ಬೆಳ್ತಂಗಡಿ : ಭಾರತವು ಕೃಷಿ ಮೂಲಾಧಾರಿತದೇಶವಾಗಿದೆ. ಈ ಮಣ್ಣಿನಲ್ಲಿ ಹುಟ್ಟಿ, ಕಲಿತು, ಎಷ್ಟೇಉನ್ನತ ಸ್ಥಾನಕ್ಕೆ ಏರಿದರೂ ಎಂದು ಎಸ್ ಡಿ ಎಂ ಸ್ನಾತಕೋತ್ತರಕೇಂದ್ರ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಕೆ ಆರ್ ಹೇಳಿದರು.
ಅವರು ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವಕಾಲೇಜು ಸಭಾಂಗಣದಲ್ಲಿಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗ, ಬೆಳ್ತಂಗಡಿ ನಗರ ಪಂಚಾಯತ್ ಹಾಗೂ ರುಡ್ ಸೆಟ್ ಸಿದ್ಧವನ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಡೆದ ಭತ್ತದ ಯಾಂತ್ರೀಕರಣ ಮತ್ತು ಸ್ವಯಂ ಉದ್ಯೋಗತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೃಷಿಯ ಮಹತ್ವವನ್ನು ಮರೆಯುತ್ತಿರುವ ಕಾಲಘಟ್ಟದಲ್ಲಿಅದನ್ನು ತಿಳಿಸುವ ಪ್ರಯತ್ನ ಈ ಕಾರ್ಯಕ್ರಮ ಮಾಡುತ್ತಿದೆ. ವಿದ್ಯಾರ್ಥಿಗಳು ಇದರ ಉದ್ದೇಶವನ್ನುಅರಿತು ಮುಂದುವರೆಯಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾಜಿ ಶಾಸಕ, ಗುರುದೇವ ಎಜುಕೇಶನಲ್ ಟ್ರಸ್ಟ್ಅಧ್ಯಕ್ಷರಾದ ಕೆ. ವಸಂತ ಬಂಗೇರ ಮಾತನಾಡಿದರು. ರೈತ ದೇಶದ ಬೆನ್ನೆಲುಬು. ಹೀಗಾಗಿ ರೈತರ ಮಕ್ಕಳು ಎಂದು ಹೇಳಿಕೊಳ್ಳಲು ಹೆಮ್ಮೆ ಪಡಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯಅತಿಥಿ, ಬೆಳ್ತಂಗಡಿ ನಗರ ಪಂಚಾಯತ್ ಮುಖ್ಯಾಧಿಕಾರಿ ಎಮ್ ಹೆಚ್ ಸುಧಾಕರ್ ಮಾತನಾಡಿದರು. ಕೃಷಿ ಹದಗೆಟ್ಟಾಗ ಸಂಸ್ಕೃತಿಯೂ ಕೆಡುತ್ತದೆ. ಹೀಗಾಗಿ ಭಾರತೀಯ ಸಂಸ್ಕೃತಿಯ ಉಳಿವಿಗೆ ಕೃಷಿ ಅತ್ಯಗತ್ಯಎಂದು ತಿಳಿಸಿದರು. ರುಡ್ ಸೆಟ್ ಸ್ವಉದ್ಯೋಗತರಬೇತಿ ಸಂಸ್ಥೆ ಉಪನ್ಯಾಸಕಿ ಅನಸೂಯ ಮಾತನಾಡಿ ವಾಣಿಜ್ಯ ಕೃಷಿಗೆ ಮರುಹೋಗುತ್ತಿರುವ ಇಂದಿನ ದಿನಗಳಲ್ಲಿ ಭತ್ತದಕೃಷಿಯ ಬಗ್ಗೆ ಗಮನಹರಿಸುವುದು ಮುಖ್ಯವಾಗಿದೆಎಂದು ನುಡಿದರು. ಉಡುಪಿಯ ಕೃಷಿ ಯಾಂತ್ರೀಕರಣಯೋಜನಾಧಿಕಾರಿಅಶೋಕ್ ಭತ್ತದಯಾಂತ್ರೀಕರಣ ಬಗೆಗಿನ ಮಾಹಿತಿ ನೀಡಿದರು
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸುಕೇಶ್ಕುಮಾರ್ ಕೆ. ಉಪಸ್ಥಿತರಿದ್ದರು. ಎಸ್ ಡಿ ಎಂ ಕಾಲೇಜಿನ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿ ಚೈತ್ರಾ ಸ್ವಾಗತಿಸಿದರು. ವಿದ್ಯಾರ್ಥಿ ಸಂತೋಷ್ಕಾರ್ಯಕ್ರಮ ನಿರೂಪಿಸಿದರು. ಶ್ರೀ ಗುರುದೇವ ಪದವಿ ಪೂರ್ವಕಾಲೇಜಿನ ಕನ್ನಡ ಉಪನ್ಯಾಸಕರಾಕೇಶ್ ವಂದಿಸಿದರು.