ಶಂಕರಘಟ್ಟ, ಫೆ. ೨೧: ರಾಜ್ಯದ ಉನ್ನತ ಶಿಕ್ಷಣ ಇಲಾಖೆ, ಕುವೆಂಪು ವಿಶ್ವವಿದ್ಯಾಲಯ ಮತ್ತು ಅಮೇರಿಕಾದ ಅಥೆನ್ಸ್ ವಿಶ್ವವಿದ್ಯಾಲಯಗಳು ತ್ರಿಸದಸ್ಯ ಶೈಕ್ಷಣಿಕ – ಸಂಶೋಧನಾ ಕಾರ್ಯಕ್ರಮದ ಒಪ್ಪಂದವೊAದಕ್ಕೆ ಸಹಿ ಹಾಕಲಿವೆ.
ಮಂಗಳವಾರ ಸಂಜೆ ೮ ಗಂಟೆಗೆ ನಡೆಯಲಿರುವ ಆನ್ಲೈನ್ ಸಭೆಯಲ್ಲಿ ಮೂರೂ ಸಂಸ್ಥೆಗಳ ಗಣ್ಯರು, ತಜ್ಞರು ಭಾಗವಹಿಸಿದ್ದು ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳಿಗೆ ಪರಸ್ಪರ ಸಹಕಾರ ನೀಡುವ ಒಪ್ಪಂದವೊAದನ್ನು ಜಾರಿಗೊಳಿಸಲಿದ್ದಾರೆ ಈ ಒಪ್ಪಂದದಡಿ ಅಲಬಾಮದಲ್ಲಿರುವ ಅಥೆನ್ಸ್ ವಿವಿ ಮತ್ತು ಕುವೆಂಪು ವಿವಿಗಳ ನಡುವೆ ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳನ್ನು ಕೈಗೊಳ್ಳಲು ಬೋಧಕರು ಮತ್ತು ವಿದ್ಯಾರ್ಥಿಗಳ ವಿನಿಮಯ, ಉಭಯ ಸಂಸ್ಥೆಗಳಿAದ ವಿಶೇಷ ವಿಷಯಗಳ ಮೇಲೆ ಪದವಿಗಳ ಆರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.
ಆನ್ಲೈನ್ ಮೂಲಕ ಜರುಗುವ ಸಭೆಯಲ್ಲಿ ರಾಜ್ಯದ ಶಿಕ್ಷಣ ಸಚಿವರಾದ ಡಾ. ಸಿ. ಎನ್. ಅಶ್ವತ್ಥನಾರಾಯಣ್, ಕರ್ನಾಟಕ ಉನ್ನತ ಶಿಕ್ಷಣ ಮಂಡಳಿಯ ಉಪಾಧ್ಯಕ್ಷ ಪ್ರೊ. ಬಿ. ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರೊ. ಗೋಪಾಲಕೃಷ್ಣ ಜೋಶಿ, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯ್ಕ್ ಜಿ. ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ, ಕುಲಸಚಿವೆ ಅನುರಾಧ ಜಿ., ಪರೀಕ್ಷಾಂಗ ಕುಲಸಚಿವ ಪ್ರೊ. ಸಿ. ಎಂ. ತ್ಯಾಗರಾಜ್ ಹಾಗೂ ಅಲಬಾಮದ ಅಥೆನ್ಸ್ ವಿವಿಯ ಅಧ್ಯಕ್ಷ ಡಾ. ಫಿಲಿಪ್ ವೇ, ಉಪಾಧ್ಯಕ್ಷ ಡಾ. ಕ್ಯಾಥರೀನ್ ವೆಲ್ಬರ್ಗ್ ಸೇರಿದಂತೆ ಇತರ ತಜ್ಞರು, ಸದಸ್ಯರು ಹಾಜರಿರಲಿದ್ದಾರೆ.