ್ಟಣೆಯಿಂದ ಆ್ಯಂಬುಲೆನ್ಸ್ಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದಕ್ಕೆ ಟ್ರಾಫಿಕ್ ಪೊಲೀಸರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಅದೇನೆಂದರೆ ಆ್ಯಂಬುಲೆನ್ಸ್ಗಳ ಸುಗಮ ಸಂಚಾರಕ್ಕಾಗಿ ಇ-ಪಾತ್ ಆ್ಯಪ್ ಸಿದ್ಧಪಡಿಸಿದ್ದು, ಬಿಡುಗಡೆಗೆಯೊಂದೇ ಬಾಕಿ ಇದೆ.
ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ನಾನು ಸತ್ತ ಬಳಿಕ ನನ್ನ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಬಾರದು ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಬೆಂಗಳೂರಿನ ಪ್ರಶಾಂತ್ ಲೇಔಟ್ ನಲ್ಲಿರುವ ಪಿಜಿ ಯೊಂದರಲ್ಲಿ ನಡೆದಿದೆ.
ಕಳೆದ ವರ್ಷಕ್ಕಿಂತ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ದಸರಾ ಹಬ್ಬ ಆಚರಣೆ ಮಾಡಲಾಗುತ್ತಿದೆ. ಕರ್ನಾಟಕ ಸಾರಿಗೆ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 9 ರಿಂದ ಅಕ್ಟೋಬರ್ 12 ರವರೆಗೆ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು.
ಬಿಎಂಎಸ್ ಕಾಲೇಜು, ಎಂ.ಎಸ್.ರಾಮಯ್ಯ ಕಾಲೇಜು ಮತ್ತು ಬಿಐಟಿ ಕಾಲೇಜುಗಳಿಗೆ ಇಂದು ಬಾಂಬ್ ಬೆದರಿಕೆ ಬಂದಿದ್ದು, ಕ್ಯಾಂಪಸ್ ಗಳಲ್ಲಿ ಆತಂಕ ಸೃಷ್ಟಿಯಾಗಿದೆ.
ರೇಣುಕಾಸ್ವಾಮಿ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್, ಪವಿತ್ರಾ ಸೇರಿ ನಾಲ್ವರ ಬೇಲ್ ಅರ್ಜಿ ವಿಚಾರಣೆ ಇಂದು ಸೆಷನ್ ಕೋರ್ಟ್ನಲ್ಲಿ ನಡೆಯಲಿದೆ.
ಬಿಎಂಟಿಸಿ ಬಸ್ ಪ್ರಯಾಣಿಕನೊಬ್ಬ ಸ್ಕ್ರೂಡ್ರೈವರ್ ಹಿಡಿದು ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಬೆದರಿಕೆ ಹಾಕಿರುವ ಘಟನೆ ಗುರುವಾರ ಸಂಜೆ ಹೊಸೂರು ಹೆದ್ದಾರಿಯ ಬಸ್ ಒಂದರಲ್ಲಿ ನಡೆದಿದೆ.
ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ದಾಳಿ ನಡೆದಿದ್ದು, ಸತತವಾಗಿ ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ.
ಭಾರೀ ಮಳೆಯಿಂದಾಗಿ ಮಹದೇವಪುರದ ಕಾರ್ತಿಕ್ ನಗರದ ಬಳಿಯ ಹೊರ ವರ್ತುಲ ರಸ್ತೆಯ (ಒಆರ್ಆರ್) ಒಂದು ಭಾಗ ಕುಸಿದಿದೆ.
ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಸಂಬಂಧ ಹಲವು ಮಾಹಿತಿ ಕಲೆ ಹಾಕಿರುವ ಸಿಐಡಿಯ ವಿಶೇಷ ತನಿಖಾ ದಳವು (ಎಸ್ಐಟಿ), ಗುರುವಾರ
ನಗರದ ನೃಪತುಂಗ ರಸ್ತೆಯಲ್ಲಿ 24×7 ಸಿಸಿಟಿವಿ ಕ್ಯಾಮೆರಾ, ಪ್ಯಾನಿಕ್ ಬಟನ್, ಬಸ್ ಮಾಹಿತಿ ಪ್ರದರ್ಶನ ಮತ್ತು ಮಳೆನೀರು ಕೊಯ್ಲು ವ್ಯವಸ್ಥೆ ಮತ್ತು ಸ್ಯಾನಿಟರಿ ಪ್ಯಾಡ್ ಡಿಸ್ಪೆನ್ಸರ್, ಚಾರ್ಜಿಂಗ್ ಪಾಯಿಂಟ್ ಗಳು ಮತ್ತು ತಿಂಡಿ ಮಾರಾಟ ಯಂತ್ರದಂತಹ ಸೌಲಭ್ಯಗಳನ್ನು ಒಳಗೊಂಡ ಸ್ಮಾರ್ಟ್ ಬಸ್ ನಿಲ್ದಾಣವನ್ನು ಬುಧವಾರ ಉದ್ಘಾಟಿಸಲಾಯಿತು.
