ಕ್ಯಾಂಪಸ್

ಎಸ್.ಡಿ.ಎಂ : ಸ್ವಾತಂತ್ರ‍್ಯದ ಮಹತ್ವ ಪ್ರವಹಿಸುವ ವಿದ್ಯಾರ್ಥಿ ಉಪನ್ಯಾಸ ಸರಣಿ

ಉಜಿರೆ : ಉಜಿರೆಯ ಎಸ್.ಡಿ.ಎಂ. ಸಂಸ್ಥೆಯಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಸ್ವಾತಂತ್ರ‍್ಯದ ಮಹತ್ವವನ್ನು ಮನದಟ್ಟುಗೊಳಿಸುವುದರೊಂದಿಗೆ ಭವಿಷ್ಯದ ಭಾರತವನ್ನು ಕಟ್ಟುವ ಚಿಂತನೆಗಳನ್ನು ಪ್ರವಹಿಸುವ ವಿದ್ಯಾರ್ಥಿ ಉಪನ್ಯಾಸ ಸರಣಿ ಗಮನ ಸೆಳೆಯುತ್ತಿದೆ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ವಿದ್ಯಾರ್ಥಿ ಉಪನ್ಯಾಸ ಸರಣಿ ಕಾರ್ಯಕ್ರಮವನ್ನು ಅಯೋಜಿಸುತ್ತಿದೆ. ಪ್ರತೀ ಸೋಮವಾರ ಮತ್ತು ಶುಕ್ರವಾರ ಆನ್ಲೈನ್ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ವಯಂ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ 75 ಸ್ವಾತಂತ್ರ‍್ಯ ಸೇನಾನಿಗಳು ಹಾಗೂ ಸಾಧಕರ ಜೀವನಗಾಥೆ ಮತ್ತು ಜೀವನ ಸಂದೇಶಗಳನ್ನು ಪ್ರವಹಿಸುವ ಉಪನ್ಯಾಸಗಳನ್ನು ನೀಡುತ್ತಾರೆ.

ಈ ಕುರಿತು ರಾಷ್ಟ್ರೀಯ ಸೇವಾ ಘಟಕದ ಯೋಜನಾಧಿಕಾರಿಗಳಾದ ಪ್ರಾಧ್ಯಾಪಕ ಲಕ್ಷ್ಮೀನಾರಾಯಣ ಮಾಹಿತಿ ಹಂಚಿಕೊಂಡರು. “ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ಸೇನಾನಿಗಳನ್ನು ನೆನೆಯುವ ಮತ್ತು ದೇಶಕ್ಕೆ ಅವರ ಕೊಡುಗೆಯನ್ನು ಸ್ಮರಿಸುವ ಅಪೂರ್ವ ಅವಕಾಶವಿದು. ಭವಿಷ್ಯದ ಸದೃಢ ಭಾರತವನ್ನು ಕಟ್ಟುವಲ್ಲಿ ವಿದ್ಯಾರ್ಥಿಗಳಿಗೆ ಸಾಧಕರ ಜೀವನಸಂದೇಶ ನಿಜಕ್ಕೂ ಪ್ರೇರಣೆಯಾಗಬಲ್ಲದು” ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಸಂಯೋಜನೆಯನ್ನು ಕಾಲೇಜಿನ ರಾಷ್ಟ್ರೀಯಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಅಧ್ಯಾಪಕರು ಲಕ್ಷ್ಮೀನಾರಾಯಣ ಮತ್ತು ಅಧ್ಯಾಪಕಿ ದೀಪ ಆರತಿ ನಿರ್ವಹಿಸುತ್ತಿದ್ದಾರೆ. ಘಟಕದ ವಿದ್ಯಾರ್ಥಿ ನಾಯಕರು ಮತ್ತು ಸ್ವಯಂ ಸೇವಕರು ಕಾರ್ಯಕ್ರಮದ ನೇತೃತ್ವ ವಹಿಸಿದ್ದಾರೆ. ಪ್ರಾಂಶುಪಾಲರು, ಅಧ್ಯಾಪಕ ವೃಂದದ ಸಹಕಾರ ಮತ್ತು ವಿದ್ಯಾರ್ಥಿ ಸಮೂಹದ ಸಾಮುಹಿಕ ಪ್ರಯತ್ನದೊಂದಿಗೆ ಯಶಸ್ವಿ ಸಂಚಿಕೆಗಳನ್ನು ಕಾಣುತ್ತಿದೆ.

Sneha Gowda

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

45 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

52 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

1 hour ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

2 hours ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

2 hours ago