ಮಂಗಳೂರು: ಅಶೋಕನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ಚಾಲನೆ ಹಾಗೂ ವಿಜ್ಞಾನ ದಿನವನ್ನು ಆಚರಿಸಲಾಯಿತು.
ವಿಜ್ಞಾನ ಪ್ರಯೋಗಾಲಯಕ್ಕೆ ಮಹಿಳಾ ಉದ್ಯಮಿ ಸಂಧ್ಯಾರಾಣಿ ಚಾಲನೆ ನೀಡಿದರು. ಸಂಪನ್ಮೂಲ ವ್ಯಕ್ತಿ ಬೃಂದಾ ಕೋಟ್ಯಾನ್ ಅವರ ನೇತೃತ್ವದಲ್ಲಿ ವಿಜ್ಞಾನ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತು ಮಾಹಿತಿ ನೀಡುವ ಪ್ರಾಯೋಗಿಕ ಕಾರ್ಯಕ್ರಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಮಾಹಿತಿ ನೀಡಿದರು. ಶಾಲಾ ಸಂಚಾಲಕಿಯಾದ ಶ್ರುತ ಜಿತೇಶ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಪ್ರಾಂಶುಪಾಲರಾದ ಜೋಯ್ ಜೀವನ್ ರೈ ಹಾಗೂ ಶೈಕ್ಷಣಿಕ ಸಂಯೋಜಕಿಯಾದ ಉಷಾ ಹೆಗ್ಡೆ ಉಪಸ್ಥಿತರಿದ್ದರು.
ಶಿಕ್ಷಣ ಸಂಸ್ಥೆಯಲ್ಲಿ ಅತ್ಯುತ್ತಮ ವಿಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಪೂರಕವಾಗಿ ವಿಶೇಷ ಕಾಳಜಿ ವಹಿಸಿ ಸ್ಥಾಪಿಸಲಾಗಿದೆ.