ಬೆಂಗಳೂರು: ತನ್ನ ಅಧೀನದಲ್ಲಿರುವ ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಈ ವರ್ಷದಿಂದ ಬಯೋಲಜಿ ವಿಷಯವನ್ನು ಸೇರ್ಪಡೆಗೊಳಿಸಲು ವಿಶ್ವೇಶ್ವರಯ್ಯ ತಾಂತ್ರಿಕ ಶಿಕ್ಷಣ ವಿಶ್ವವಿದ್ಯಾಲಯ ನಿರ್ಧರಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ವಿಟಿಯು ವೈಸ್ ಚಾನ್ಸೆಲರ್ ಕರಿಸಿದ್ದಪ್ಪ, ಕೊರೊನಾ ಸಾಂಕ್ರಾಮಿಕ ಬಂದಾಗಿನಿಂದ ಎಂಜಿನಿಯರ್ ಉದ್ಯೋಗಿಗಳು ವೈದ್ಯರ ಜೊತೆ ಸೇರಿಕೊಂಡು ಕಾರ್ಯ ನಿರ್ವಹಿಸುವ ಬೆಳವಣಿಗೆ ಕಂಡುಬಂಡಿತ್ತು. ವೈದ್ಯಕೀಯ ಉಪಕರಣ ಅಭಿವೃದ್ಧಿ, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಮತ್ತಿತರ ಕ್ಷೇತ್ರಗಳಲ್ಲಿ ವೈದ್ಯರ ಜೊತೆ ಎಂಜಿನಿಯರ್ ಗಳೂ ಒಂದಾಗಿದ್ದರು.
ಈ ನೂತನ ಸವಾಲನ್ನು ಸುಲಭವಾಗಿ ಮೆಟ್ಟಿನಿಲ್ಲಲು ಎಂಜಿನಿಯರಿಂಗ್ ಕಲಿಕೆಯ ಮಟ್ತದಲ್ಲೇ ಬಯೋಲಜಿ ವಿಷಯ ಸೇರ್ಪಡೆಗೊಳಿಸುವುದರಿಂದ ಪ್ರತಿ ಎಂಜಿನಿಯರಿಂಗ್ ವಿದ್ಯಾರ್ಥಿ ವೈದ್ಯಕೀಯ ಕ್ಷೇತ್ರದಲ್ಲಿ ಎದುರಾಗಲಿರುವ ಸವಾಲುಗಳನ್ನು ಎದುರಿಸಬಹುದು ಎಂದಿದ್ದಾರೆ.