ಹಾರೋಹಳ್ಳಿ ಮತ್ತು ಟಿ.ಕೆ.ಹಳ್ಳಿ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಮಿಂಚಿನಿಂದ ವಿದ್ಯುತ್ ಪರಿವರ್ತಕಗಳಿಗೆ ಹಾನಿಯಾಗಿರುವುದರಿಂದ ಬೆಂಗಳೂರಿನ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆಯಿದೆ.
ಬುಧವಾರ 32.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಅಕ್ಟೋಬರ್ ತಿಂಗಳಲ್ಲೇ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಚಲಿಸುತ್ತಿದ್ದ ಬಸ್ಸಿನಲ್ಲಿ ಬಿಎಂಟಿಸಿ ಕಂಡಕ್ಟರ್ ಗೆ ಚಾಕುವಿನಿಂದ ಇರಿದ 25 ವರ್ಷದ ಪ್ರಯಾಣಿಕನೊಬ್ಬ ತನ್ನ ಮಾಜಿ ಬಾಸ್ ಮೇಲೆ ಹಲ್ಲೆ ನಡೆಸಲು ಚಾಕು ಹಿಡಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತನ್ನ ಆನ್ಲೈನ್ ಸೇವೆಗಳನ್ನು ಅಕ್ಟೋಬರ್ 4 ರಿಂದ ಮೂರು ದಿನಗಳವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.
ರೆಫೆಕ್ಸ್ ಇವೀಲ್ಜ್ ಎಂಬ ಖಾಸಗಿ ಕಂಪನಿ ನಿರ್ವಹಿಸುತ್ತಿರುವ ಹೊಸ ಎಲೆಕ್ಟ್ರಿಕ್ ಏರ್ಪೋರ್ಟ್ ಟ್ಯಾಕ್ಸಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬುಧವಾರ ಚಾಲನೆ ನೀಡಿದರು.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವೋಲ್ವೋ ಬಸ್ಸಿನ ಬಾಗಿಲಿನಿಂದ ದೂರ ಸರಿಯುವಂತೆ ಕೇಳಿದ ಬಸ್ ಕಂಡಕ್ಟರ್ ಗೆ ಪ್ರಯಾಣಿಕನೊಬ್ಬ ಚಾಕುವಿನಿಂದ ಇರಿದ ಘಟನೆ ಮಂಗಳವಾರ ಸಂಜೆ ನಡೆದಿದೆ.
ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಆಚರಣೆಯ ಅಂಗವಾಗಿ ಬುಧವಾರ ಸಿಎಂ ಸಿದ್ದರಾಮಯ್ಯ ನಗರದ ಗಾಂಧಿ ಭವನದಲ್ಲಿ ಧ್ವಜಾರೋಹಣ ಹಾಗೂ ಗಾಂಧಿ ಪ್ರತಿಮೆಗೆ ಪುಷ್ಪಮಾಲೆ ಹಾಕುವ
ಆಟೋ ಹಿಂದೆ ಏನೆಲ್ಲಾ ಸಾಲುಗಳನ್ನು ಬರೆಸಿಕೊಂಡಿದ್ದವರನ್ನು ನಾವೆಲ್ಲರೂ ನೋಡಿದ್ದೇವೆ. ಕೆಲವರು ಹೆಂಡ್ತಿ ಬಗ್ಗೆ, ಕೆಲವರು ಪ್ರೀತಿ ಬಗ್ಗೆ, ಇನ್ನೂ ಕೆಲವರು ಜೀವನದ ಬಗ್ಗೆ ತಮ್ಮ ಆಟೋ ಹಿಂದೆ ಬರೆಸಿಕೊಳ್ಳುತ್ತಾರೆ.